ವ್ಯಾಪಂ ಹಗರಣದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಭೋಪಾಲ್, ಜುಲೈ 26 : ದೇಶದಾದ್ಯಂತ ಸುದ್ದಿಯಾಗಿರುವ ಮಧ್ಯಪ್ರದೇಶ ವೃತ್ತಿ ಪರೀಕ್ಷಾ ಮಂಡಳಿ (ಎಂಪಿಪಿಇಬಿ) ಹಗರಣ (ವ್ಯಾಪಂ ಹಗರಣ) ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬುಧವಾರ ತಿಳಿದುಬಂದಿದೆ.
ವ್ಯಾಪಂ ಹಗರಣದ ಆರೋಪಿ ಮಧ್ಯಪ್ರದೇಶದ ಮೊರೆನಾದಲ್ಲಿರುವ ಸ್ವಗೃಹದಲ್ಲಿ ಪ್ರವೀಣ್ ಯಾದವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.

ಈವರೆಗೆ ಈ ಪ್ರಕರಣದಲ್ಲಿ ವಿಚಾರಣೆಗಾಗಿ 2,000ಕ್ಕೂ ಅಧಿಕ ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಆದರೆ, ಈ ವರೆಗೂ ಹಗರಣದ ಯಾರೊಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿಲ್ಲ.
ವ್ಯಾಪಂ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು. ಅಲ್ಲಿಂದ ವ್ಯಾಪಂ ಸಂಬಂಧಪಟ್ಟಂತೆ ನಿಗೂಢ ಸಾವುಗಳು ಆರಂಭವಾಗಿದ್ದವು.












Click it and Unblock the Notifications