ಮತದಾನದ ಮಸಿ ಬದಲಿಗೆ ಮಾರ್ಕರ್ ಪೆನ್ ಬಳಕೆ!
ನವದೆಹಲಿ, ನ.22: ಮತದಾನದ ವೇಳೆ ಬಳಸಲಾಗುವ ಮಸಿ ಬದಲಿಗೆ ಮಾರ್ಕರ್ ಪೆನ್ ಗಳನ್ನು ಬಳಸಲು ಕೇಂದ್ರ ಚುನಾವಣಾ ಆಯೋಗ ಯೋಜನೆ ಹಾಕಿಕೊಂಡಿದೆ. ಈ ಬಗ್ಗೆ ಪೂರ್ವ ತಯಾರಿ, ಪ್ರಯೋಗ ಹಾಗೂ ಪರೀಕ್ಷೆ ಮೈಸೂರಿನ ಕೇಂದ್ರದಲ್ಲಿ ಜಾರಿಯಲ್ಲಿದೆ.
ಮೈಸೂರಿನ ಲ್ಯಾಕ್ಸ್ ಮತ್ತು ಪೈಂಟ್ ವರ್ಕ್ಸ್ ಲಿಮಿಟೆಡ್ ಸಂಸ್ಥೆಯಿಂದ ತಯಾರಾಗುವ ಭಾರತ ಮಾತ್ರವಲ್ಲದೆ ವಿದೇಶಗಳಿಗೂ ರಫ್ತಾಗುತ್ತದೆ. ಈಗ ಬಳಕೆಯಲ್ಲಿರುವ ಇಂಕ್ ಹಾಗೂ ಬ್ರಷ್ ಗಳ ಬದಲಿಗೆ ಮಾರ್ಕರ್ ಪೆನ್ ಗಳನ್ನು ಬಳಸಲು ಆಯೋಗ ಬಯಸಿದ್ದು ಇದರ ಪ್ರಯೋಗ ಹಾಗೂ ಪರೀಕ್ಷೆ ಜಾರಿಯಲ್ಲಿದೆ ಎಂದು ಮೈಸೂರು ಪೈಂಟ್ಸ್ ಸಂಸ್ಥೆ ಹೇಳಿದೆ. [ಎನ್ನಾರೈಗಳಿಗೆ ಮತದಾನದ ಹಕ್ಕು, ಮೋದಿ ಸರ್ಕಾರದ ವಿಕ್ರಮ]

1962ರಲ್ಲಿ ಮೊದಲ ಬಾರಿಗೆ ದೇಶದ ಮತದಾನ ಪ್ರಕ್ರಿಯೆಯಲ್ಲಿ ಮೈಸೂರಿನಲ್ಲಿ ಮಾಡಿದ ಮಸಿಯನ್ನು ಬಳಸಲಾಯಿತು. ಅಂದಿನಿಂದ ಇಂದಿನ ವರೆಗೂ ಮಸಿ ಬಳಕೆ ಜಾರಿಯಲ್ಲಿದೆ. ಈಗ ಇತ್ತೀಚೆಗೆ ಸಾರ್ವಜನಿಕರು ಅದರಲ್ಲೂ ಯುವ ಸಮುದಾಯ ನೀಡಿದ ಅಭಿಪ್ರಾಯ ಸಂಗ್ರಹಿಸಿದ ಆಯೋಗ ಈ ಹೊಸ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ.
ಅಫ್ಘಾನಿಸ್ತಾನದಲ್ಲಿ ಮೊದಲು ಬಳಕೆ: ಮೈಸೂರಿನಲ್ಲಿ ತಯಾರಾದ ಮಾರ್ಕರ್ ಪೆನ್ ಗಳನ್ನು ಮೊದಲ ಬಾರಿಗೆ ಇತ್ತೀಚೆಗೆ ನಡೆದ ಅಫ್ಘಾನಿಸ್ತಾನದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಬಳಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೃಹತ್ ಪ್ರಮಾಣದಲ್ಲಿ ಪೆನ್ ತಯಾರಿಕೆ ಮಾಡಬೇಕಾಗಿರುವುದರಿಂದ ಮಾರ್ಕರ್ ಪೆನ್ ಬಳಕೆ ಬಗ್ಗೆ ತಕ್ಷಣಕ್ಕೆ ನಿರ್ಧಾರ ಸಾಧ್ಯವಿಲ್ಲ. ಇನ್ನಷ್ಟು ಪರೀಕ್ಷೆಗಳು ನಡೆಯಬೇಕಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications