ಸೋನಿಯಾಗೆ ಆಘಾತ: ಕಾಂಗ್ರೆಸ್, ಎಡಪಕ್ಷಗಳಿಗೆ 'ನನ್ನ ದಾರಿ ನನಗೆ ಎಂದ' ಮಮತಾ ಬ್ಯಾನರ್ಜಿ
ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ, ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ದದ ಹೋರಾಟದ ಕಾವು ಸ್ವಲ್ಪ ಕಮ್ಮಿಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಆರಂಭದಲ್ಲಿ ತೋರಿದ ಆಕ್ರಮಣಕಾರಿ ಧೋರಣೆಯ ವೇಗ ಹಿಂದಿನಂತಿಲ್ಲ.
ಎಲ್ಲಾ ವಿರೋಧ ಪಕ್ಷಗಳು ಒಂದಾಗಿ, ಈ ಮಸೂದೆಯ ವಿರುದ್ದ ಹೋರಾಡಬೇಕು ಎನ್ನುವ ಎನ್ಡಿಯೇತರ ಪಕ್ಷಗಳ ನಿಲುವಿನಲ್ಲಿ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ, ಪಶ್ಚಿಮ ಬಂಗಾಳದ ಫೈರ್ ಬ್ರಾಂಡ್ ಸಿಎಂ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ.
ವಿವಿಧ ಸಂಘಟನೆಗಳು ಕರೆನೀಡಿದ್ದ ಭಾರತ್ ಬಂದ್ ವಿಚಾರದಲ್ಲೂ ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ದ ಹರಿಹಾಯ್ದಿದಿದ್ದ ಮಮತಾ ಈಗ, ಪೌರತ್ವ ವಿಚಾರದ ಹೋರಾಟದಲ್ಲೂ ನನ್ನ ದಾರಿ ನನಗೆ ಎಂದಿದ್ದಾರೆ.
ಭಾರತ್ ಬಂದ್ ವೇಳೆ ಪಶ್ಚಿಮ ಬಂಗಾಳದಲ್ಲಿ ಅಲ್ಲಲ್ಲಿ ಹಿಂಸಾಚಾರಗಳು ನಡೆದಿದ್ದವು. ಇದಕ್ಕೆ, ಮಮತಾ, ನೇರವಾಗಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಕಾರಣ ಎಂದು ದೂರಿದ್ದರು.

ಅಂತರ ಕಾಯ್ದುಕೊಂಡ ತೃಣಮೂಲ ಕಾಂಗ್ರೆಸ್
ಪೌರತ್ವ ತಿದ್ದುಪಡಿ ಮಸೂದೆಯ ಹೋರಾಟದಲ್ಲಿ ವಿರೋಧ ಪಕ್ಷಗಳೆಲ್ಲಾ ಒಗ್ಗಟ್ಟಿನ ಮಂತ್ರ ಜಪಿಸಲು, ಸೋನಿಯಾ ಆದಿಯಾಗಿ ಯುಪಿಎ ಮೈತ್ರಿಕೂಟ ಮತ್ತು ಎಡಪಕ್ಷಗಳ ಹಿರಿಯ ಮುಖಂಡರು ಪ್ರಯತ್ನಿಸಿದ್ದರು. ಆದರೆ, ಪ್ರಮುಖ ಪಾತ್ರ ವಹಿಸಬಲ್ಲ ತೃಣಮೂಲ ಕಾಂಗ್ರೆಸ್ ಇದರಿಂದ ಅಂತರ ಕಾಯ್ದುಕೊಂಡಿದೆ.

ಸೋನಿಯಾ ಕರೆದ ವಿಪಕ್ಷ ನಾಯಕರ ಸಭೆ
ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಾಸ್ ಆಗಿರುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಚರ್ಚಿಸಲು, ಎಐಸಿಸಿ ಹಂಗಾಮೀ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಪಕ್ಷಗಳ ಸಭೆಯನ್ನು ದೆಹಲಿಯಲ್ಲಿ, ಇದೇ ಬರುವ ಸೋಮವಾರ (ಜ 13) ಕರೆದಿದ್ದಾರೆ.

ಸೋನಿಯಾ ಕರೆದಿರುವ ಸಭೆಗೆ ಮಮತಾ ಬಹಿಷ್ಕಾರ
ಆದರೆ, ಯುಪಿಎ ಮೈತ್ರಿಕೂಟದಡಿ ತನ್ನ ಪಕ್ಷವನ್ನು ಗುರುತಿಸಿಕೊಳ್ಳಲು ಬಯಸದ ಮಮತಾ ಬ್ಯಾನರ್ಜಿ, ಸೋನಿಯಾ ಕರೆದಿರುವ ಸಭೆಯನ್ನು ಬಹಿಷ್ಖರಿಸುವುದಾಗಿ ಹೇಳಿದ್ದಾರೆ. "ದೆಹಲಿಯಲ್ಲಿ ಕರೆಯಲಾಗಿರುವ ಸಭೆಗೆ ಹಾಜರಾಗುವುದಿಲ್ಲ"ಎಂದು ನೇರವಾಗಿ ಮಮತಾ ಹೇಳಿದ್ದಾರೆ.

24 ಪರಗಣ ಜಿಲ್ಲೆಯಲ್ಲಿ ಭಾರೀ ರ್ಯಾಲಿ
ಸಿಎಎ ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಭಾರೀ ರ್ಯಾಲಿಯನ್ನು ನಡೆಸಿದ್ದರು. ಪೌರತ್ವ ವಿರುದ್ದದ ಹೋರಾಟದ ವಿಚಾರದಲ್ಲಿ, ತೃಣಮೂಲ ಕಾಂಗ್ರೆಸ್, ತನ್ನ ಹೋರಾಟದ ರೂಪುರೇಷೆಯನ್ನು ತಾನೇ ರೂಪಿಸುತ್ತಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳ ಜೊತೆ, ಮಮತಾ ಅಂತರ ಕಾಯ್ದುಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. (ಚಿತ್ರ:ಪಿಟಿಐ)

ರಾಜಕೀಯ ಅಸ್ತಿತ್ವವಿಲ್ಲದವರು, ಬಂದ್ ಎನ್ನುವ ನಾಟಕವನ್ನು ಮಾಡುತ್ತಾರೆ
"ರಾಜ್ಯಗಳಲ್ಲಿ ರಾಜಕೀಯ ಅಸ್ತಿತ್ವವಿಲ್ಲದವರು, ಬಂದ್ ಎನ್ನುವ ನಾಟಕವನ್ನು ಮಾಡುತ್ತಾ, ಈ ದೇಶದ ಆರ್ಥಿಕತೆಯನ್ನು ಇನ್ನಷ್ಟು ಹಾಳು ಮಾಡುತ್ತಿದ್ದಾರೆ. "ಭಾರತ್ ಬಂದ್ ಅನ್ನು ಕೇಂದ್ರದ ಆರ್ಥಿಕ ನೀತಿ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರವ್ಯಾಪಿ ಎನ್ಆರ್ಸಿ ವಿರುದ್ಧ ಕರೆಯಲಾಗಿದೆ, ಆದರೆ ತಮ್ಮ ಪಕ್ಷ ಮತ್ತು ಸರ್ಕಾರವು ಯಾವುದೇ ರೀತಿಯ ಮುಷ್ಕರದ ವಿರುದ್ಧವಾಗಿದೆ" ಎಂದು, ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ದ ಕಿಡಿಕಾರಿದ್ದರು. (ಚಿತ್ರ:ಪಿಟಿಐ)
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications