ಜುಲೈ 6ರಿಂದ ಬಾಗಿಲು ತೆರೆಯಲಿದೆ ತಾಜ್ ಮಹಲ್
ನವದೆಹಲಿ, ಜುಲೈ 05 : ವಿಶ್ವಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ವೀಕ್ಷಣೆಗೆ ಪ್ರವಾಸಿಗರಿಗೆ ಸೋಮವಾರದಿಂದ ಅವಕಾಶ ಸಿಗಲಿದೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್ ಡೌನ್ ಘೋಷಣೆಯಾದ ಬಳಿಕ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿತ್ತು.
ಜುಲೈ 6ರ ಸೋಮವಾರದಿಂದ ತಾಜ್ ಮಹಲ್ ವೀಕ್ಷಣೆಗೆ ಅವಕಾಶವನ್ನು ನೀಡಲಾಗುತ್ತದೆ. ಪ್ರವಾಸಿಗರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಮೃತ ಶಿಲೆಯಲ್ಲಿ ನಿರ್ಮಾಣಗೊಂಡಿರುವ ಸ್ಮಾರಕವನ್ನು ಮುಟ್ಟುವಂತಿಲ್ಲ.
ಒಂದು ದಿನಕ್ಕೆ 5 ಸಾವಿರ ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರವಾಸಿಗರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಸೂಚನೆ ನೀಡಲಾಗಿದೆ. ತಾಜ್ ಮಹಲ್ ಒಳಗೆ ಸ್ಯಾನಿಟೈಸ್ ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ.

ರಜೆ ದಿನಗಳಲ್ಲಿ ಸುಮಾರು 80 ಸಾವಿರ ಪ್ರಯಾಣಿಕರು ತಾಜ್ ಮಹಲ್ ವೀಕ್ಷಣೆ ಮಾಡಲು ಬರುತ್ತಿದ್ದರು. ಆದರೆ, ಈಗ ಹೆಚ್ಚು ಜನರು ಸೇರದಂತೆ ಎಚ್ಚರಿಕೆ ವಹಿಸಲು ಪ್ರವಾಸಿಗರ ಸಂಖ್ಯೆಗೆ ನಿರ್ಬಂಧ ವಿಧಿಸಲಾಗಿದೆ.
ತಾಜ್ ಮಹಲ್ ಜೊತೆಗೆ ದೆಹಲಿಯ ಕೆಂಪುಕೋಟೆಗೂ ಸೋಮವಾರದಿಂದ ಪ್ರವಾಸಿಗರು ಭೇಟಿ ನೀಡಬಹುದಾಗಿದೆ. ವೇಗವಾಗಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವಾಗ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
ಆಗ್ರಾದಲ್ಲಿ 1267 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ನವದೆಹಲಿಯಲ್ಲಿ 97,200 ಸೋಂಕಿತರು ಇದ್ದಾರೆ. ಇಂತಹ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವಾಲಯ ತಾಜ್ ಮಹಲ್, ಕೆಂಪುಕೋಟೆಗೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications