Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ
Government Employees: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು (ಭಾನುವಾರ, ಮಾರ್ಚ್ 15) ರಾಜ್ಯದ ಸಾವಿರಾರು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹಳೆಯ ಬಾಕಿ ಇರುವ ತುಟ್ಟಿಭತ್ಯೆ (DA) ಪಾವತಿಸುವುದಾಗಿ ಘೋಷಣೆ ಮಾಡಿದ್ದಾರೆ.
2009ರ ಆರ್ಒಪಿಎ ಅಡಿಯಲ್ಲಿ ಬಾಕಿ ಇರುವ ಡಿಎ ಹಣವನ್ನು ಮಾರ್ಚ್ ತಿಂಗಳಿನಿಂದಲೇ ನೌಕರರ ಖಾತೆಗೆ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗವು ಇನ್ನೂ ಕೆಲವೇ ಕ್ಷಣಗಳಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಈ ಘೋಷಣೆಗೂ ಕೆಲವೇ ಗಂಟೆಗಳ ಮೊದಲು ಮಮತಾ ಮಮತಾ ಅವರ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಡಿಎ ಜೊತೆಗೆ, ಹಿಂದೂ ಅರ್ಚಕರು ಮತ್ತು ಮುಸ್ಲಿಂ ಮೌಲ್ವಿಗಳ ಮಾಸಿಕ ಗೌರವಧನವನ್ನು 500 ರೂಪಾಯಿಗಳಷ್ಟು ಹೆಚ್ಚಿಸಿ, ಒಟ್ಟು 2,000 ರೂಪಾಯಿಗೆ ಏರಿಸಲಾಗಿದೆ. ಶಿಕ್ಷಕರು, ಪಂಚಾಯತ್ ಮತ್ತು ಮುನ್ಸಿಪಲ್ ಸಿಬ್ಬಂದಿ ಸೇರಿದಂತೆ ಸುಮಾರು 20 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರು ಈ ನಿರ್ಧಾರದಿಂದ ಪ್ರಯೋಜನ ಪಡೆಯಲಿದ್ದಾರೆ.
ನೀತಿ ಸಂಹಿತೆ ಜಾರಿಗೂ ಮುನ್ನ ಮಮತಾ ಮಹತ್ವದ ಘೋಷಣೆ
ಇಂದು ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಲಿದೆ. ಆಯೋಗವು ಚುನಾವಣಾ ದಿನಾಂಕಗಳನ್ನು ಘೋಷಿಸಿದ ಕ್ಷಣದಿಂದಲೇ ಈ ಎಲ್ಲಾ ರಾಜ್ಯಗಳಲ್ಲಿ 'ಮಾದರಿ ನೀತಿ ಸಂಹಿತೆ' ಜಾರಿಯಾಗುತ್ತದೆ. ಅಂದರೆ, ಇಂದಿನಿಂದ ಸರ್ಕಾರಗಳು ಯಾವುದೇ ಹೊಸ ಯೋಜನೆ ಅಥವಾ ಜನಪ್ರಿಯ ಘೋಷಣೆಗಳನ್ನು ಮಾಡುವಂತಿಲ್ಲ.
ನೀತಿ ಸಂಹಿತೆ ಜಾರಿಗೆ ಬರಲು ಕೆಲವೇ ಗಂಟೆಗಳಿರುವಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಪಾವತಿಸುವುದಾಗಿ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರ ಪುರೋಹಿತರು ಮತ್ತು ಮೌಲವಿಗಳು ಸಲ್ಲಿಸಿದ್ದ ಎಲ್ಲಾ ಹೊಸ ಅರ್ಜಿಗಳನ್ನು ಸರಿಯಾಗಿ ಅನುಮೋದಿಸಿದೆ. ಪ್ರತಿಯೊಂದು ಸಮುದಾಯ ಮತ್ತು ಪ್ರತಿಯೊಂದು ಸಂಪ್ರದಾಯವನ್ನು ಮೌಲ್ಯೀಕರಿಸುವ ಮತ್ತು ಬಲಪಡಿಸುವ ವಾತಾವರಣವನ್ನು ನಾವು ಸೃಷ್ಟಿಸಿದ್ದೇವೆ. ನಮ್ಮ ಶ್ರೀಮಂತ ಆಧ್ಯಾತ್ಮಿಕ ಪರಂಪರೆಯ ರಕ್ಷಕರಿಗೆ ಅರ್ಹವಾದ ಮನ್ನಣೆ ಮತ್ತು ಬೆಂಬಲ ನೀಡುವುದು ನಮ್ಮ ಪ್ರಯತ್ನ ಎಂದು ಅವರು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications