ಇನ್ನು ಮುಂದೆ ವಿವಿಟಿಎಟಿ ಮತಯಂತ್ರ ಬಳಕೆ: ಚುನಾವಣಾ ಆಯೋಗ
ವಿವಿಪಿಎಟಿ ವ್ಯವಸ್ಥೆಯಿಂದ ಮತದಾರನು ತಾನು ಹಾಕಿದ ಮತವು ತನ್ನ ಆಯ್ಕೆಯ ಅಭ್ಯರ್ಥಿಗೆ ಸಂದಾಯವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.
ನವದೆಹಲಿ, ಮೇ 12: ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ವಿವಿಪಿಎಟಿ (ವೋಟರ್ ವೆರಿಫೆಯಬಲ್ ಪೇಪರ್ ಆಡಿಟ್ ಟ್ರಯಲ್ ಸಿಸ್ಟಂ) ಮಾದರಿಯ ಮತಯಂತ್ರಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಹೇಳಿದೆ.
ಮತಯಂತ್ರಗಳನ್ನು ತಿರುಚುವ ಆರೋಪಗಳು ಹೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ (ಮೇ 12) ಚುನಾವಣಾ ಆಯೋಗವು ಭಾರತದಲ್ಲಿ ಗುರುತಿಸಲ್ಪಟ್ಟ, ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಮುಖಂಡರ ಸಭೆ ನಡೆಸಿತು.

ಸಭೆಯಲ್ಲಿ ಮಾತನಾಡಿದ ಇಸಿ ಮುಖ್ಯಸ್ಥ ನಜೀಂ ಜೈದಿ, ಮತಯಂತ್ರಗಳ ತಿರುಚುವಿಕೆ ಕಪೋಲ ಕಲ್ಪಿತವೆಂದೂ, ಈ ಬಗ್ಗೆ ಕೇಳಿಬಂದಿರುವ ಆರೋಪಗಳು ನಿರಾಧಾರ ಎಂದೂ ಹೇಳಿತು.
ಅಲ್ಲದೆ, ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿಯ ಶಾಸಕರೊಬ್ಬರು ಮತಯಂತ್ರದ ಲೋಪ ದೋಷಗಳ ಪ್ರಾತ್ಯಕ್ಷಿಕೆಯನ್ನು ದೆಹಲಿ ವಿಧಾನಸಭೆಯಲ್ಲಿ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿಗಳು, ಈವರೆಗಿನ ಚುನಾವಣೆಗಳಲ್ಲಿ ಬಳಸಲಾದ ಮತಯಂತ್ರಗಳನ್ನು ಟ್ಯಾಂಪರ್ ಮಾಡಿ ತೋರಿಸುವಂತೆ ಸವಾಲು ಹಾಕಿದರು.
ಇಂಥ ಆರೋಪಗಳಿಂದ ಮುಕ್ತವಾಗಲು ಹಾಗೂ ಮತಯಂತ್ರಗಳ ಬಗೆಗಿನ ಗೊಂದಲವನ್ನು ನಿವಾರಣೆ ಮಾಡಲು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ವಿವಿಪಿಎಟಿ ವ್ಯವಸ್ಥೆಯುಳ್ಳ ಮತಯಂತ್ರಗಳನ್ನು ಉಪಯೋಗಿಸಲಾಗುವುದು ಎಂದು ಇಸಿ ಮುಖ್ಯಸ್ಥರು ತಿಳಿಸಿದರು.
ವಿವಿಪಿಎಟಿ ವ್ಯವಸ್ಥೆಯಿಂದ ಮತದಾರನು ತಾನು ಹಾಕಿದ ಮತವು ತನ್ನ ಆಯ್ಕೆಯ ಅಭ್ಯರ್ಥಿಗೆ ಸಂದಾಯವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications