Get Updates
Get notified of breaking news, exclusive insights, and must-see stories!

Weather forecast: ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ- ಕರ್ನಾಟಕದ ಮಳೆ ಮುನ್ಸೂಚನೆ ಬಗ್ಗೆಯೂ ತಿಳಿಯಿರಿ

ತಿರುವನಂತಪುರಂ, ಬೆಂಗಳೂರು ಅಕ್ಟೋಬರ್‌ 17: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ಚಂಡಮಾರುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 21 ರ ವೇಳೆಗೆ ಚಂಡಮಾರುತದ ಪರಿಚಲನೆಯಿಂದಾಗಿ ರಾಜ್ಯದಲ್ಲಿ ಮುಂದಿನ 5 ದಿನಗಳ ವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

ರಾಜ್ಯದ ಕಾಸರಗೋಡು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಅದು ಹೇಳಿದೆ.

weather-forecast

ಕಳೆದ ಕೆಲವು ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರದೇಶಗಳು ಜಲಾವೃತಗೊಂಡಿವೆ. ವಿಶೇಷವಾಗಿ ತಿರುವನಂತಪುರಂನ ದಕ್ಷಿಣದ ಜಿಲ್ಲೆ ಮತ್ತು ರಾಜಧಾನಿಯಲ್ಲಿ ಪ್ರದೇಶಗಳು ಜಲಾವೃತವಾಗಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಜಲಾವೃತವನ್ನು ಗಮನದಲ್ಲಿಟ್ಟುಕೊಂಡು, ಸಾಂಕ್ರಾಮಿಕ ರೋಗಗಳು ಹರಡದಂತೆ ತೀವ್ರ ಎಚ್ಚರಿಕೆ ವಹಿಸುವಂತೆ ಸರ್ಕಾರ ಸೋಮವಾರ ಸಲಹೆ ನೀಡಿದೆ.

ಲೆಪ್ಟೊಸ್ಪೈರೋಸಿಸ್‌ನಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ ಎಂದು ಸರ್ಕಾರ ಹೇಳಿದೆ. ಇದು ಇಲಿಗಳಂತಹ ಪ್ರಾಣಿಗಳ ಮೂತ್ರದಿಂದ ಕಲುಷಿತಗೊಂಡ ಮಣ್ಣಿನ ಸಂಪರ್ಕದಿಂದ ಉಂಟಾಗುತ್ತದೆ.

ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಳೆಯಾಗುವ ಜಿಲ್ಲೆಗಳಲ್ಲಿ ಕಣ್ಗಾವಲು ಬಲಪಡಿಸಬೇಕು. ಜಾಗೃತಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.

ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳು ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವವರು ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ಆದೇಶಿಸಿದೆ.

ಭಾರತದಲ್ಲಿ ಮಳೆ

ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು ಮತ್ತು ಕೇರಳದ ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

weather-forecast

ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ತಕ್ಕಮಟ್ಟಿಗೆ ವ್ಯಾಪಕವಾದ ಮಳೆ ಅಥವಾ ಗುಡುಗು ಸಹಿತ ಮಳೆ ಸುರಿಯಬಹುದು.

ಕರಾವಳಿ ಕರ್ನಾಟಕದಲ್ಲಿಯೂ ಗುಡುಗು ಸಹಿತ ಮಳೆ ಸುರಿಯಬಹುದು ಎಂದು ತಿಳಿದುಬಂದಿದೆ.

ಉತ್ತರಾಖಂಡ, ಪಂಜಾಬ್, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಕೊಂಕಣ ಗೋವಾ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶಗಳು, ಯಾನಂ, ರಾಯಲಸೀಮಾ, ತೆಲಂಗಾಣ ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮಳೆ

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ರಾಮನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

weather-forecast

ಕರ್ನಾಟಕದಲ್ಲಿ ನಿನ್ನೆ ಸುರಿದ ಮಳೆ ಪ್ರಮಾಣ

ಉಡುಪಿ: 112 ಮಿ.ಮೀ
ದಕ್ಷಿಣ ಕನ್ನಡ: 97 ಮಿ.ಮೀ
ಮೈಸೂರು: 93 ಮಿ.ಮೀ
ಮಂಡ್ಯ: 84 ಮಿ.ಮೀ
ಉತ್ತರ ಕನ್ನಡ: 79 ಮಿ.ಮೀ
ಚಿಕ್ಕಮಗಳೂರು: 78.5 ಮಿ.ಮೀ
ಹಾಸನ: 67.5 ಮಿ.ಮೀ
ತುಮಕೂರು: 63.5 ಮಿ.ಮೀ
ಚಿತ್ರದುರ್ಗ: 55.5 ಮಿ.ಮೀ
ಚಾಮರಾಜನಗರ: 36.5 ಮಿ.ಮೀ
ಧಾರವಾಡ: 36 ಮಿ.ಮೀ
ಬೆಳಗಾವಿ: 34.5 ಮಿ.ಮೀ

ಹೆಚ್ಚು ಮಳೆ ಬಿದ್ದ ಸ್ಥಳಗಳು

ವರಂಗ, ಉಡುಪಿ: 112 ಮಿ.ಮೀ
ಸರಪಾಡಿ, ದಕ್ಷಿಣ ಕನ್ನಡ: 97 ಮಿ.ಮೀ
ಕರ್ಪೂರವಳ್ಳಿ, ಮೈಸೂರು: 93 ಮಿ.ಮೀ
ಸಾಲಿಗ್ರಾಮ, ಮೈಸೂರು: 89.5 ಮಿ.ಮೀ
ಪಡುಪಣಂಬೂರು, ದಕ್ಷಿಣ ಕನ್ನಡ: 85.5 ಮಿ.ಮೀ
ಮಡುವಿನಕೋಡಿ, ಮಂಡ್ಯ: 84 ಮಿ.ಮೀ
ಬೆಳಂದೂರು, ದಕ್ಷಿಣ ಕನ್ನಡ: 83 ಮಿ.ಮೀ
ನೀರೆ, ಉಡುಪಿ: 82 ಮಿ.ಮೀ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+