Weather Update: ತಮಿಳುನಾಡಿಗೆ ಸೈಕ್ಲೋನ್, ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಗಳಿಗೆ Yellow Alert- ಕರ್ನಾಟಕ ಮೇಲೆ ಪರಿಣಾಮ?
ಚೆನ್ನೈ, ಏಪ್ರಿಲ್ 25: ತಮಿಳುನಾಡಿನ 11 ಜಿಲ್ಲೆಗಳಿಗೆ ಪ್ರಾದೇಶಿಕ ಹವಾಮಾನ ಕೇಂದ್ರವು ಸೋಮವಾರ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಭಾಗಗಳಲ್ಲಿ ಚಾಲ್ತಿಯಲ್ಲಿರುವ ಚಂಡಮಾರುತದ ಪರಿಚಲನೆಯಿಂದಾಗಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
'ಪೂರ್ವ ಮತ್ತು ಪಶ್ಚಿಮ ಮಾರುತಗಳು ದಕ್ಷಿಣ ತಮಿಳುನಾಡಿನ ಮೇಲಿನ ಮಾನ್ಸೂನ್ ವಲಯದ ಕೆಳಗಿನ ಪದರಗಳಲ್ಲಿ ಸಂಧಿಸುತ್ತವೆ. ಈ ಕಾರಣದಿಂದಾಗಿ, ತಮಿಳುನಾಡು, ಪುದುಚೇರಿ ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ( 30 kmph ನಿಂದ 40 kmph ) ಹಗುರವಾಗಿ ಸಾಧಾರಣ ಮಳೆಯಾಗಬಹುದು. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ' ಎಂದು ಹವಾಮಾನ ಇಲಾಖೆ ತನ್ನ ಬುಲೆಟಿನ್ನಲ್ಲಿ ತಿಳಿಸಿದೆ.

ಈರೋಡ್, ನೀಲಗಿರಿ, ಕೊಯಮತ್ತೂರು, ತಿರುಪುರ್, ಥೇಣಿ, ದಿಂಡಿಗಲ್, ಮಧುರೈ, ತೆಂಕಾಸಿ, ವಿರುಧುನಗರ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಸೇರಿದಂತೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಚೆನ್ನೈಗೆ ಸಂಬಂಧಿಸಿದಂತೆ, ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತವರಣವಿರಲಿದೆ. ನಗರದ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಏತನ್ಮಧ್ಯೆ, ಕಾಂಚೀಪುರಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವಾದ ಸೋಮವಾರ ಬಲವಾದ ಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾಗಿದೆ. ಅಂತೆಯೇ, ಸೋಮವಾರ ಮಧುರೈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯು ಬಿಸಿಲಿನ ತಾಪದಿಂದ ಬಿಡುವು ನೀಡುತ್ತದೆ.

ಖಾಸಗಿ ಹವಾಮಾನ ಬ್ಲಾಗರ್ ಪ್ರದೀಪ್ ಜಾನ್ ಅವರು ದಕ್ಷಿಣ ತಮಿಳುನಾಡಿನಲ್ಲಿ ತೀವ್ರವಾದ ಚಂಡಮಾರುತವು ಸೃಷ್ಟಿಯಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನೊಂದು ದಿನ ಹವಾಮಾನ ಮಾದರಿಗಳು ತಮಿಳುನಾಡಿನ ಮೇಲೆ ಗುಡುಗು ಸಹಿತ ಮಳೆಯನ್ನು ಸುರಿಸಲಿವೆ. ಕರ್ನಾಟಕದ ಪಕ್ಕದ ಭಾಗಗಳ ಜೊತೆಗೆ ದಕ್ಷಿಣ ತಮಿಳುನಾಡಿನಲ್ಲಿ ಸಾಕಷ್ಟು ತೀವ್ರವಾದ ಚಂಡಮಾರುತಗಳು ಅಭಿವೃದ್ಧಿಗೊಳ್ಳುತ್ತಿವೆ. ಚೆನ್ನೈನ ಪಶ್ಚಿಮ ಭಾಗದ ಸ್ಥಳಗಳು ಸ್ವಲ್ಪಮಟ್ಟಿಗೆ ಮಳೆಯನ್ನು ಕಾಣಲು ಪ್ರಾರಂಭಿಸುತ್ತಿವೆ' ಎಂದು ಮಾಹಿತಿ ನೀಡಿದ್ದಾರೆ.
ದೇಶದ ಬಹುತೇಕ ಭಾಗಗಳಲ್ಲಿ ಶಾಖದ ಅಲೆ ಇರುವುದಿಲ್ಲ
ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಯಾವುದೇ ಶಾಖದ ಅಲೆ ಇರುವುದಿಲ್ಲ ಎಂದು ಹವಾಮಾನ ಕಚೇರಿ ಇಂದು ತಿಳಿಸಿದೆ. ಶುಕ್ರವಾರದಿಂದ ವಾಯುವ್ಯ ಪ್ರದೇಶದಲ್ಲಿ ತಾಜಾ ಗಾಳಿಯನ್ನು ನಿರೀಕ್ಷಿಸಲಾಗಿದೆ ಎಂದು ಅದು ಮಾಹಿತಿ ನೀಡಿದೆ.

ಈ ತಿಂಗಳ ಆರಂಭದಲ್ಲಿ, ಏಪ್ರಿಲ್- ಜೂನ್ ಅವಧಿಯಲ್ಲಿ ವಾಯುವ್ಯ ಭಾರತವನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಹವಾಮಾನ ಇಲಾಖೆ ಊಹಿಸಿದೆ.
ಭಾನುವಾರದಂದು ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು 36-39 ಡಿಗ್ರಿ ಸೆಲ್ಸಿಯಸ್ ನಡುವೆ ಇದ್ದರೆ, ದೇಶದ ಉಳಿದ ಭಾಗಗಳಲ್ಲಿ 30-35 ಡಿಗ್ರಿ ಇತ್ತು. ಹಿಮಾಲಯ ಪ್ರದೇಶವು 15-25 ಡಿಗ್ರಿಗಳ ನಡುವೆ ಕಂಡಿತು.
'ಮುಂದಿನ ಏಳು ದಿನಗಳಲ್ಲಿ ದೇಶದಲ್ಲಿ ಯಾವುದೇ ಶಾಖದ ಅಲೆಯ ಪರಿಸ್ಥಿತಿಗಳು ಕಂಡುಬರುವುದಿಲ್ಲ' ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಬುಲೆಟಿನ್ನಲ್ಲಿ ತಿಳಿಸಿದೆ.
ಪಶ್ಚಿಮ ಹಿಮಾಲಯ ಪ್ರದೇಶವು ಬುಧವಾರದಿಂದ ಮತ್ತು ವಾಯುವ್ಯ ಬಯಲು ಪ್ರದೇಶದಲ್ಲಿ ಶುಕ್ರವಾರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಮಂಗಳವಾರದಿಂದ ಗುರುವಾರದ ನಡುವೆ ಮಧ್ಯ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ರಾಜ್ಯಗಳಾದ ತಮಿಳು ಮತ್ತು ಕೇರಳದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications