ಬಕ್ರೀದ್ ನಂತರ ಕಾಶ್ಮೀರಿಗಳ ಹತ್ಯೆ : ಉಗ್ರ ಜೈಶ್ ಕಟ್ಟೆಚ್ಚರ
ಬೆಂಗಳೂರು, ಸೆಪ್ಟೆಂಬರ್ 10 : ಭಾರತ ಸರಕಾರಕ್ಕೆ ಬೆಂಬಲ ನೀಡುತ್ತಿರುವ 25 ಕಾಶ್ಮೀರಿಗಳನ್ನು ಬಕ್ರೀದ್ ಹಬ್ಬದ ನಂತರ ಹತ್ಯೆ ಮಾಡುವುದಾಗಿ ಉಗ್ರ ಸಂಘಟನೆ ಜೈಶ್-ಇ-ಮೊಹಮ್ಮದ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದೆ. ತನ್ನ ಹಿಟ್ ಲಿಸ್ಟ್ ನಲ್ಲಿ 25 ಕಾಶ್ಮೀರಿಗಳ ಹೆಸರನ್ನು ಬಹಿರಂಗಪಡಿಸಿದೆ.
ಆ ಇಪ್ಪತ್ತೈದು ಕಾಶ್ಮೀರಿಗಳ ಪಟ್ಟಿಯಲ್ಲಿ, ಭಾರತೀಯ ಜನತಾ ಪಕ್ಷದೊಡನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರಕಾರ ರಚಿಸಿರುವ ಪೀಪಲ್ಸ್ ಪಬ್ಲಿಕ್ ಪಾರ್ಟಿಯ ಐವರು ಸದಸ್ಯರಿದ್ದಾರೆ. ಭಾರತಕ್ಕೆ ನೀಡುತ್ತಿರುವ ಬೆಂಬಲ ಹಿಂತೆಗೆದುಕೊಳ್ಳದಿದ್ದರೆ ಅವರ ಹತ್ಯೆ ನಿಶ್ಚಿತ ಎಂದು ವಿಡಿಯೋದಲ್ಲಿ ಹೇಳಲಾಗಿದೆ. [ಭಯೋತ್ಪಾದನೆಯಿಂದ ದೂರ ಇರೋಕೆ ತಿಂಗಳಿಗೆ ಐನೂರು ಡಾಲರ್]

ಇತ್ತೀಚೆಗೆ ಹತನಾದ ಹಿಜ್ಬುಲ್ ಮುಜಾಹಿದ್ದಿನ್ ತಂಡದ ನಾಯಕ ಬುರ್ಹನ್ ವಾನಿಯ ಹೆಸರನ್ನು ಪ್ರಸ್ತಾಪಿಸಿರುವ, ಮುಖ ಮುಚ್ಚಿಕೊಂಡು ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ, ಪಟ್ಟಿಯಲ್ಲಿರುವ ಎಲ್ಲರೂ ಭಾರತದೊಡನೆ ಸಾಹಚರ್ಯವನ್ನು ಕಡಿತಗೊಳ್ಳದಿದ್ದರೆ ಅವರ ಹತ್ಯೆ ಖಂಡಿತ ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸೆಪ್ಟೆಂಬರ್ 13ರಂದು ಇರಲಿರುವ ಬಕ್ರೀದ್ ಡೆಡ್ ಲೈನನ್ನು ನೀಡಲಾಗಿದೆ.
ಕಾಶ್ಮೀರದಲ್ಲಿ ಶತ್ರುದೇಶ ಭಾರತ ಕೈಗೊಳ್ಳುತ್ತಿರುವ ಎಲ್ಲ ಕಾರ್ಯಗಳನ್ನು ತಿರಸ್ಕರಿಸಬೇಕಾಗಿ ಕಾಶ್ಮೀರದ ಜನತೆಗೆ ಕರೆ ನೀಡಿರುವ ಉಗ್ರ, ಭಾರತದೊಡನೆ ಸಂಪರ್ಕ ಹೊಂದಿರುವವರು ಕೂಡಲೆ ಅಲ್ಲಾಹುವಿನಲ್ಲಿ ಕ್ಷಮೆ ಕೇಳಬೇಕು ಮತ್ತು ಜೈಶ್-ಇ-ಮೊಹಮ್ಮದ್ ಕೆಲಸಗಳಿಗೆ ಸಹಕಾರ ನೀಡಬೇಕು ಎಂದೂ ಕಾಶ್ಮೀರಿಗಳಿಗೆ ಕಟ್ಟಾಜ್ಞೆ ನೀಡಿದ್ದಾನೆ. [ಬೆಂಗಳೂರು, ಮುಂಬೈನಲ್ಲೂ ಐಎಸ್ ಐಎಸ್ ನಿಂದ ಚಾಕು ದಾಳಿಗೆ ಸ್ಕೆಚ್]
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications