ಮುಗಿದ ಚುನಾವಣೆ, ಬೇಸಿಗೆ ರಜೆ: ತಿರುಪತಿಗೆ ಭಕ್ತರ ದಂಡು!
ಅಮರಾವತಿ, ಮೇ 19: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ 2024ರ ಮತದಾನ ಪೂರ್ಣಗೊಂಡಿದೆ. ಶಾಲೆಗಳಿಗೆ ಬೇಸಿಗೆ ರಜೆ ಇದೆ. ಆಂಧ್ರ ಪ್ರದೇಶ ರಾಜ್ಯದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಆದ್ದರಿಂದ ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಲೋಕಸಭೆ ಚುನಾವಣೆ, ಆಂಧ್ರ ಪ್ರದೇಶದಲ್ಲಿ ಚುನಾವಣೆ ಮುಗಿಯುವ ಮೊದಲು ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಪ್ರತಿದಿನ ಸಾಮಾನ್ಯವಾಗಿ ಸುಮಾರು 60 ಸಾವಿರ ಇತ್ತು. ಆದರೆ ಈಗ ಮತದಾನ ಮುಗಿಯುತ್ತಿದ್ದಂತೆಯೇ ರಾಜಕೀಯ ನಾಯಕರು, ಕಾರ್ಯಕರ್ತರು, ಭಕ್ತರು ಭಾರೀ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.

ಎಷ್ಟು ಭಕ್ತರ ಭೇಟಿ?; ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಾಹಿತಿ ಪ್ರಕಾರ ಬುಧವಾರ ಒಂದೇ ದಿನ 81,930 ಭಕ್ತರು, ಗುರುವಾರ 76,369 ಹಾಗೂ ಶುಕ್ರವಾರ 71,510 ಭಕ್ತರು ದರ್ಶನ ಪಡೆದಿದ್ದಾರೆ. ಭಕ್ತರನ್ನು ನಿಯಂತ್ರಿಸುವುದು ಟಿಟಿಡಿ ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದೆ.
ಭಕ್ತರು ಸಾಮಾನ್ಯ ಉಚಿತ ದರ್ಶನ ಪಡೆಯಲು 24 ತಾಸಿಗೂ ಹೆಚ್ಚು ಸಮಯ ಆಗುತ್ತಿದೆ. ಭಾನುವಾರ ರಜಾದಿನದಂದು ಇನ್ನಷ್ಟು ಭಕ್ತರು ಆಗಮಿಸಬಹುದು ಎಂದು ನಿರೀಕ್ಷೆ ಮಾಡಲಾಗಿದ್ದು, ಟಿಟಿಡಿ ಸಿಬ್ಬಂದಿ ಖುದ್ದು ಭಕ್ತರನ್ನು ನಿಯಂತ್ರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಕುಟುಂಬವೊಂದರ 6 ಸದಸ್ಯರು ಗುರುವಾರ ಬೆಳಗ್ಗೆ ತಿರುಪತಿಗೆ ತೆರಳಿದ್ದರು. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸಾಮಾನ್ಯ ದರ್ಶನ ಪಡೆದು ಮರಳಲು 30 ತಾಸು ಬೇಕಾಯಿತು ಎಂದು ಹೇಳಿದರು.
ಮೇ 13ರ ಸೋಮವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ನಡೆಯಿತು. ಈ ಹಂತದಲ್ಲಿ ಆಂಧ್ರ ಪ್ರದೇಶದ 25, ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಆಂಧ್ರ ಪ್ರದೇಶದಲ್ಲಿ 25 ಲೋಕಸಭಾ ಕ್ಷೇತ್ರ ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಮತದಾನ ಮೇ 13ರಂದು ನಡೆದಿದೆ. ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ, ಕೇರಳ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಆದ್ದರಿಂದ ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಏರಿಕೆಯಾಗಿದೆ.
ದಕ್ಷಿಣದ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇದೆ. ಮೇ 25ರ ಬಳಿಕ ಖಾಸಗಿ ಶಾಲೆಗಳು, ಜೂನ್ 1 ರಿಂದ ಸರ್ಕಾರಿ ಶಾಲಾ-ಕಾಲೇಜುಗಳು ಆರಂಭವಾಗಲಿವೆ. ಆದ್ದರಿಂದ ಇನ್ನು ಎರಡು ವಾರ ಜನರು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ದೇವರ ದರ್ಶನ ಮಾಡಲಿದ್ದು, ಭಕ್ತರ ಸಂಖ್ಯೆ ಹೆಚ್ಚಾಗಿದೆ.
ಕಲಬುರಗಿ-ತಿರುಪತಿ ವಿಮಾನ ಸೇವೆ: ಸ್ಟಾರ್ ಏರ್ ಸಂಸ್ಥೆ ಕಲಬುರಗಿಯಿಂದ ತಿರುಪತಿಗೆ ಹೋಗುವ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ವಾರದಲ್ಲಿ 4 ದಿನ ಕಲಬುರಗಿ ಮತ್ತು ತಿರುಪತಿ ನಡುವೆ ವಿಮಾನ ಸಂಚಾರ ನಡೆಸಲಿದೆ.
ಸೋಮವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಬೆಳಗಾವಿ-ಕಲಬುರಗಿ ನಡುವೆ ವಿಮಾನ ಹಾರಾಟ ನಡೆಸಲಿದ್ದು, ಈ ಮಾರ್ಗದ ವಿಮಾನಕ್ಕೆ ತಿರುಪತಿಯಲ್ಲಿ ನಿಲುಗಡೆ ನೀಡಲಾಗಿದೆ.
ಬೆಳಗಾವಿ-ಕಲಬುರಗಿ ನಡುವೆ ಸಂಚಾರ ನಡೆಸುವ ಎಸ್5-153 ವಿಮಾನ ಬೆಳಗಾವಿಯಿಂದ ಮಧ್ಯಾಹ್ನ 2.55ಕ್ಕೆ ಹೊರಟು, 4.05ಕ್ಕೆ ತಿರುಪತಿಯಲ್ಲಿ ಲ್ಯಾಂಡ್ ಆಗಲಿದೆ. ಬಳಿಕ ತಿರುಪತಿಯಿಂದ ಕಲಬುರಗಿಗೆ ಹಾರಲಿದೆ.
ಕಲಬುರಗಿ-ಬೆಳಗಾವಿ ನಡುವೆ ಸಂಚಾರ ನಡೆಸುವ ಎಸ್5-127 ವಿಮಾನ ಕಲಬುರಗಿಯಿಂದ ಸಂಜೆ 6.35ಕ್ಕೆ ಹೊರಟು 7.40ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಹೊರಟು ಬೆಳಗಾವಿಗೆ ಹೋಗಲಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications