Volcanic Eruption: 12,000 ವರ್ಷಗಳ ಬಳಿಕ ಜ್ವಾಲಾಮುಖಿ ಸ್ಫೋಟ, ಭಾರತೀಯರಿಗೂ ಎದುರಾಯ್ತು ಆಪತ್ತು...
ಮನುಷ್ಯರು ಭೂಮಿ ಮೇಲಿಂದ ನಾಶವಾಗಿ ಹೋಗುವುದು ಇನ್ನೇನು ಖಚಿತವಾಗುತ್ತಿದೆ, ಯಾಕೆ ಅಂದ್ರೆ ಭೂಮಿಗೆ ಮತ್ತು ಪ್ರಕೃತಿಗೆ ಮನುಷ್ಯರು ನೀಡುತ್ತಿರುವ ತೊಂದರೆ ಈಗ ನಾನಾ ಸಮಸ್ಯೆಗೆ ದಾರಿ ಮಾಡಿಕೊಡುತ್ತಿದೆ. ಅದರಲ್ಲೂ ಪದೇ ಪದೇ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಕಾರಣ, ಈಗಾಗಲೇ ಸಾವಿರಾರು ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ ಮಾನವರು. ಇಂತಹ ಪರಿಸ್ಥಿತಿ ಇರುವಾಗ ವಿಪರೀತ ಮಳೆ, ವಿಪರೀತ ಚಳಿ, ವಿಪರೀತ ಬಿಸಿಲು ಮನುಷ್ಯರನ್ನು ಕಾಡುತ್ತಲೇ ಇದೆ. ಇದು ಸಾಲದು ಎಂಬಂತೆ ಇದೀಗ 12,000 ವರ್ಷಗಳ ಬಳಿಕ ಬೃಹತ್ ಜ್ವಾಲಾಮುಖಿಯೇ ದಿಢೀರ್ ಸ್ಫೋಟಗೊಂಡಿದೆ. ಇದರಿಂದ ಭಾರತಕ್ಕೂ ಅಪಾಯ ಎದುರಾಗಿದೆ...
ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಈ ವರ್ಷ ವಿಪರೀತ ಮಳೆ ಸುರಿದಿದ್ದು, ಆ ಮೂಲಕ ನೆರೆ ಹಾವಳಿಯಿಂದ ರೈತರು & ಸಾಮಾನ್ಯ ಜನರು ಕಂಗಾಲಾಗಿ ಹೋಗಿದ್ದಾರೆ. ಇದು ಸಾಲದು ಎನ್ನವಂತೆ ಹಲವು ರಾಜ್ಯಗಳಲ್ಲಿ ಬರಗಾಲ ಕೂಡ ಎದುರಾಗಿದೆ. ಹೀಗೆ ಪ್ರಾಕೃತಿಕವಾಗಿ ದೊಡ್ಡ ದೊಡ್ಡ ಸವಾಲುಗಳು ಎದುರಾಗಿರುವ ಸಮಯದಲ್ಲೇ ದಿಢೀರ್ ಜ್ವಾಲಾಮುಖಿ ಸ್ಪೋಟದ ಪರಿಣಾಮ ಭಯದ ವಾತಾವರಣ ಇದೀಗ ನಿರ್ಮಾಣವಾಗಿದೆ. ದಿಢೀರ್ 12,000 ವರ್ಷಗಳ ಬಳಿಕ ಜ್ವಾಲಾಮುಖಿ ಸ್ಫೋಟವಾಗಿದ್ದು, ಇದರಿಂದ ಭಾರತಕ್ಕೂ ಅಪಾಯ ಎದುರಾಗಿದೆ.

ಜ್ವಾಲಾಮುಖಿ ಭೀಕರ ಸ್ಫೋಟ...
ಹೌದು, ಇಥಿಯೋಪಿಯಾದ ಹೈಲಿ ಗುಬ್ಬಿ ಪರ್ವತದಲ್ಲಿ ಜ್ವಾಲಾಮುಖಿ ದಿಢೀರ್ ಸ್ಫೋಟಗೊಂಡಿದೆ. ಒಂದಲ್ಲ ಎರಡಲ್ಲ 12,000 ವರ್ಷಗಳ ಬಳಿಕ ಈ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಆಫ್ರಿಕಾದ ಇಥಿಯೋಪಿಯಾ ದೇಶದಲ್ಲಿ ಇರುವ ಹೈಲಿ ಗುಬ್ಬಿ ಪರ್ವತದ ಜ್ವಾಲಾಮುಖಿ ಮುನಿಸು ಇದೀಗ ನಮ್ಮ ದೇಶಕ್ಕೂ ಸಮಸ್ಯೆ ಮಾಡುತ್ತಿದೆ. ಭಾರತದ ಹಲವು ರಾಜ್ಯಗಳಿಗೆ ಜ್ವಾಲಾಮುಖಿ ಸ್ಫೋಟದ ನಂತರ ಉಂಟಾಗುವ ಬೂದಿಯಿಂದ ಸಮಸ್ಯೆ ಎದುರಾಗಿದ್ದು, ಈಗಾಗಲೇ ಎಚ್ಚರಿಕೆ ಸಂದೇಶವನ್ನ ಕೂಡ ರವಾನಿಸಲಾಗಿದೆ.
ಭಾರತದ ಈ ರಾಜ್ಯಗಳಲ್ಲಿ ಸಮಸ್ಯೆ...
ಇಥಿಯೋಪಿಯಾದ ಹೈಲಿ ಗುಬ್ಬಿ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡ ಬಳಿಕ ಸೃಷ್ಟಿಯಾದ ದೊಡ್ಡ ದೊಡ್ಡ ಬೂದಿಯ ಮೋಡಗಳು ಈಗ ಭಾರತ ಪ್ರವೇಶಿಸಿದ್ದು, ಗುಜರಾತ್ ಮೂಲಕ ಎಂಟ್ರಿ ಕೊಟ್ಟಿವೆ. ಹಾಗೂ ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಹರಿಯಾಣ & ಪಂಜಾಬ್ ಸೇರಿ ಸುತ್ತಮುತ್ತ ಇರುವ ಪ್ರದೇಶಗಳನ್ನ ಆವರಿಸಿವೆ. ಇದರಿಂದ ಈಗಾಗಲೇ ಸಾಕಷ್ಟು ಸಮಸ್ಯೆ ಎದುರಾಗಿದ್ದು, ಸಂಜೆ 7.30 ವೇಳೆಗೆ ಬೂದಿಯ ಮೋಡಗಳು ಸಂಪೂರ್ಣ ಭಾರತವನ್ನು ದಾಟಿ ಹೊರಗೆ ಹೋಗುವ ನಿರೀಕ್ಷೆ ಇದೆ. ಹೀಗಾಗಿ ಈಗಾಗಲೇ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜ್ವಾಲಾಮುಖಿ ಬೂದಿಯಿಂದ ಅರಬ್ ದೇಶಗಳೂ ಸೇರಿ ಮಧ್ಯಪ್ರಾಚ್ಯ ಹಾಗೂ ಯುರೋಪ್ನಲ್ಲಿ ಕೂಡ ಸಮಸ್ಯೆ ಸೃಷ್ಟಿಯಾಗುವ ಭೀತಿ ಮೂಡಿದೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ












Click it and Unblock the Notifications