ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳ ಎಂಟ್ರಿ, ಚುಣಾವಣೆಗೆ ಮೊದಲೇ ಭಾರಿ ಭದ್ರತೆ | West Bengal Election
ಚುನಾವಣೆ ಸದ್ದು ಮತ್ತೆ ಆರಂಭ ಆಗಲಿದ್ದು, ದೇಶದಲ್ಲಿ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಒಟ್ಟು 4 ರಾಜ್ಯಗಳೂ ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ಆಟ ಶುರುವಾಗಿದ್ದು, ಇನ್ನೇನು ಈ ರಾಜ್ಯದ ವಿಧಾನಸಭೆಯ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿವೆ. ಅಧಿಕೃತವಾಗಿ ಚುನಾವಣೆ ದಿನಾಂಕ ಘೋಷಿಸಲು ಕೂಡ ಸಿದ್ಧತೆ ಸಾಗಿದ್ದು, ಇದಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಿಢೀರ್ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳು ಎಂಟ್ರಿ ಕೊಡುತ್ತಿವೆ, ಹಾಗಾದ್ರೆ ಇದಕ್ಕೆ ಕಾರಣ ಏನು? ತಿಳಿಯೋಣ ಬನ್ನಿ.
ಅಂದಹಾಗೆ, ಪಶ್ಚಿಮ ಬಂಗಾಳ ಮೊದಲೇ ಸೂಕ್ಷ್ಮ ರಾಜ್ಯವಾಗಿದೆ. ಪಶ್ಚಿಮ ಬಂಗಾಳದ ಚುನಾವಣೆಗೆ ಸಕಲ ಸಿದ್ಧತೆ ಸಾಗಿದೆ. ಅದರಲ್ಲೂ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಹಾಗೂ ಟಿಎಂಸಿ ನಡುವೆ ದೊಡ್ಡ ರಾಜಕೀಯ ಕದನ ಗ್ಯಾರಂಟಿ ಆಗಿದ್ದು, ಸೋಲು & ಗೆಲುವಿನ ಲೆಕ್ಕಾಚಾರ ಜೋರಾಗುತ್ತಿದೆ. ಇದೇ ಸಮಯದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ದಿಢೀರ್ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 480 ತುಕಡಿಗಳನ್ನು ಮಾರ್ಚ್ 1 ರಿಂದಲೇ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಯೋಜಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.

2 ಹಂತದಲ್ಲಿ ಭದ್ರತಾ ಸಿಬ್ಬಂದಿ ಆಗಮನ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮಯದಲ್ಲಿ ಪದೇ ಪದೇ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತವೆ ಎಂಬ ಆರೋಪ ಇದೆ. ಅದರಲ್ಲೂ 2026 ಚುನಾವಣೆ ಜಿದ್ದಾಜಿದ್ದಿನ ಅಖಾಡವಾಗಿದೆ, ಇದೇ ಕಾರಣಕ್ಕೆ ಪರಿಸ್ಥಿತಿ ಸೂಕ್ಷ್ಮವಾಗಿದೆ. ಹೀಗಾಗಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕಾರಣಕ್ಕೆ ಮುಂದಿನ ಸೋಮವಾರ, ಎಂದರೆ ಮಾರ್ಚ್ 1 ರಿಂದ ಮೊದಲ ತಂಡದ 240 ಕೇಂದ್ರ ತುಕಡಿಗಳನ್ನ ಭದ್ರತೆಗಾಗಿ ನಿಯೋಜನೆ ಮಾಡಲು ಇದೀಗ ನಿರ್ಧಾರ ಮಾಡಲಾಗಿದೆ. ಇನ್ನು ಆ ನಂತರ ಮಾ. 10ಕ್ಕೆ 2ನೇ ಹಂತದಲ್ಲಿ 240 ಕೇಂದ್ರ ತುಕಡಿಗಳನ್ನ ನಿಯೋಜನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ನಿಯೋಜನೆ ಆಗುತ್ತಿರುವ ಕೇಂದ್ರ ತುಕಡಿಗಳಲ್ಲಿ, ಕೇಂದ್ರ ಮೀಸಲು ಪೊಲೀಸ್ ಪಡೆಯೂ ಸೇರಿದಂತೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಇಂಡೊ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಬಲದ ಸಿಬ್ಬಂದಿ ಇರಲಿದ್ದಾರೆ. ಈ ಮೂಲಕ ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯಲು, ಯಾವುದೇ ರೀತಿಯ ಅಶಾಂತಿ ಸೃಷ್ಟಿಸದ ರೀತಿ ಕ್ರಮ ಕೈಗೊಳ್ಳಲು ಇದೀಗ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂದ್ರೆ ಎಸ್ಐಆರ್ ನಂತರ, ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಜೊತೆಗೆ ಮಾರ್ಚ್ ತಿಂಗಳಲ್ಲಿ ಚುನಾವಣೆ ದಿನಾಂಕವೂ ಪ್ರಕಟವಾಗಲಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications