ದ್ರೌಪತಿ ಮೇಲೆ ಕೌರವ ಕಾರ್ಯಕರ್ತರ ಹಲ್ಲೆ - ಆರೋಪ
ಕೋಲ್ಕತ್ತಾ, ಏ.15: ನಟಿ ಕಮ್ ರಾಜಕಾರಣಿ, ಬಿಜೆಪಿ ನಾಯಕಿ ರೂಪಾ ಗಂಗೂಲಿ ಅವರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕೋಲ್ಕತ್ತಾದಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರಕ್ಕೆ ತೆರಳುವಾಗ ಟಿಎಂಸಿ ಕಾರ್ಯಕರ್ತರು ರೂಪಾ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಎಲಿಪೋರ್ ಮಾರುಕಟ್ಟೆ ಪ್ರದೇಶದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಸಂದರ್ಭದಲ್ಲಿ ರೂಪಾ ಗಂಗೂಲಿ ಮೇಲೆ ಹಲ್ಲೆ ನಡೆಸಿ ಅವರಿದ್ದ ಕಾರು ಕೂಡ ಜಖಂ ಮಾಡಲಾಗಿದೆ. ರೂಪಾ ಗಂಗೂಲಿ ಕಾರಿನ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ.[ರೀಲ್ ನಿಂದ ರಿಯಲ್ ಮಹಾಭಾರತಕ್ಕೆ ರೂಪಾ ಗಂಗೂಲಿ]

ದೂರದರ್ಶನದಲ್ಲಿ ಬರುತ್ತಿದ್ದ ಮಹಾಭಾರತ ಧಾರಾವಾಹಿಯ ದ್ರೌಪದಿ ಪಾತ್ರದಿಂದ ಜನಪ್ರಿಯರಾದ ರೂಪಾ ಗಂಗೂಲಿ ಅವರು ಈಗ ಬಿಜೆಪಿಗೆ ಸೇರಿ ಪೂರ್ಣ ಪ್ರಮಾಣವಾಗಿ ರಾಜಕಾರಣಿ ಎನಿಸಿಕೊಂಡಿದ್ದಾರೆ.
ಗಲಾಟೆ ನಡೆದಿದ್ದೇಕೆ? : ಈ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಲು ಅನುಮತಿ ಕೋರಲಾಗಿತ್ತು. ಪೊಲೀಸರು ಕೂಡಾ ಅನುಮತಿ ನೀಡಿದ್ದರು. ಹೀಗಾಗಿ ಅಲ್ಲಿದ್ದ ಟಿಎಂಸಿ ಬಾವುಟವನ್ನು ತೆಗೆದು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುಂದಾದಾಗ ಟಿಎಂಸಿ ಕಾರ್ಯಕರ್ತರು ನನ್ನ ವಿರುದ್ಧ ತಿರುಗಿಬಿದ್ದರು ಎಂದು ರೂಪಾ ಗಂಗೂಲಿ ಗೋಳು ತೋಡಿಕೊಂಡಿದ್ದಾರೆ. ಚುನಾವಣೆಗೂ ಮುನ್ನ ಸೋಲಿನ ಭೀತಿ ಎದುರಿಸುತ್ತಿರುವ ಟಿಎಂಸಿ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥ್ ನಾಥ್ ಸಿಂಗ್ ಕಿಡಿಕಾರಿದ್ದಾರೆ. (ಪಿಟಿಐ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications