Waqf Bill: ಇಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ: ಅಂಗೀಕಾರಕ್ಕೆ ಸರ್ಕಾರ ಒತ್ತಾಯ- ಸಂಸತ್ತಿನಲ್ಲಿ ಕೋಲಾಹಲ ಸಾಧ್ಯತೆ
ದೆಹಲಿ ಏಪ್ರಿಲ್ 2: ವಿರೋಧ ಪಕ್ಷಗಳು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB)ನಂತಹ ಮುಸ್ಲಿಂ ಸಂಸ್ಥೆಗಳ ಪ್ರತಿರೋಧವನ್ನು ಧಿಕ್ಕರಿಸಿ ಬುಧವಾರ (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ನಿರ್ಧರಿಸಿದೆ.
ಹೌದು ವಕ್ಫ್ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. 8 ಗಂಟೆಗಳ ಚರ್ಚೆಯ ನಂತರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಚರ್ಚೆಗೆ ಪ್ರತಿಕ್ರಿಯಿಸಲಿದ್ದು, ಮಸೂದೆಯನ್ನು ಅಂಗೀಕರಿಸಲು ಮತದಾನ ನಡೆಯಲಿದೆ. ಬುಧವಾರವೇ ಲೋಕಸಭೆಯಲ್ಲಿ ಮಸೂದೆ ಅಂಗೀಕರಿಸಲು ಸಿದ್ಧತೆಗಳು ನಡೆಯುತ್ತಿವೆ. ಇದರ ನಂತರ ಈ ಅಧಿವೇಶನದ ಉಳಿದ ಎರಡು ದಿನಗಳಲ್ಲಿ ಅಂದರೆ ಗುರುವಾರ ಮತ್ತು ಶುಕ್ರವಾರ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ಮತ್ತು ಅಲ್ಲಿಂದ ಅಂಗೀಕಾರ ಪಡೆಯಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು, ಮಸೂದೆಯನ್ನು ಸದನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಆದರೆ ಇದನ್ನು ವಿರೋಧಿಸಿ ವಿರೋಧ ಪಕ್ಷಗಳು ಸಭೆಯಿಂದ ಹೊರ ನಡೆದಿವೆ. ಸರ್ಕಾರ ತನ್ನ ಕಾರ್ಯಸೂಚಿಯನ್ನು ಹೇರುತ್ತಿದೆ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಪ್ರತಿ ದಾಳಿ ಮಾಡಿದ್ದಾರೆ. 'ವಿರೋಧ ಪಕ್ಷದ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿಲ್ಲ. ಈ ಸದನವು ಕೇವಲ ಆಡಳಿತ ಪಕ್ಷಕ್ಕೆ ಸೇರಿದ್ದಲ್ಲ, ಅದು ಸಾರ್ವಜನಿಕರಿಗೆ ಸೇರಿದ್ದು' ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ವಾಗ್ದಾಳಿ ಮಾಡಿದ್ದಾರೆ. ಅಲ್ಲದೆ ಈ ತೀರ್ಮಾನದಲ್ಲಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
ವಕ್ಫ್ ಮಂಡಳಿ ಲೂಟಿಯ ತಾಣ: ಯೋಗಿ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸುವವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಮಂಡಳಿಗಳು ಸ್ವಾರ್ಥ ಹಿತಾಸಕ್ತಿಗಳು ಮತ್ತು ಲೂಟಿಯ ತಾಣಗಳಾಗಿ ಮಾರ್ಪಟ್ಟಿವೆ. ವಕ್ಫ್ ಮಸೂದೆಯನ್ನು ಅಂಗೀಕರಿಸಿದರೆ ರಾಜ್ಯದ ಅಭಿವೃದ್ಧಿಯಲ್ಲಿ ನಿಮಗೆ ನ್ಯಾಯಯುತ ಪಾಲು ಸಿಗುತ್ತದೆ. ಆದರೆ ನೀವು ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ವಿಶೇಷ ರಿಯಾಯಿತಿಗಳನ್ನು ನಿರೀಕ್ಷಿಸಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ. ಇದರರ್ಥ ನೀವು ಬೀದಿಗಳಲ್ಲಿ ನಮಾಜ್ ಮಾಡುವಂತಿಲ್ಲ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವಂತಿಲ್ಲ. ನೀವು ಹೀಗೆ ಮಾಡಿದರೆ, 'ಬುಲ್ಡೋಜರ್ ನ್ಯಾಯ'ವನ್ನು ಎದುರಿಸಲು ಸಿದ್ಧರಾಗಿರಿ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

ವಿರೋಧ ಪಕ್ಷಗಳ ವಿರೋಧ
ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಕಳೆದ ವರ್ಷ ಮಸೂದೆಯನ್ನು ಮಂಡಿಸುವಾಗ, ಸರ್ಕಾರವು ಅದನ್ನು ಎರಡೂ ಸದನಗಳ ಜಂಟಿ ಸಮಿತಿಗೆ ಕಳುಹಿಸಲು ಪ್ರಸ್ತಾಪಿಸಿತ್ತು. ಸಮಿತಿಯ ವರದಿಯ ನಂತರ, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮೂಲ ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿತ್ತು. ಇದಾದ ಬಳಿಕ ಲೋಕಸಭೆಯಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ನಿರ್ಧರಿಸಿದೆ.
ಆದರೆ ಇದಕ್ಕೆ ವಿರೋಧ ಪಕ್ಷ ವಿರೊಧ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿಲ್ಲ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಕಿಡಿ ಕಾರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಮಗ್ರ ಚರ್ಚೆ ನಡೆಸಬೇಕೆಂಬ ನಮ್ಮ ಬೇಡಿಕೆಯನ್ನು ಸ್ವೀಕರಿಸಲಾಗಿಲ್ಲ ಎಂದು ಅವರು ಹೇಳಿದರು. ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಚರ್ಚೆ ಬಯಸಿದ್ದೆವು, ಮತದಾರರ ಚೀಟಿ ವಿಷಯದ ಬಗ್ಗೆ ಚರ್ಚೆ ಬಯಸಿದ್ದೆವು, ಇತರ ಹಲವು ವಿಷಯಗಳ ಬಗ್ಗೆ ಚರ್ಚೆ ಬಯಸಿದ್ದೆವು, ಆದರೆ ಕೇಂದ್ರ ಸರ್ಕಾರ ವಿರೋಧ ಪಕ್ಷದ ಬೇಡಿಕೆಯನ್ನು ಒಪ್ಪಿಕೊಳ್ಳುತ್ತಿಲ್ಲ. ನಮಗೆ ಸಭಾತ್ಯಾಗ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ಗೊಗೊಯ್ ಹೇಳಿದರು.
ನಕಲಿ ಮತದಾರರ ಚೀಟಿಗಳ ವಿಷಯವನ್ನು ನಾವು ನಿರಂತರವಾಗಿ ಎತ್ತುತ್ತಿದ್ದೇವೆ, ಆದರೆ ಸರ್ಕಾರ ಅದರ ಬಗ್ಗೆ ಚರ್ಚಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ. ಸಂಸತ್ತಿನ ಸದನವು ಆಡಳಿತ ಪಕ್ಷಕ್ಕೆ ಮಾತ್ರವಲ್ಲ, ವಿರೋಧ ಪಕ್ಷಕ್ಕೂ ಅಷ್ಟೇ ಮುಖ್ಯವಾಗಿದೆ. ಮಣಿಪುರದ ನಿರ್ಣಯದ ಬಗ್ಗೆ, ವಕ್ಫ್ ತಿದ್ದುಪಡಿ ಮಸೂದೆಯ ನಂತರ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು ಅವರು ಹೇಳುತ್ತಿದ್ದಾರೆ. ನಾವು ಜನರಿಂದ ಆಯ್ಕೆಯಾಗಿದ್ದೇವೆ ಮತ್ತು ಅವರಿಗೆ ನಾವು ಜವಾಬ್ದಾರರು. ಕೇಂದ್ರ ಸರ್ಕಾರ ಹೇಳಿದಂತೆ ನಾವು ನಡೆಯಲು ಆಗುವುದಿಲ್ಲ ಎಂದಿದ್ದಾರೆ.
ಒಟ್ಟಿನಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಇಂದು ಮತದಾನ ನಡೆಯಲಿದ್ದು, ಫಲಿತಾಂಶ ಯಾವ ರೀತಿ ಬರಲಿದೆ ಎಂದು ಕಾದು ನೋಡಬೇಕಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications