2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸಂವಿಧಾನವನ್ನು ಉಳಿಸಲು ಮತ ಚಲಾಯಿಸಿ: ಅಖಿಲೇಶ್ ಯಾದವ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಆಡಳಿತವು ಗೆಲ್ಲುತ್ತಿದ್ದ ವಿರೋಧ ಪಕ್ಷದ ಅಭ್ಯರ್ಥಿಗಳು ಸೋಲುವಂತೆ ಮಾಡಿದೆ" ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲಕ್ನೋ, ಮಾರ್ಚ್ 13: 2024 ರ ಸಾರ್ವತ್ರಿಕ ಚುನಾವಣೆಯಲ್ಲಿ "ಸಂವಿಧಾನವನ್ನು ಉಳಿಸಲು" ಮತ ಚಲಾಯಿಸುವಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಜನರಲ್ಲಿ ಮನವಿ ಮಾಡಿದ್ದಾರೆ. ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಂಚನೆ ಮಾಡಿ ತಮ್ಮ ಪಕ್ಷದ ಅಭ್ಯರ್ಥಿಗಳು ಸೋಲುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.
"ಈ ಬಾರಿ, ಸಂವಿಧಾನವನ್ನು ಉಳಿಸಲು ನೀವೆಲ್ಲರೂ ಮತ ಚಲಾಯಿಸಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಆಡಳಿತವು ಗೆಲ್ಲುತ್ತಿದ್ದ ವಿರೋಧ ಪಕ್ಷದ ಅಭ್ಯರ್ಥಿಗಳು ಸೋಲುವಂತೆ ಮಾಡಿದೆ" ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಧಾಂಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ನ್ಯಾಮುಲ್ ಹಸನ್ 203 ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ ಆಡಳಿತದಿಂದ ಪರಾಭವಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಡೆಸುತ್ತಿರುವ ರಾಜ್ಯ ಆಡಳಿತದ ಅತಿಕ್ರಮಣದ ವಿರುದ್ಧ ಬುಲ್ಡೋಜರ್ ನೀತಿಯ ಕುರಿತು ಮಾತನಾಡಿರುವ ಅಖಿಲೇಶ್ ಯಾದವ್, ವಾರಣಾಸಿಯೊಂದರಲ್ಲೇ ಬಿಜೆಪಿಯವರಿಗೆ ಸೇರಿದ 20 ಸಾವಿರಕ್ಕೂ ಹೆಚ್ಚು ಅಕ್ರಮ ಕಟ್ಟಡಗಳಿವೆ, ಆದರೆ ಅವುಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬುಲ್ಡೋಜರ್ ನ್ಯಾಯ ಎಂಬ ಹೊಸ ನಿತಿಯನ್ನು ಅನೌಪಚಾರಿಕವಾಗಿ ಜಾರಿಗೆ ತಂದಿದೆ.
"ಬರೇಲಿಯಲ್ಲಿ ಸಮಾಜವಾದಿ ಪಕ್ಷದ ನಾಯಕ ಶಾಜಿಲ್ ಇಸ್ಲಾಂ ಅವರ ಪೆಟ್ರೋಲ್ ಪಂಪ್ ಅನ್ನು ಕೆಡವಲಾಗಿದೆ. ಆದರೆ ಅದೇ ನಗರದಲ್ಲಿ ಬಿಜೆಪಿ ವ್ಯಕ್ತಿಗಳಿಗೆ ಸೇರಿದ ಅಕ್ರಮ ನರ್ಸಿಂಗ್ ಹೋಮ್ಗಳು ಮತ್ತು ಪೆಟ್ರೋಲ್ ಪಂಪ್ಗಳಿವೆ ಅದನ್ನು ಮಾತ್ರ ಹಾಗೆಯೇ ಉಳಿಸಲಾಗಿದೆ. ಬಿಜೆಪಿ ನಾಯಕರ ಒಡೆಯನದ ಅಕ್ರಮ ಕಟ್ಟಡಗಳನ್ನು ಸರ್ಕಾರ ಯಾವಾಗ ನೆಲಸಮಗೊಳಿಸಲು ಮುಂದಾಗುತ್ತದೆ ಎಂಬುದನ್ನು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಅದಾನಿ ಗ್ರೂಪ್ನ ಆಪಾದಿತ ಹಣಕಾಸಿನ ಅಕ್ರಮಗಳ ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್ ಅವರು "ಎಲ್ಐಸಿ ಮತ್ತು ಎಸ್ಬಿಐ ನಷ್ಟವನ್ನು ಅನುಭವಿಸಿದೆ. ಆದರೆ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಲು ಇಡಿ ಮತ್ತು ಸಿಬಿಐ ಅನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications