ಹಲವು ದಾಖಲೆಗಳನ್ನು ಸೃಷ್ಟಿಸಲಿದೆ ಹಿಮಾಚಲ ಪ್ರದೇಶ ಚುನಾವಣೆ
ಶಿಮ್ಲಾ, ನವೆಂಬರ್ 2: ಹಿಮಾಚಲ ಪ್ರದೇಶ ವಿಧಾನಸಭೆಗೆ ಇದೇ ನವೆಂಬರ್ 9ರಂದು ಚುನಾವಣೆ ನಡೆಯಲಿದೆ. ವಿವಿಪ್ಯಾಟ್ ಮತಯಂತ್ರಗಳ ಬಳಕೆ, ವಿಶೇಷ ಚೇತನರು ಮತ್ತು ಮಹಿಳಾ ಸಿಬ್ಬಂದಿಗಳೇ ನಿರ್ವಹಿಸಲಿರುವ ಮತಗಟ್ಟೆ ಸೇರಿದಂತೆ ಹಲವು ಪ್ರಥಮಗಳಿಗೆ ಈ ಚುನಾವಣೆ ಸಾಕ್ಷಿಯಾಗಲಿದೆ.
ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪುಷ್ಪೇಂದ್ರ ರಜಪೂತ್ ಈ ಬಗ್ಗೆ ಹೇಳಿಕೆ ನೀಡಿದ್ದು, "ಪ್ರತೀ ಕ್ಷೇತ್ರದಲ್ಲಿ (ಒಟ್ಟು 68 ಕ್ಷೇತ್ರ) 2 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿಗಳೇ ನಿರ್ವಹಣೆ ಮಾಡಲಿದ್ದಾರೆ," ಎಂದು ಹೇಳಿದ್ದಾರೆ. ಇದೇ ವೇಳೆ ವಿಶೇಷ ಚೇತನರಿಗೆ 5 ಮತಗಟ್ಟೆಗಳ ಹೊಣೆ ನೀಡಲಾಗಿದೆ.

ಈ ಐತಿಹಾಸಿಕ ಸಾಧನೆಯಲ್ಲಿ ತೊಡಗಿಸಿಕೊಳ್ಳಲು ಇವರೆಲ್ಲಾ ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದು ಅವರು ಸಿಬ್ಬಂದಿಗಳ ಉತ್ಸಾಹವನ್ನು ಮೆಚ್ಚಿಕೊಂಡಿದ್ದಾರೆ.
ಇನ್ನು ಕಣ್ಣು ಕಾಣದವರಿಗೆ ಮತಪತ್ರಗಳನ್ನು ಬ್ರೈಲ್ ಲಿಪಿಯಲ್ಲಿ ನೀಡಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಮೂಲಕ ಕಣ್ಣು ಕಾಣದವರೂ ಯಾರದೇ ಸಹಾಯವಿಲ್ಲದೆ ಮತಚಲಾಯಿಸಬಹುದಾಗಿದೆ.
ಹೆಚ್ಚಿನ ವಿಶೇಷ ಚೇತನರು ಮತ್ತು ಹಿರಿಯರು ಮತಚಲಾಯಿಸುವ ಮತಗಟ್ಟೆಗಳನ್ನೂ ಚುನಾವಣಾ ಆಯೋಗ ಗುರುತು ಮಾಡಿಕೊಂಡಿದ್ದು ಅಲ್ಲಿ ಅವರಿಗೆ ವೀಲ್ ಚೇರ್ ಸೇರಿದಂತೆ ಅಗತ್ಯ ಸೌಲಭ್ಯಗಳು ಸಿಗಲಿವೆ.
"ಇದಲ್ಲದೆ ಶಸ್ತ್ರಾಸ್ತ್ರಗಳನ್ನು ಚುನಾವಣಾ ಸಂದರ್ಭದಲ್ಲಿ ವಾಪಸ್ ಪಡೆಯಲಾಗುತ್ತದೆ. ಅಂತರರಾಜ್ಯ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಶಾಂತಿಯುತ ಮತದಾನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು," ಎಂದು ರಜಪೂತ್ ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications