ಚಂಡಮಾರುತ ಪ್ರಭಾವ : ಮೇ 6ವರೆಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆ
ನವದೆಹಲಿ, ಮೇ 03: ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಚಲನೆ ಇರುವ ಕಾರಣ ಮುಂದಿನ ನಾಲ್ಕೈದು ದಿನ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತವು ವಾಯುವ್ಯ ಮಧ್ಯಪ್ರದೇಶದಲ್ಲಿದೆ, ಈ ಚಲನೆಯಿಂದ ಮಣಿಪುರದಲ್ಲಿ ಕೆಳಮಟ್ಟದಲ್ಲಿ ಚಲಿಸಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಕೂಡ ಮಳೆಯಾಗಲಿದೆ.
ಕೇರಳ ಹಾಗೂ ದಕ್ಷಿಣ ಕನ್ನಡದ ಭಾಗಗಳಲ್ಲಿ ಮೇ 4 ರಿಂದ 6ರವರೆಗೂ ಮಳೆಯಾಗಲಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳ ಪಶ್ಚಿಮ ಕರಾವಳಿಯಲ್ಲಿ ಮತ್ತು ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕ ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಅಲೆಗಳು ಹೆಚ್ಚಾಗಲಿವೆ.

ಮುಂದಿನ ಐದು ದಿನಗಳಲ್ಲಿ ಪೂರ್ವ ಹಾಗೂ ಈಶಾನ್ಯ ಭಾರತದ ಉಳಿದ ಭಾಗಗಳಿಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.ಇನ್ನು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿನ ತಮಿಳುನಾಡು, ನೆರೆ ಹೊರೆಯ ರಾಜ್ಯಗಳ ಮೇಲೆ ಚಂಡಮಾರುತ ಪ್ರಭಾವದಿಂದಾಗಿ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications