Get Updates
Get notified of breaking news, exclusive insights, and must-see stories!

ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಕೊಯಮತ್ತೂರು, ಸೆಪ್ಟೆಂಬರ್‌ 09: ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರದಂದು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್‌ ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

We Asked For Conscience Votes On Behalf Of Our Candidate Said DCM DK Shivakumar

ಸುಪ್ರೀಂ ಕೋರ್ಟ್ ಆಧಾರ್ ಗುರುತಿನ ಚೀಟಿ 12ನೇ ದಾಖಲೆ ಎಂದು ಪರಿಗಣಿಸಿರುವ ಬಗ್ಗೆ ಕೇಳಿದಾಗ, ಹೌದು, ಆಧಾರ್ ಗುರುತಿನ ಚೀಟಿ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯವಾದ ದಾಖಲೆ. ಈ ಹಿಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಈ ಯೋಜನೆ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲ ಮಾಡಿದೆ ಎಂದು ಹೇಳಿದರು.

ಸಂಘಟನ್ ಶ್ರೀ ಜನ್ ಅಭಿಯಾನ್ : ಡಿ.ಕೆ.ಸುರೇಶ್

ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ 'ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು.

ಹೈಕಮಾಂಡ್ ಆದೇಶದ ಮೇರೆಗೆ ಪ್ರತಿ ಜಿಲ್ಲೆಯ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಹವಾಲುಗಳನ್ನು ಅಲಿಸಲಾಗುತ್ತಿದೆ. ಈ ಮೂಲಕ ಪಕ್ಷದ ಬಲವರ್ಧನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರ ಸಲಹೆಗಳನ್ನು ಆಲಿಸಿ ಅದಕ್ಕೆ ಪರಿಹಾರ ನೀಡುವ ಮೂಲಕ ಸಂಘಟನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆ. ಇದನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಒಡಿಸ್ಸಾದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.

ಆಡಳಿತರೂಢ ಬಿಜೆಪಿ ಸರಕಾರದ ವೈಫಲ್ಯ ಸೇರಿದಂತೆ ಯಾವ ವಿಚಾರಗಳ ಮೂಲಕ ಜನರ ಗಮನ ಸೆಳೆಯಬೇಕು ಎಂಬುದನ್ನು ಚರ್ಚಿಸಲಾಗುತ್ತಿದೆ. ರಾಜ್ಯವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ ಇದನ್ನು ಜನರಿಗೆ ಮನವರಿಕೆ ಮಾಡಬೇಕಾಗಿದೆ. ಎಐಸಿಸಿಯ ಮಾನದಂಡಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಪಕ್ಷಕ್ಕಾಗಿ ದುಡಿದಿರುವ, ಸಂಘಟನಾ ಸಾಮರ್ಥ್ಯವಿರುವ, ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿರುವ ನಾಯಕರು, ಜೊತೆಗೆ ಸಮಾಜದ ಎಲ್ಲ ಸಮುದಾಯದವರು ಹಾಗೂ ಅಲ್ಪಸಂಖ್ಯಾತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.

ಒಡಿಸ್ಸಾ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಳಿದಾಗ, "ಒಡಿಸ್ಸಾ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಡಬಲ್ ಎಂಜಿನ್ ಸರ್ಕಾರವಿದೆ. ಅಧಿಕಾರಕ್ಕೆ ಬಂದು 16 ತಿಂಗಳು ಕಳೆದರೂ ಸಹ ಜನರ ಜೀವನದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಆರೋಗ್ಯ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದ್ದು ಜನರು ಪರದಾಡುತ್ತಿದ್ದಾರೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+