ವ್ಯಾಪಂ ಹಗರಣಕ್ಕೆ ಟ್ರೈನಿ ಮಹಿಳಾ ಎಸ್ ಐ ಬಲಿ
ಭೋಪಾಲ್, ಜುಲೈ,06: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (Vyapam) ನೇಮಕಾತಿ ಹಗರಣಕ್ಕೆ ಟ್ರೈನಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ರೊಬ್ಬರು ಬಲಿಯಾಗಿದ್ದಾರೆ. ಎಂದಿನಂತೆ ಆತ್ಮಹತ್ಯಾ ಪ್ರಕರಣ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವ್ಯಾಪಂ ಅವ್ಯವಹಾರದಲ್ಲಿ ಸಿಲುಕಿರುವ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಪುತ್ರ ಶೈಲೇಶ್ ಅವರು ಲಕ್ನೋದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಆನಂತರ ಸುಮಾರು 47ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಪಘಾತ, ಹೃದಯಾಘಾತ ಹೀಗೆ ಅನೇಕ ರೀತಿ ಸಾವು ಸಂಭವಿಸಿದೆ. ಸರಣಿ ಸಾವಿನ ಪಟ್ಟಿಗೆ ಮಹಿಳಾ ಎಸ್ ಐ ಟ್ರೈನಿ ಅನಾಮಿಕ ಖುಷ್ವಾಹ್ ಅವರ ಹೆಸರು ಸೋಮವಾರ ಸೇರ್ಪಡೆಗೊಂಡಿದೆ.[ನೇಮಕಾತಿ ಹಗರಣ ಆರೋಪಿ ನಿಗೂಢ ಸಾವು]
ಅನಾಮಿಕಾ ಅವರ ಮೃತದೇಹ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಫೆಬ್ರವರಿ 2015ರಲ್ಲಿ ನೇಮಕವಾಗಿದ್ದ ಈಕೆ ಮಧ್ಯಪ್ರದೇಶದ ಸಾಗರ್ ಪೊಲೀಸ್ ಅಕಾಡೆಮಿಯ ಹಾಸ್ಟೆಲ್ ನಲ್ಲಿ ತಂಗಿದ್ದರು.

ಮೂರು ದಿನ ಮೂರು ಸಾವು: ಪತ್ರಕರ್ತ ಅಕ್ಷಯ್ ಸಿಂಗ್ ಅವರು ಶನಿವಾರ ನಿಗೂಢವಾಗಿ ಕೊನೆಯುಸಿರೆಳೆದಿದ್ದರು. ವ್ಯಾಪಂ ಹಗರಣಕ್ಕೆ ಬಲಿಯಾದ ಕುಟುಂಬದ ಸದಸ್ಯರನ್ನು ಸಂದರ್ಶಿಸಲು ಅಕ್ಷಯ್ ತೆರಳಿದ್ದರು ಅದರೆ, ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದ ಅಕ್ಷಯ್ ಮತ್ತೆ ಮೇಲೇಳಲಿಲ್ಲ.
ಭಾನುವಾರದಂದು ಜಬಲ್ಪುರದ ಎನ್ ಎಸ್ ಮೆಡಿಕಲ್ ಕಾಲೇಜಿನ ಡೀನ್ ಆಗಿದ್ದ ಅರುಣ್ ಶರ್ಮ ಅವರು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.
ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್ ಅವರು ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಿದ್ದಾರೆ. ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್ ಪಕ್ಷ ಸಿಬಿಐ ತನಿಖೆಗೆ ಆಗ್ರಹಿಸಿದೆ.
ವಿಶೇಷ ತನಿಖಾ ದಳದ ಸದ್ಯದ ತನಿಖೆ ಪ್ರಕಾರ 23 ಜನ ನಿಗೂಢವಾಗಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಈ ಪೈಕಿ ಮಾ.25, 2015ರಂದು ಲಕ್ನೋದಲ್ಲಿರುವ ಪೂರ್ವಜರ ಮನೆಯಲ್ಲಿ ಸಾವನ್ನಪ್ಪಿದ್ದ ಶೈಲೇಶ್ ಅವರ ಹೆಸರು ಸೇರಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications