ಶಿವಕಾಶಿ ಪಟಾಕಿ ಸ್ಫೋಟ: ಗರ್ಭಿಣಿಯರು ಸೇರಿದಂತೆ 9 ಜನ ಬಲಿ
ಶಿವಕಾಶಿಯ ಪಟಾಕಿ ಕಾರ್ಖಾನೆ ಬಳಿ ಗುರುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಗರ್ಭಿಣಿಯರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದು, 19 ಜನಕ್ಕೂ ಅಧಿಕ ಗಾಯಗೊಂಡಿದ್ದಾರೆ.
ಶಿವಕಾಶಿ, ಅಕ್ಟೋಬರ್ 20: ಶಿವಕಾಶಿಯ ಪಟಾಕಿ ಕಾರ್ಖಾನೆ ಬಳಿ ಗುರುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಗರ್ಭಿಣಿಯರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದು, 19 ಜನಕ್ಕೂ ಅಧಿಕ ಗಾಯಗೊಂಡಿದ್ದಾರೆ. ಈ ಅಗ್ನಿ ಅಪಘಾತದ ವಿಡಿಯೋವೊಂದನ್ನು ಶಿವಕಾಶಿ ಮೂಲದ ಪತ್ರಿಕೆ ಫೇಸ್ ಬುಕ್ ನಲ್ಲಿ ಹಾಕಿದೆ.
ಮೃತರನ್ನು ಭಾಸ್ಕರ್, ಸ್ವರ್ಣಕುಮಾರ್, ದೇವಿ, ಕಮಾರ್ಚಿ, ಪುಷ್ಪಲಕ್ಷ್ಮಿ, ವಲರ್ ಮತಿ, ಜಾನಕಿರಮನ್, ಗಣೇಶನ್ ಹಾಗೂ ಷಣ್ಮುಗರಾಜ್ ಎಂದು ಗುರುತಿಸಲಾಗಿದೆ. ಪಟಾಕಿ ಗೋದಾಮಿನಿಂದ ಪಟಾಕಿ ಒಯ್ಯುತ್ತಿದ್ದ ಟ್ರಕ್ಕಿಗೆ ಪಟಾಕಿ ಸಾಗಿಸುವಾಗ ಸ್ಫೋಟಗೊಂಡಿದೆ.

ಸ್ಕ್ಯಾನಿಂಗ್ ಸೆಂಟರ್ ಬಳಿ ಟ್ರಕ್ ನಿಲ್ಲಿಸಲಾಗಿತ್ತು. ಒಳಗಿದ್ದ ಗರ್ಭಿಣಿಯರು ಉಸಿರಾಟದ ತೊಂದರೆಗೊಳಗಾಗಿ ಮೃತಪಟ್ಟಿದ್ದಾರೆ. ಸುಮಾರು 35ಕ್ಕೂ ಅಧಿಕ ಅಗ್ನಿ ಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳದಲ್ಲಿದ್ದ 25ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಗೋದಾಮಿನ ಬಳಿ ಸುಮಾರು 20 ವಾಹನಗಳು ನಿಲ್ಲಿಸಲಾಗಿತ್ತು. ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ.
2012ರ ಸೆಪ್ಟೆಂಬರ್ 5ರಂದು ನಡೆದ ಅಗ್ನಿ ಆಕಸ್ಮಿಕದಲ್ಲಿ 38 ಮಂದಿ ಸಾವನ್ನಪ್ಪಿದ್ದರು. ಈ ಕಹಿ ಘಟನೆ ನಂತರ ಹಲವಾರು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೂ ಮತ್ತೆ ಮತ್ತೆ ಅವಘಡಗಳು ಸಂಭವಿಸುತ್ತಲೇ ಇವೆ. ದೀಪಾವಳಿಗಾಗಿ ಪಟಾಕಿ ಬೇಡಿಕೆ ಹೆಚ್ಚಿರುವುದರಿಂದ ಪಟಾಕಿ ಸಾಗಿಸಲು ಇಲ್ಲಿನ ಕಾರ್ಖಾನೆಗಳು ಬೇಡಿಕೆ ಪೂರೈಸಲು ಯತ್ನಿಸುತ್ತಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications