Get Updates
Get notified of breaking news, exclusive insights, and must-see stories!

Weather Update: ಉತ್ತರಾಖಂಡದಲ್ಲಿ ರೆಡ್ ಅಲರ್ಟ್, ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್!

ನವದೆಹಲಿ, ಜುಲೈ. 07: ಭಾರತೀಯ ಹವಾಮಾನ ಇಲಾಖೆ (IMD) ಉತ್ತರಾಖಂಡದಲ್ಲಿ ಜುಲೈ 7 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಹವಾಮಾನ ಇಲಾಖೆಯು ಭಾರೀ ಮಳೆಗೆ ರೆಡ್ ಅಲರ್ಟ್ ಘೋಷಿಸಿದೆ. ಇದರ ಜೊತೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಉತ್ತರಾಖಂಡದ ಚಮೋಲಿ, ರುದ್ರಪ್ರಯಾಗ ಮತ್ತು ಪೌರಿ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ತೆಹ್ರಿ, ಪೌರಿ, ಬಾಗೇಶ್ವರ್, ಅಲ್ಮೋರಾ, ನೈನಿತಾಲ್ ಮತ್ತು ಚಂಪಾವತ್ ಜಿಲ್ಲೆಗಳಲ್ಲಿ ಜುಲೈ 10 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Weather Update Red Alert For Uttarakhand Orange Warning In many States

ಉತ್ತರಾಖಂಡದಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಳೆ ಹೆಚ್ಚಾಗಲಿರುವ ಎಲ್ಲಾ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.

ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಇತರ ಅಧಿಕಾರಿಗಳೊಂದಿಗೆ USDMA ನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಿಂದ ಎಲ್ಲಾ ಜಿಲ್ಲೆಗಳ ಮೇಲೆ ಜಾಗರೂಕ ಮೇಲ್ವಿಚಾರಣೆಯನ್ನು ನಿರ್ವಹಿಸಲು ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದಾರೆ.

ಐಡಿಎಂ ಹವಾಮಾನ ಇಲಾಖೆ ಅಪ್‌ಡೇಟ್: ಪ್ರಮುಖ ಅಂಶಗಳು

ಇಂದು ಜುಲೈ 7 ರಂದು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಭಾರೀ ಮಳೆ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

Weather Update Red Alert For Uttarakhand Orange Warning In many States

ಕರ್ನಾಟಕ, ಮಹಾರಾಷ್ಟ್ರ, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಬಗ್ಗೆ ಐಎಂಡಿ ಆರೆಂಜ್ ಎಚ್ಚರಿಕೆ ನೀಡಿದೆ. ಜುಲೈ 11 ರವರೆಗೆ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಜುಲೈ 9 ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗೋವಾದಲ್ಲಿ ಜುಲೈ 10 ರವರೆಗೆ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳು ಭಾರಿ ಮಳೆಯಾಗಲಿದೆ. ಆಂಧ್ರಪ್ರದೇಶದಲ್ಲಿ ಜುಲೈ 7 ರಂದು ಮತ್ತು ತೆಲಂಗಾಣದಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ.

ಚಾರ್ ಧಾಮ್ ಯಾತ್ರೆ ಸ್ಥಗಿತ

ಗರ್ವಾಲ್ ವಿಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಜುಲೈ 7ರಂದು ಚಾರ್ ಧಾಮ್ ಯಾತ್ರೆಯನ್ನು ಮುಂದೂಡಿದ್ದಾರೆ. ಚಮೋಲಿ ಜಿಲ್ಲೆಯ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಮೋಲಿ ಜಿಲ್ಲೆಯ ಐದು ಸ್ಥಳಗಳಲ್ಲಿ ಅವಶೇಷಗಳು ಬಿದ್ದು ರಾಶಿ ಬಿದ್ದಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಗಡ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

Weather Update Red Alert For Uttarakhand Orange Warning In many States

ಚಮೋಲಿ ಜಿಲ್ಲೆಯ ಭಾನೇರ್ಪಾನಿ, ಹಳೆಯ ನಗರ ಪಂಚಾಯತ್ ಪಿಪಾಲ್ಕೋಟಿ, ಕಾಂಚೆನ್ ಗಂಗಾ, ಚಿಂಕಾ ಪಾಗಲ್ನಾಲಾ ಮತ್ತು ಹೆಲಾಂಗ್ ಬಳಿ ಶಿಲಾಖಂಡರಾಶಿಗಳ ಕಾರಣ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಎಂದು ಉತ್ತರಾಖಂಡದ ಚಮೋಲಿ ಪೋಲೀಸರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+