ಭಾರತ ಲಾಕ್ ಡೌನ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲವೇ ಎಂದ ದೀದಿ!
ನವದೆಹಲಿ, ಏಪ್ರಿಲ್.27: ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಭಾರತ ಲಾಕ್ ಡೌನ್ ಘೋಷಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿರ್ಧಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಸಂವಾದ ನಡೆಸಿದ ಮಮತಾ ಬ್ಯಾನರ್ಜಿ ಮೇ.21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಲಾಕ್ ಡೌನ್ ಮುಂದುವರಿಯುವುದಂತೂ ಖಚಿತವಾಗಿದ್ದು ಕೆಲವು ಪ್ರದೇಶಗಳಿಗೆ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಗ್ರೀನ್, ಆರೆಂಜ್ ಹಾಗೂ ರೆಡ್ ಝೋನ್ ಗಳನ್ನಾಗಿ ವಿಂಗಡನೆ ಮಾಡಲಾಗಿದ್ದು, ಯಾವ ವಲಯಕ್ಕೆ ಏನೆಲ್ಲ ವಿನಾಯಿತಿಗಳನ್ನು ನೀಡಬೇಕು ಎಂಬುದನ್ನು ಇನ್ನಷ್ಟೇ ತೀರ್ಮಾನಿಸಬೇಕಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಲಾಕ್ ಡೌನ್ ಘೋಷಿಸುವುದೇಕೆ, ಸಡಿಲಿಕೆ ಮಾಡುವುದೇಕೆ?
ಭಾರತ ಲಾಕ್ ಡೌನ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸರಿಯಾದ ಸ್ಪಷ್ಟತೆಯಿಲ್ಲ. ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಣೆಗೆ ಬೆಂಬಲ ಸೂಚಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಯಾವ ರೀತಿ ಲಾಕ್ ಡೌನ್ ಮುಂದುವರಿಸಬೇಕು ಎಂಬುದರ ಬಗ್ಗೆ ಕ್ಲ್ಯಾರಿಟಿ ಇಲ್ಲ. ಒಂದು ಕಡೆಯಲ್ಲಿ ಲಾಕ್ ಡೌನ್ ವಿಸ್ತರಿಸಲಾಗುತ್ತದೆ ಎನ್ನುವ ಸರ್ಕಾರ, ಇನ್ನೊಂದು ಕಡೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿದೆ. ಹೀಗೆ ಅನುಮತಿ ನೀಡಿದ್ದಲ್ಲಿ ಅದು ಲಾಕ್ ಡೌನ್ ಹೇಗೆ ಆಗುತ್ತದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ.

"ಒಳ್ಳೆಯ ಕೆಲಸಗಳ ಬಗ್ಗೆ ಯಾರೂ ಮಾತಾಡಲ್ಲ"
ಪಶ್ಚಿಮ ಬಂಗಾಳದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಪ್ರಾಧಿಕಾರಗಳನ್ನು ರಚನೆ ಮಾಡಲಾಗಿದೆ. ರಾಜ್ಯ ಸರ್ಕಾರವು ಉತ್ತಮ ಕಾರ್ಯಗಳನ್ನು ಜಾರಿಗೊಳಿಸಿದಾಗ ಅದರ ಬಗ್ಗೆ ಯಾರೊಬ್ಬರೂ ಮಾತನಾಡುವುದಿಲ್ಲ. ಅದರ ಬದಲು ಒಂದೇ ಒಂದು ತಪ್ಪು ಹೆಜ್ಜೆ ಇಟ್ಟರೆ ಎಲ್ಲರೂ ಅದರ ಬಗ್ಗೆಯೇ ವಾಗ್ದಾಳಿ ನಡೆಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಆಪಾದಿಸಿದರು.

ಕ್ವಾರೆಂಟೈನ್ ಗಿಂತ ಗೃಹ ದಿಗ್ಬಂಧನವೇ ಲೇಸು
ಪಶ್ಚಿಮ ಬಂಗಾಳದಲ್ಲಿ ಕೊರೊನಾ ವೈರಸ್ ಸೋಂಕಿತರನ್ನು ಕ್ವಾರೆಂಟೈನ್ ಕೇಂದ್ರಗಳಿಗೆ ರವಾನಿಸುವ ಬದಲು ಸಾಧ್ಯವಾದಷ್ಟು ಗೃಹ ದಿಗ್ಬಂಧನದಲ್ಲಿ ಇರಿಸುವತ್ತ ಲಕ್ಷ್ಯ್ ವಹಿಸಲಾಗಿದೆ. ದೇಶದಲ್ಲಿ ವೈದ್ಯಕೀಯ ಕಿಟ್ ಸಮಸ್ಯೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಲು ಸೋಂಕಿತರು ಸ್ವಯಂಪ್ರೇರಿತರಾಗಿ ಗೃಹ ದಿಗ್ಬಂಧನದಲ್ಲಿ ಎಚ್ಚರಿಕೆ ವಹಿಸಿಕೊಂಡಿರಬೇಕು. ಗೃಹ ದಿಗ್ಬಂಧನ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಮಾದರಿ ಕ್ರಮ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ದೀದಿ ಗುಡುಗು
ರಾಜ್ಯ ಸರ್ಕಾರವು ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಬದಲಿಗೆ ಅಸಹಾಯ ಸ್ಥಿತಿಯಲ್ಲಿ ಇರುವ ಬಡವರು ಮತ್ತು ಅಂಗವಿಕಲರಿಗೆ ಮಾತ್ರ ಅಗತ್ಯ ನೆರವು ನೀಡಲಾಗುತ್ತದೆ. ಏಕೆಂದರೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರವು ಅಗತ್ಯವಿರುವ ಆರ್ಥಿಕ ನೆರವು ನೀಡಿಲ್ಲ ಎಂದು ದೀದಿ ಗುಡುಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications