ಜುಲೈ 6ರಿಂದ ಬಾಗಿಲು ತೆರೆಯಲಿದೆ ತಾಜ್ ಮಹಲ್
ನವದೆಹಲಿ, ಜುಲೈ 05 : ವಿಶ್ವಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ವೀಕ್ಷಣೆಗೆ ಪ್ರವಾಸಿಗರಿಗೆ ಸೋಮವಾರದಿಂದ ಅವಕಾಶ ಸಿಗಲಿದೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್ ಡೌನ್ ಘೋಷಣೆಯಾದ ಬಳಿಕ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿತ್ತು.
ಜುಲೈ 6ರ ಸೋಮವಾರದಿಂದ ತಾಜ್ ಮಹಲ್ ವೀಕ್ಷಣೆಗೆ ಅವಕಾಶವನ್ನು ನೀಡಲಾಗುತ್ತದೆ. ಪ್ರವಾಸಿಗರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಮೃತ ಶಿಲೆಯಲ್ಲಿ ನಿರ್ಮಾಣಗೊಂಡಿರುವ ಸ್ಮಾರಕವನ್ನು ಮುಟ್ಟುವಂತಿಲ್ಲ.
ಒಂದು ದಿನಕ್ಕೆ 5 ಸಾವಿರ ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರವಾಸಿಗರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಸೂಚನೆ ನೀಡಲಾಗಿದೆ. ತಾಜ್ ಮಹಲ್ ಒಳಗೆ ಸ್ಯಾನಿಟೈಸ್ ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ.

ರಜೆ ದಿನಗಳಲ್ಲಿ ಸುಮಾರು 80 ಸಾವಿರ ಪ್ರಯಾಣಿಕರು ತಾಜ್ ಮಹಲ್ ವೀಕ್ಷಣೆ ಮಾಡಲು ಬರುತ್ತಿದ್ದರು. ಆದರೆ, ಈಗ ಹೆಚ್ಚು ಜನರು ಸೇರದಂತೆ ಎಚ್ಚರಿಕೆ ವಹಿಸಲು ಪ್ರವಾಸಿಗರ ಸಂಖ್ಯೆಗೆ ನಿರ್ಬಂಧ ವಿಧಿಸಲಾಗಿದೆ.
ತಾಜ್ ಮಹಲ್ ಜೊತೆಗೆ ದೆಹಲಿಯ ಕೆಂಪುಕೋಟೆಗೂ ಸೋಮವಾರದಿಂದ ಪ್ರವಾಸಿಗರು ಭೇಟಿ ನೀಡಬಹುದಾಗಿದೆ. ವೇಗವಾಗಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವಾಗ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
ಆಗ್ರಾದಲ್ಲಿ 1267 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ನವದೆಹಲಿಯಲ್ಲಿ 97,200 ಸೋಂಕಿತರು ಇದ್ದಾರೆ. ಇಂತಹ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವಾಲಯ ತಾಜ್ ಮಹಲ್, ಕೆಂಪುಕೋಟೆಗೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications