ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದೊಡ್ಡ ಪಕ್ಷ, ಆದರೆ ಅಧಿಕಾರವಿಲ್ಲ!
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಪೂರ್ಣವಾಗಿ ಮುಗಿದಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಮತದಾನೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಗೆ ಬಿದ್ದಿದ್ದು, ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಎಲ್ಲರ ಕಣ್ಣಿದೆ.
ರಿಬಲ್ಲಿಕ್-ಸಿಎನ್ಎಕ್ಸ್ ನಡೆಸಿರುವ ಪಶ್ಚಿಮ ಬಂಗಾಳ ಚುನಾವಣೆ ಸಮೀಕ್ಷೆ ಪ್ರಕಾರ ಟಿಎಂಸಿಯ ಭದ್ರ ಕೋಟೆಯನ್ನು ಬಿಜೆಪಿ ಈ ಬಾರಿ ಸಡಿಲ ಮಾಡುತ್ತಿದೆ. ಹಾಗೆಂದು ಬಿಜೆಪಿ ಅಧಿಕಾರಕ್ಕೇರುವುದು ಅನುಮಾನವೇ ಎನ್ನುತ್ತಿದೆ ಸಮೀಕ್ಷೆ.
294 ಕ್ಷೇತ್ರಗಳಿಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದಿದ್ದು ರಿಮಬ್ಲಿಕ್-ಸಿಎನ್ಎಕ್ಸ್ ಸಮೀಕ್ಷೆಯ ಪ್ರಕಾರ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುತೆಯಾದರೂ ಸ್ಪಷ್ಟ ಬಹುಮತ ಬಿಜೆಪಿಗೆ ಬರುತ್ತಿಲ್ಲ. ಎರಡು ಬಾರಿ ಸಿಎಂ ಆಗಿರುವ ಮಮತಾ ಬ್ಯಾನರ್ಜಿಗೆ ಸಹ ಸ್ಪಷ್ಟ ಬಹುಮತ ಇಲ್ಲ.

ಸಮೀಕ್ಷೆಯಂತೆ ಬಿಜೆಪಿಯು 138-148 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಟಿಎಂಸಿಯು 128-138 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಆದರೆ ಸರ್ಕಾರ ರಚಿಸಲು ಬೇಕಾಗಿರುವ ಬಹುಮತ 148 ಆಗಿದೆ. ಈ ಸ್ಪಷ್ಟ ಸಂಖ್ಯೆಯನ್ನು ಬಿಜೆಪಿ ಆಗಲಿ ಟಿಎಂಸಿ ಆಗಲಿ ಗಳಿಸುತ್ತಿಲ್ಲ.
ಆದರೆ ಪಶ್ಚಿಮ ಬಂಗಾಳದ ಇತರೆ ಎಡಪಕ್ಷಗಳು 11-21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು ಒಂದೊಮ್ಮೆ ಟಿಎಂಸಿ ಹಾಗೂ ಬಿಜೆಪಿ ಇಬ್ಬರಲ್ಲಿ ಯಾರಿಗೂ ಬಹುಮತ ಬಾರದಿದ್ದರೂ ಸಹ ಇತರೆ ಎಡಪಕ್ಷಗಳ ಸಹಾಯದೊಂದಿಗೆ ಮಮತಾ ಬ್ಯಾನರ್ಜಿ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 2 ರಂದು ಹೊರಬೀಳಲಿದ್ದು ಸ್ಪಷ್ಟ ಚಿತ್ರಣ ಅಂದೇ ಗೊತ್ತಾಗಲಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications