ಮೋದಿಯಿಂದ ವಿಶೇಷವಾಗಿ ಆಟಲ್ ಬಿಹಾರಿ ವಾಜಪೇಯಿ ಸಂಸ್ಮರಣೆ
ನವದೆಹಲಿ, ಆ. 16: ಮಾಜಿ ಪ್ರಧಾನಿ, ಬಿಜೆಪಿ ಮುಖಂಡ ಅಟಲ ಬಿಹಾರಿ ವಾಜಪೇಯಿ ಅವರ ಸಂಸ್ಮರಣಾ ದಿನವಾದ ಇಂದು ಪ್ರಧಾನಿ ಮೋದಿ ಅವರು ವಿಶೇಷವಾದ ವಿಡಿಯೋ ಹಂಚಿಕೊಂಡಿದ್ದಾರೆ.
ಅಟಲ್ ಜೀ ಅವರ ಪುಣ್ಯತಿಥಿಯಂದು ನನ್ನ ನಮನ, ದೇಶದ ಪ್ರಗತಿಗಾಗಿ ನಿಮ್ಮ ಸೇವೆ ಹಾಗೂ ತ್ಯಾಗವನ್ನು ಎಂದಿಗೂ ಸ್ಮರಿಸಲಾಗುತ್ತದೆ ಎಂದು ಪ್ರಧಾನಿ ಅವರು ಟ್ವೀಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.
Tributes to beloved Atal Ji on his Punya Tithi. India will always remember his outstanding service and efforts towards our nation’s progress. pic.twitter.com/ZF0H3vEPVd
— Narendra Modi (@narendramodi) August 16, 2020
ಭಾರತ್ ರತ್ನ ಅಟಲ್ ಅವರ ಚಿತ್ರಗಳಿರುವ ವಿಡಿಯೋಕ್ಕೆ ಮೋದಿ ಅವರ ಹಿನ್ನಲೆ ಧ್ವನಿಯಿದೆ. ಅಟಲ್ ಅವರು ಭಾರತದ ದೇಶಭಕ್ತಿ ಹಾಗೂ ಸಂಸ್ಕೃತಿಯ ದನಿಯಾಗಿದ್ದರು. ಚತುರ ಸಂಘಟಕರಾಗಿದ್ದರು, ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಹೇಗೆ ಕಾರ್ಯ ನಿರ್ವಹಿಸಿದರು, ಅವರ ಭಾಷಣ ಹೇಗೆ ಪ್ರಭಾವ ಬೀರುತ್ತಿತ್ತು, ಅವರ ಮೌಲ್ಯಯುತವಾದ ಜೀವನ, ಅವರ ಮೌನದಲ್ಲೂ ನಮಗೆ ವಿಶೇಷ ಅರ್ಥ ಕಾಣಿಸುತ್ತಿತ್ತು. ಆದರಣೀಯ ಅಟಲ್ ಜೀಗೆ ನನ್ನ ನಮನ ಎಂದು ಮೋದಿ ಹೇಳಿದ್ದಾರೆ.

2005ರಲ್ಲಿ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದ ವಾಜಪೇಯಿ ಅವರು ದೀರ್ಘ ಅನಾರೋಗ್ಯದ ಕಾರಣದಿಂದ 2018ರ ಆಗಸ್ಟ್ 16 ರಂದು ನಿಧನ ಹೊಂದಿದ್ದರು. 3 ಬಾರಿ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ವಾಜಪೇಯಿ ಅವರು ಕವಿಯಾಗಿ, ಉತ್ತಮ ವಾಗ್ಮಿಯಾಗಿ, ಹಾಸ್ಯಪ್ರಜ್ಞೆಯ ಸರಳ ಮನುಷ್ಯರಾಗಿ, ಮಾನವೀಯ ಅಂತಃಕರಣದ ಜನಾನುರಾಗಿಯಾಗಿ ಕೋಟ್ಯಂತರ ಭಾರತೀಯರ ಹೃದಯದಲ್ಲಿ ನೆಲೆಸಿದವರು.
ಪ್ರೋಖ್ರಾನ್ ಅಣು ಪರೀಕ್ಷೆ, ಪಾಕಿಸ್ತಾನದೊಂದಿಗೆ ಬಾಂಧವ್ಯ ಬೆಸೆಯುವ ಸಾರಿಗೆ ವ್ಯವಸ್ಥೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಸುವರ್ಣ ಚತುಷ್ಪಥ ಯೋಜನೆ, ಸರ್ವ ಶಿಕ್ಷಾ ಅಭಿಯಾನ ಮುಂತಾದವು ವಾಜಪೇಯಿ ಅವರ ದೂರದೃಷ್ಟಿತ್ವದ ಫಲವಾಗಿದೆ. ಮೋದಿಗೆ ರಾಜಧರ್ಮ ಪರಿಪಾಲನೆ ಪಾಠ ಮಾಡಿದ್ದ ಅಟಲ್ ಅವರು ದೇಶದ ಪ್ರಧಾನಿಯಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ ಮೊದಲ ಅವಿವಾಹಿತ ಎನಿಸಿಕೊಂಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications