ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಯೆಡೆಗೆ ಬೊಟ್ಟು ಮಾಡಿದರೆ ಕೈ ಕತ್ತರಿಸುತ್ತೇವೆ ಎಂದ ಬಿಜೆಪಿ ನಾಯಕ

|
Google Oneindia Kannada News

Recommended Video

ನರೇಂದ್ರ ಮೋದಿ ಕಡೆ ಬೊಟ್ಟು ಮಾಡಿದರೆ ಈ ಬಿಜೆಪಿ ನಾಯಕ ಕೊಡು ಶಿಕ್ಷೆ ಏನ್ ಗೊತ್ತಾ? | Oneindia Kannada

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ, ಚುನಾವಣೆ ಆಯೋಗದಿಂದ ನಿರ್ಬಂಧಕ್ಕೆ ಒಳಗಾಗಿದ್ದ ಹಿಮಾಚಲ ಪ್ರದೇಶದ ಬಿಜೆಪಿ ಮುಖ್ಯಸ್ಥ ಸತ್ಪಾಲ್ ಸಿಂಗ್ ಸತ್ತಿ ಬುಧವಾರದಂದು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. "ಮೋದಿ ಕಡೆಗೆ ಬೆರಳು ತೋರುವವರ ಕೈ ಕತ್ತರಿಸಿ, ಅವರಿಗೇ ನೀಡುತ್ತೇವೆ" ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಮ್ ಸ್ವರೂಪ್ ಶರ್ಮಾ ಪರವಾಗಿ ಚುನಾವಣೆ ಪ್ರಚಾರ ನಡೆಸುವ ವೇಳೆ ಈ ಹೇಳಿಕೆ ನೀಡಿದ್ದಾರೆ. ಶರ್ಮಾ ಅವರು ಮಂಡಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅನ್ನು ಸರ್ವನಾಶ ಮಾಡಿದ್ದಾರೆ ಎಂದು ಕೂಡ ಸತ್ಪಾಲ್ ಹೇಳಿದ್ದಾರೆ.

We will chop off arms of those who point fingers at Modi: Himachal BJP chief

ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸತ್ಪಾಲ್ ಗೆ ಚುನಾವಣೆ ಆಯೋಗವು ನಲವತ್ತೆಂಟು ಗಂಟೆಗಳ ಕಾಲ ಚುನಾವಣೆ ಪ್ರಚಾರದಿಂದ ನಿಷೇಧ ಹೇರಿತ್ತು. ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ರಾಥೋಡ್ ಮಾತನಾಡಿ, ಕೈ ಕತ್ತರಿಸುವುದು ಹಾಗೂ ಸೋನಿಯಾ ಅವರ ಬಗ್ಗೆ ಸತ್ಪಾಲ್ ನೀಡಿದ ಹೇಳಿಕೆ ಬಗ್ಗೆ ಚುನಾವಣೆ ಆಯೋಗಕ್ಕೆ ದೂರು ನೀಡಲಾಗುವುದು. ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದಿದ್ದಾರೆ.

English summary
Days after the Election Commission gagged him for two days for using an expletive against Congress president Rahul Gandhi, Himachal Pradesh Bharatiya Janata Party (BJP) chief Satpal Singh Satti said on Wednesday that the hands of the detractors of Prime Minister Narendra Modi should be chopped off.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X