ರಾಜ್ಯದ ಕರಾವಳಿ, ಉತ್ತರ ಭಾರತದಲ್ಲಿ ಭಾರೀ ಮಳೆ ಎಚ್ಚರಿಕೆ

ನವದೆಹಲಿ, ಸೆಪ್ಟೆಂಬರ್, 03: ಕರ್ನಾಟಕದ ಕರಾವಳಿ ಸೇರಿದಂತೆ ಉತ್ತರ ಭಾರತದ ಹಿಮಾಲಯದ ತಪ್ಪಲು, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಮುಂದಿನ 5 ದಿನ(ಸೆಪ್ಟೆಂಬರ್ 4 ರಿಂದ 8) ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಬಿಹಾರ, ಒರಿಸ್ಸಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮೀಜೊರಾಂ, ತ್ರಿಪುರಾದಲ್ಲೂ ವರುಣ ಆರ್ಭಟಿಸಲಿದ್ದಾನೆ. ಸಮುದ್ರ ತೀರದಲ್ಲಿ ಬೀಸುತ್ತಿರುವ ಗಾಳಿಯ ವೇಗ ಹೆಚ್ಚಾಗಿದ್ದು ಮಳೆ ತರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.[ಜಾನ್ ಕೆರಿಗೆ ಟ್ರಾಫಿಕ್ ನರಕ ತೋರಿಸಿದ ದೆಹಲಿ ಮಳೆ]

rain

ಕಳೆದ ವಾರ ಸಹ ನವದೆಹಲಿ, ಗುರು ಗ್ರಾಮ ಪ್ರದೇಶಲ್ಲಿ ಭಾರೀ ಮಳೆಯಾಗಿತ್ತು. ನವದೆಹಲಿಯಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿ ರೈಲು ಸಂಚಾರವನ್ನು ಬಂದ್ ಮಾಡಲಾಗಿತ್ತು.[93 ಅಡಿಗೆ ಕುಸಿದ ಕೆಆರ್‍ಎಸ್ ನೀರಿನ ಮಟ್ಟ: ಆತಂಕ ಶುರು]

ಸಮುದ್ರಲ್ಲಿ ಉಂಟಾಗಿರುವ ಮೇಲ್ಮೈ ಗಾಳಿ ಮಹಾರಾಷ್ಟ್ರ ಸಮುದ್ರ ತೀರದಿಂದ ಕೇರಳ ತೀರದ ಕಡೆಗೆ ವೇಗವಾಗಿ ಬೀಸುತ್ತಿದ್ದು ಚಂಡಮಾರುತದ ರೀತಿ ಅಕ್ಕಪಕ್ಕದ ಪ್ರದೇಶದಲ್ಲಿ ಭಾರೀ ಮಳೆ ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+