'ಪೋಷಕರು ಮಕ್ಕಳಲ್ಲಿ ಹಿಂದೂ ಧರ್ಮದ ಬಗ್ಗೆ ಹೆಮ್ಮೆ ಹುಟ್ಟಿಸಬೇಕು': ಮೋಹನ್ ಭಾಗವತ್
ಉತ್ತರಾಖಂಡ, ಅಕ್ಟೋಬರ್ 11: "ಹಿಂದೂ ಯುವತಿಯರ ಹಾಗೂ ಹಿಂದೂ ಯುವಕರ ಮತಾಂತರವು ತಪ್ಪು, ಹಾಗೆಯೇ ನಮ್ಮ ಯುವ ಜನರಲ್ಲಿ ನಮ್ಮ ಧರ್ಮ ಹಾಗೂ ಸಂಸ್ಕೃತಿಯ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸುವುದು ಅಗತ್ಯ ಇದೆ," ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಉತ್ತರಾಖಂಡದಲ್ಲಿ ಹಲ್ದ್ವಾನಿಯಲ್ಲಿ ಆರ್ಎಸ್ಎಸ್ ಕಾರ್ಯಕರ್ತರು ಹಾಗೂ ಅವರ ಕುಟುಂಬಸ್ಥರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ "ತಮ್ಮ ಮಕ್ಕಳಿಗೆ ಹಿಂದೂ ಧರ್ಮದ ಬಗ್ಗೆ ಉತ್ತಮ ಭಾವನೆ ಬೆಳೆಯುವಂತಹ ಸಂಸ್ಕಾರವನ್ನು ಕಲಿಸಿಕೊಡಿ," ಎಂದು ಪೋಷಕರಿಗೆ ತಿಳಿಸಿದರು.
"ಮತಾಂತರ ನಡೆಯುವುದಾದರೂ ಹೇಗೆ?, ಮದುವೆಯಾಗುವ ಒಂದು ಸಣ್ಣ ಸ್ವಾರ್ಥಕ್ಕಾಗಿ ನಮ್ಮ ಹಿಂದೂ ಧರ್ಮದ ಯುವತಿಯರು ಹಾಗೂ ಯುವಕರು ಹೇಗೆ ಬೇರೆ ಧರ್ಮವನ್ನು ಸ್ವೀಕಾರ ಮಾಡುತ್ತಾರೆ?," ಎಂದು ಪೋಷಕರ ಬಳಿ ಪ್ರಶ್ನೆ ಕೇಳಿದರು.

"ಈ ಮತಾಂತರವನ್ನು ಯಾರು ಮಾಡುತ್ತಾರೋ ಅದು ತಪ್ಪು, ಆದರೆ ಬೇರೆ ವಿಷಯ. ಆದರೆ ನಾವು ನಮ್ಮ ಮಕ್ಕಳನ್ನು ಸರಿಯಾಗಿ ಬೆಳೆಸುವುದಿಲ್ಲವೇ?. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಒಳ್ಳೆಯ ಸಂಸ್ಕೃತಿಯನ್ನು ನೀಡಬೇಕು. ನಮ್ಮ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಮ್ಮ ಯುವಕರಲ್ಲಿ ಹೆಮ್ಮೆಯನ್ನು ನಾವು ಮೂಡಿಸಬೇಕು, ಹಾಗೆಯೇ ನಮ್ಮ ಸಂಸ್ಕೃತಿ ಬಗ್ಗೆ ಗೌರವವನ್ನು ನಾವು ಮೂಡಿಸಬೇಕು," ಎಂದು ಕಿವಿಮಾತು ಹೇಳಿದರು.
ಇನ್ನು ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನರಲ್ಲಿ ಯಾವುದೇ ಗೊಂದಲವಿಲ್ಲದೇ ನೀವು ಯಾವ ಪ್ರಶ್ನೆಗೂ ಉತ್ತರವನ್ನು ನೀಡಬೇಕು. ಅವರು ನಿಮ್ಮ ಬಳಿಗೆ ಬಂದು ಪ್ರಶ್ನೆ ಕೇಳಿದರೆ ಉತ್ತರ ನೀಡಿ. ಯಾವುದೇ ಗೊಂದಲಕ್ಕೆ ಒಳಗಾಗಬೇಡಿ. ನಾವು ನಮ್ಮ ಮಕ್ಕಳಿಗೆ ಪ್ರಶ್ನೆಗೆ ಉತ್ತರಿಸುವುದನ್ನು ಕಲಿಸಬೇಕು ಹಾಗೂ ನಾವು ಕೂಡಾ ಕಲಿಯಬೇಕು," ಎಂದರು.
ಸಾಂಪ್ರದಾಯಿಕ ಕುಟುಂಬ ಮೌಲ್ಯಗಳು ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ವಿಚಾರವನ್ನು ಕೂಡಾ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ಭಾರತದ ಪ್ರವಾಸಿ ತಾಣಗಳಿಗೆ ನಮ್ಮ ಜನರು ಭೇಟಿ ನೀಡಬೇಕು. ಹಾಗೆಯೇ ಮನೆಯಲ್ಲೇ ಮಾಡಿದ ಆಹಾರವನ್ನು ಸೇವಿಸಿ ಹಾಗೂ ಸಾಂಪ್ರದಾಯಿಕ ಉಡುಪನ್ನು ಧರಿಸಬೇಕು ಎಂದು ಕೂಡಾ ಸಲಹೆ ನೀಡಿದರು.
ಇನ್ನು ಈ ಸಂದರ್ಭದಲ್ಲಿ ಭಾರತದ ಸಂಸ್ಕೃತಿಯ ಬೇರಿನೊಂದಿಗೆ ನಂಟು ಹೊಂದಿರಬೇಕಾದರೆ ನಾವು ಆರು ಮಂತ್ರಗಳನ್ನು ಪಾಲಿಸುವುದು ಮುಖ್ಯ ಎಂದು ಹೇಳಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಆ ಆರು ಮಂತ್ರಗಳು ಭಾಷೆ, ಆಹಾರ, ಭಕ್ತಿಗೀತೆಗಳು, ಪ್ರವಾಸ, ಉಡುಪು ಹಾಗೂ ಮನೆ," ಎಂದರು. ಇನ್ನು ಜನರು ಸಂಪ್ರದಾಯವನ್ನು ಪಾಲಿಸಬೇಕು ಎಂದು ಹೇಳುವ ಸಂದರ್ಭದಲ್ಲೇ ಮೋಹನ್ ಭಾಗವತ್ ಅವರು, "ಅಸ್ಪೃಶ್ಯತೆಯನ್ನು ನಾವು ಪಾಲನೆ ಮಾಡಬಾರದು," ಎಂದು ಒತ್ತಿ ಹೇಳಿದರು.
"ಯಾರನ್ನೂ ಕೂಡಾ ಜಾತಿಯ ಆಧಾರದಲ್ಲಿ ವರ್ಗಿಕರಣ ಮಾಡಬೇಡಿ. ಅಸ್ಪೃಶ್ಯತೆ ಎಂಬುವುದು ಇನ್ನು ಇರಬಾರದು. ಹೆಸರುಗಳನ್ನು ಕೇಳಿ ಧರ್ಮವನ್ನು ಊಹಿಸುವ ಅಭ್ಯಾಸವನ್ನು ಜನರು ನಮ್ಮ ಈ ಸಮಾಜವು ಹೊಂದಿದೆ. ಆದ್ದರಿಂದ ನಮ್ಮ ಒಳಗೆ ಜನರ ನಡುವೆ ಭೇದ-ಭಾವವನ್ನು ಮಾಡುವುದು ಸಂಪೂರ್ಣವಾಗಿ ನಮ್ಮ ಹೃದಯಂತರಾಳದಿಂದ ಕೊನೆಯಾಗಬೇಕು," ಎಂದರು.
"ನಾವು ಈ ವಿಚಾರದ ಬಗ್ಗೆ ಚರ್ಚೆಯನ್ನು ನಡೆಸಬೇಕು. ಅದು ಮಾತ್ರವಲ್ಲದೇ ನೀರು ಹಾಗೂ ಸಸಿಗಳನ್ನು ನೆಡುವ ವಿಚಾರದ ಬಗ್ಗೆಯೂ ಚರ್ಚೆಯನ್ನು ನಡೆಸಬೇಕು," ಎಂದು ಹೇಳಿದ ಆರ್ಎಸ್ಎಸ್ ಮುಖಂಡರು, "ಯಾವಾಗ ಓರ್ವ ಹಿಂದೂ ಎಚ್ಚರಗೊಳ್ಳುತ್ತಾನೋ, ಆ ಬಳಿಕ ಇಡೀ ವಿಶ್ವವೇ ಎಚ್ಚರಗೊಳ್ಳುತ್ತದೆ," ಎಂದು ಅಭಿಪ್ರಾಯಿಸಿದರು.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications