Visakhapatnam: ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿ, ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ
ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ವಿಶಾಖಪಟ್ಟಣಂ, ಜನವರಿ, 31: ಆಂಧ್ರಪ್ರದೇಶ ಹೊಸ ರಾಜಧಾನಿ ಘೋಷಣೆಯಾಗಿದೆ. ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಿಸಿದರು.
ವೈಜಾಗ್ ಎಂದು ಜನಪ್ರಿಯವಾಗಿರುವ ವಿಶಾಖಪಟ್ಟಣಂ ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಹೇಳಿದರು.
I invite you to our beautiful state for the Andhra Pradesh Global Investors Summit to be held on the 3rd & 4th of March in Visakhapatnam.
— YS Jagan Mohan Reddy (@ysjagan) January 31, 2023
Experience the ease of doing business in our state and partake in our vibrant culture.
Welcome! #APGlS2023 #AndhraPradesh pic.twitter.com/i2WmrvpgV8
" ನಾನು ನಿಮ್ಮನ್ನು ಆಂಧ್ರಪ್ರದೇಶದ ರಾಜಧಾನಿಗೆ ಆಹ್ವಾನಿಸುತ್ತೇನೆ. ವಿಶಾಖಪಟ್ಟಣಂ ಹೊಸ ರಾಜಧಾನಿಯಾಗಲಿದೆ. ನಾನು ಕೂಡ ವಿಶಾಕಪಟ್ಟಣಕ್ಕೆ ನನ್ನ ಮನೆಯನ್ನು ಬದಲಾಯಿಸುತ್ತೇನೆ" ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದರು.

"ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಆಂಧ್ರಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ನಾನು ನಿಮ್ಮನ್ನು ನಮ್ಮ ಸುಂದರ ರಾಜ್ಯಕ್ಕೆ ಆಹ್ವಾನಿಸುತ್ತೇನೆ. ಸ್ವಾಗತ!" ಎಂದು ಟ್ವೀಟ್ ಮಾಡಿದ್ದಾರೆ.
2014 ರಲ್ಲಿ ಆಂಧ್ರಪ್ರದೇಶದಿಂದ ತೆಲಂಗಾಣವನ್ನು ಬೇರ್ಪಡಿಸಿ, ಹೊಸ ರಾಜ್ಯವನ್ನಾಗಿಸಿದಾಗ ತೆಲಂಗಾಣವು ಹೈದರಾಬಾದ್ ಅನ್ನು ತನ್ನ ರಾಜಧಾನಿಯಾಗಿ ಪಡೆಯಿತು.
2015 ರಲ್ಲಿ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಪ್ರದೇಶ ಸರ್ಕಾರವು ಹೈದರಾಬಾದ್ನಿಂದ ಮಧ್ಯಂತರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೃಷ್ಣಾ ನದಿಯ ದಡದಲ್ಲಿರುವ ಅಮರಾವತಿಯನ್ನು ಹೊಸ ರಾಜಧಾನಿಯಾಗಿ ರೂಪಿಸುವುದಾಗಿ ಘೋಷಿಸಿತ್ತು.
ನಂತರ 2020 ರಲ್ಲಿ, ರಾಜ್ಯವು ಮೂರು ರಾಜಧಾನಿಗಳನ್ನು ಘೋಷಿಸಿತ್ತು. ಕಾರ್ಯಾಂಗಕ್ಕೆ ವಿಶಾಖಪಟ್ಟಣಂ, ಶಾಸಕಾಂಗಕ್ಕೆ ಅಮರಾವತಿ ಮತ್ತು ನ್ಯಾಯಾಂಗಕ್ಕೆ ಕರ್ನೂಲ್ ಎಂದು ಹೇಳಲಾಗಿತ್ತು. ಈ ಯೋಜನೆಗೆ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು. ಬಳಿಕ, ಆ ಆದೇಶವನ್ನು ವಾಪಸ್ ಪಡೆದು, ಔಪಚಾರಿಕವಾಗಿ ಅಮರಾವತಿಯನ್ನೇ ರಾಜಧಾನಿಯನ್ನಾಗಿಸಿಕೊಂಡಿದೆ.
ಅಮರಾವತಿ ಆಪಾದಿತ ಭೂ ಹಗರಣದ ಕೇಂದ್ರವಾಗಿದೆ. ಹೀಗಾಗಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಪಕ್ಷದ ವೈಎಸ್ಆರ್ಸಿಪಿ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ತನಿಖೆಗೆ ಒತ್ತಾಯಿಸಿದೆ.
ಇನ್ನು, ಜಗನ್ ಮೋಹನ್ ರೆಡ್ಡಿ ಈ ಹಿಂದೆ ಘೋಷಿಸಿದಂತೆ ಮೂರು ರಾಜಧಾನಿ ಯೋಜನೆಗೆ ಅಂಟಿಕೊಂಡೆ ಕೆಲಸ ಮಾಡಲು ನಿರ್ಧರಿಸಿದ್ದು, ವಿಶಾಖಪಟ್ಟಣಂಗೆ ಸ್ಥಳಾಂತರವಾಗುವುದಾಗಿ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications