BSNL ಮುಚ್ಚುವ ಸುದ್ದಿ: ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆ
ನವದೆಹಲಿ, ಜೂನ್ 27: ಸರಕಾರೀ ಸ್ವಾಮ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ (ಮಹಾನಗರ ಟೆಲಿಕಾಂ ನಿಗಮ ಲಿಮಿಟೆಡ್) ಮುಚ್ಚುವ ಸುದ್ದಿಯ ಬಗ್ಗೆ ಕೇಂದ್ರ ದೂರಸಂಪರ್ಕ ಖಾತೆಯ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಎರಡೂ ಸಂಸ್ಥೆಗಳನ್ನು ಮುಚ್ಚುವ ಯಾವ ಪ್ರಸ್ತಾವನೆಯೂ ಸರಕಾರದ ಮುಂದಿಲ್ಲ, ಬದಲಿಗೆ, ಸಂಸ್ಥೆಯನ್ನು ಲಾಭದತ್ತ ತರುವಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ದಪಡಿಸುತ್ತಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಅಹಮದಾಬಾದ್ ಮೂಲದ ಇಂಡಿಯನ್ ಇನ್ಸ್ಟಿಟ್ಯೂಟ್ ಮತ್ತು ಡಿಲಾಯಟ್ ಸಂಸ್ಥೆಗಳಿಗೆ, ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಪುನರ್ ರಚನೆಗೆ ಮತ್ತು ಈ ಕ್ಷೇತ್ರದಲ್ಲಿನ ಖಾಸಗಿ ಸಂಸ್ಥೆಗಳಿಗೆ ಸ್ಪರ್ಧೆ ನೀಡಲು ಪ್ಲ್ಯಾನ್ ಸಿದ್ದಪಡಿಸಲು ಸೂಚಿಸಲಾಗಿದೆ.

ಈ ಎರಡು ಸಂಸ್ಥೆಗಳು ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನಷ್ಟದಲ್ಲಿರುವ ಈ ಎರಡು ಸಂಸ್ಥೆಗಳು ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ.
ರಿಲಯನ್ಸ್ ಜಿಯೋ ಮಾರುಕಟ್ಟೆ ಪ್ರವೇಶಿಸಿದ ನಂತರ, ಇತರ ಎಲ್ಲಾ ಖಾಸಗಿ ಸಂಸ್ಥೆಗಳು ಹಿನ್ನಡೆಯನ್ನು ಅನುಭವಿಸುತ್ತಿದೆ. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಸಂಸ್ಥೆಗಳಿಗೆ ಹೆಚ್ಚಿನ ಹೊಡೆತ ಬಿದ್ದಿದೆ.
ಲೋಕಸಭೆಯಲ್ಲಿ ಸಲ್ಲಿಸಲಾದ 2018-19ರ ಅಂಕಿಅಂಶಗಳ ಪ್ರಕಾರ, ಬಿಎಸ್ಎನ್ಎಲ್ ಸಂಸ್ಥೆಯ ಮಾರುಕಟ್ಟೆ ಶೇರ್, ಶೇ. 9.63ರಿಂದ 10.72ಕ್ಕೆ ಏರಿದ್ದರೆ, ಎಂಟಿಎನ್ಎಲ್ ಶೇರ್, ಶೇ. 7.37 ರಿಂದ 6.95ಕ್ಕೆ ಇಳಿದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications