ಮೋದಿಯಿಂದ ವಿಶೇಷವಾಗಿ ಆಟಲ್ ಬಿಹಾರಿ ವಾಜಪೇಯಿ ಸಂಸ್ಮರಣೆ
ನವದೆಹಲಿ, ಆ. 16: ಮಾಜಿ ಪ್ರಧಾನಿ, ಬಿಜೆಪಿ ಮುಖಂಡ ಅಟಲ ಬಿಹಾರಿ ವಾಜಪೇಯಿ ಅವರ ಸಂಸ್ಮರಣಾ ದಿನವಾದ ಇಂದು ಪ್ರಧಾನಿ ಮೋದಿ ಅವರು ವಿಶೇಷವಾದ ವಿಡಿಯೋ ಹಂಚಿಕೊಂಡಿದ್ದಾರೆ.
ಅಟಲ್ ಜೀ ಅವರ ಪುಣ್ಯತಿಥಿಯಂದು ನನ್ನ ನಮನ, ದೇಶದ ಪ್ರಗತಿಗಾಗಿ ನಿಮ್ಮ ಸೇವೆ ಹಾಗೂ ತ್ಯಾಗವನ್ನು ಎಂದಿಗೂ ಸ್ಮರಿಸಲಾಗುತ್ತದೆ ಎಂದು ಪ್ರಧಾನಿ ಅವರು ಟ್ವೀಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.
Tributes to beloved Atal Ji on his Punya Tithi. India will always remember his outstanding service and efforts towards our nation’s progress. pic.twitter.com/ZF0H3vEPVd
— Narendra Modi (@narendramodi) August 16, 2020
ಭಾರತ್ ರತ್ನ ಅಟಲ್ ಅವರ ಚಿತ್ರಗಳಿರುವ ವಿಡಿಯೋಕ್ಕೆ ಮೋದಿ ಅವರ ಹಿನ್ನಲೆ ಧ್ವನಿಯಿದೆ. ಅಟಲ್ ಅವರು ಭಾರತದ ದೇಶಭಕ್ತಿ ಹಾಗೂ ಸಂಸ್ಕೃತಿಯ ದನಿಯಾಗಿದ್ದರು. ಚತುರ ಸಂಘಟಕರಾಗಿದ್ದರು, ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಹೇಗೆ ಕಾರ್ಯ ನಿರ್ವಹಿಸಿದರು, ಅವರ ಭಾಷಣ ಹೇಗೆ ಪ್ರಭಾವ ಬೀರುತ್ತಿತ್ತು, ಅವರ ಮೌಲ್ಯಯುತವಾದ ಜೀವನ, ಅವರ ಮೌನದಲ್ಲೂ ನಮಗೆ ವಿಶೇಷ ಅರ್ಥ ಕಾಣಿಸುತ್ತಿತ್ತು. ಆದರಣೀಯ ಅಟಲ್ ಜೀಗೆ ನನ್ನ ನಮನ ಎಂದು ಮೋದಿ ಹೇಳಿದ್ದಾರೆ.

2005ರಲ್ಲಿ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದ ವಾಜಪೇಯಿ ಅವರು ದೀರ್ಘ ಅನಾರೋಗ್ಯದ ಕಾರಣದಿಂದ 2018ರ ಆಗಸ್ಟ್ 16 ರಂದು ನಿಧನ ಹೊಂದಿದ್ದರು. 3 ಬಾರಿ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ವಾಜಪೇಯಿ ಅವರು ಕವಿಯಾಗಿ, ಉತ್ತಮ ವಾಗ್ಮಿಯಾಗಿ, ಹಾಸ್ಯಪ್ರಜ್ಞೆಯ ಸರಳ ಮನುಷ್ಯರಾಗಿ, ಮಾನವೀಯ ಅಂತಃಕರಣದ ಜನಾನುರಾಗಿಯಾಗಿ ಕೋಟ್ಯಂತರ ಭಾರತೀಯರ ಹೃದಯದಲ್ಲಿ ನೆಲೆಸಿದವರು.
ಪ್ರೋಖ್ರಾನ್ ಅಣು ಪರೀಕ್ಷೆ, ಪಾಕಿಸ್ತಾನದೊಂದಿಗೆ ಬಾಂಧವ್ಯ ಬೆಸೆಯುವ ಸಾರಿಗೆ ವ್ಯವಸ್ಥೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಸುವರ್ಣ ಚತುಷ್ಪಥ ಯೋಜನೆ, ಸರ್ವ ಶಿಕ್ಷಾ ಅಭಿಯಾನ ಮುಂತಾದವು ವಾಜಪೇಯಿ ಅವರ ದೂರದೃಷ್ಟಿತ್ವದ ಫಲವಾಗಿದೆ. ಮೋದಿಗೆ ರಾಜಧರ್ಮ ಪರಿಪಾಲನೆ ಪಾಠ ಮಾಡಿದ್ದ ಅಟಲ್ ಅವರು ದೇಶದ ಪ್ರಧಾನಿಯಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ ಮೊದಲ ಅವಿವಾಹಿತ ಎನಿಸಿಕೊಂಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications