ಇನ್ನು ಮುಂದೆ ವಿವಿಟಿಎಟಿ ಮತಯಂತ್ರ ಬಳಕೆ: ಚುನಾವಣಾ ಆಯೋಗ
ವಿವಿಪಿಎಟಿ ವ್ಯವಸ್ಥೆಯಿಂದ ಮತದಾರನು ತಾನು ಹಾಕಿದ ಮತವು ತನ್ನ ಆಯ್ಕೆಯ ಅಭ್ಯರ್ಥಿಗೆ ಸಂದಾಯವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.
ನವದೆಹಲಿ, ಮೇ 12: ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ವಿವಿಪಿಎಟಿ (ವೋಟರ್ ವೆರಿಫೆಯಬಲ್ ಪೇಪರ್ ಆಡಿಟ್ ಟ್ರಯಲ್ ಸಿಸ್ಟಂ) ಮಾದರಿಯ ಮತಯಂತ್ರಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಹೇಳಿದೆ.
ಮತಯಂತ್ರಗಳನ್ನು ತಿರುಚುವ ಆರೋಪಗಳು ಹೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ (ಮೇ 12) ಚುನಾವಣಾ ಆಯೋಗವು ಭಾರತದಲ್ಲಿ ಗುರುತಿಸಲ್ಪಟ್ಟ, ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಮುಖಂಡರ ಸಭೆ ನಡೆಸಿತು.

ಸಭೆಯಲ್ಲಿ ಮಾತನಾಡಿದ ಇಸಿ ಮುಖ್ಯಸ್ಥ ನಜೀಂ ಜೈದಿ, ಮತಯಂತ್ರಗಳ ತಿರುಚುವಿಕೆ ಕಪೋಲ ಕಲ್ಪಿತವೆಂದೂ, ಈ ಬಗ್ಗೆ ಕೇಳಿಬಂದಿರುವ ಆರೋಪಗಳು ನಿರಾಧಾರ ಎಂದೂ ಹೇಳಿತು.
ಅಲ್ಲದೆ, ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿಯ ಶಾಸಕರೊಬ್ಬರು ಮತಯಂತ್ರದ ಲೋಪ ದೋಷಗಳ ಪ್ರಾತ್ಯಕ್ಷಿಕೆಯನ್ನು ದೆಹಲಿ ವಿಧಾನಸಭೆಯಲ್ಲಿ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿಗಳು, ಈವರೆಗಿನ ಚುನಾವಣೆಗಳಲ್ಲಿ ಬಳಸಲಾದ ಮತಯಂತ್ರಗಳನ್ನು ಟ್ಯಾಂಪರ್ ಮಾಡಿ ತೋರಿಸುವಂತೆ ಸವಾಲು ಹಾಕಿದರು.
ಇಂಥ ಆರೋಪಗಳಿಂದ ಮುಕ್ತವಾಗಲು ಹಾಗೂ ಮತಯಂತ್ರಗಳ ಬಗೆಗಿನ ಗೊಂದಲವನ್ನು ನಿವಾರಣೆ ಮಾಡಲು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ವಿವಿಪಿಎಟಿ ವ್ಯವಸ್ಥೆಯುಳ್ಳ ಮತಯಂತ್ರಗಳನ್ನು ಉಪಯೋಗಿಸಲಾಗುವುದು ಎಂದು ಇಸಿ ಮುಖ್ಯಸ್ಥರು ತಿಳಿಸಿದರು.
ವಿವಿಪಿಎಟಿ ವ್ಯವಸ್ಥೆಯಿಂದ ಮತದಾರನು ತಾನು ಹಾಕಿದ ಮತವು ತನ್ನ ಆಯ್ಕೆಯ ಅಭ್ಯರ್ಥಿಗೆ ಸಂದಾಯವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications