ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳ ಎಂಟ್ರಿ, ಚುಣಾವಣೆಗೆ ಮೊದಲೇ ಭಾರಿ ಭದ್ರತೆ | West Bengal Election
ಚುನಾವಣೆ ಸದ್ದು ಮತ್ತೆ ಆರಂಭ ಆಗಲಿದ್ದು, ದೇಶದಲ್ಲಿ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಒಟ್ಟು 4 ರಾಜ್ಯಗಳೂ ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ಆಟ ಶುರುವಾಗಿದ್ದು, ಇನ್ನೇನು ಈ ರಾಜ್ಯದ ವಿಧಾನಸಭೆಯ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿವೆ. ಅಧಿಕೃತವಾಗಿ ಚುನಾವಣೆ ದಿನಾಂಕ ಘೋಷಿಸಲು ಕೂಡ ಸಿದ್ಧತೆ ಸಾಗಿದ್ದು, ಇದಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಿಢೀರ್ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳು ಎಂಟ್ರಿ ಕೊಡುತ್ತಿವೆ, ಹಾಗಾದ್ರೆ ಇದಕ್ಕೆ ಕಾರಣ ಏನು? ತಿಳಿಯೋಣ ಬನ್ನಿ.
ಅಂದಹಾಗೆ, ಪಶ್ಚಿಮ ಬಂಗಾಳ ಮೊದಲೇ ಸೂಕ್ಷ್ಮ ರಾಜ್ಯವಾಗಿದೆ. ಪಶ್ಚಿಮ ಬಂಗಾಳದ ಚುನಾವಣೆಗೆ ಸಕಲ ಸಿದ್ಧತೆ ಸಾಗಿದೆ. ಅದರಲ್ಲೂ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಹಾಗೂ ಟಿಎಂಸಿ ನಡುವೆ ದೊಡ್ಡ ರಾಜಕೀಯ ಕದನ ಗ್ಯಾರಂಟಿ ಆಗಿದ್ದು, ಸೋಲು & ಗೆಲುವಿನ ಲೆಕ್ಕಾಚಾರ ಜೋರಾಗುತ್ತಿದೆ. ಇದೇ ಸಮಯದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ದಿಢೀರ್ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 480 ತುಕಡಿಗಳನ್ನು ಮಾರ್ಚ್ 1 ರಿಂದಲೇ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಯೋಜಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.

2 ಹಂತದಲ್ಲಿ ಭದ್ರತಾ ಸಿಬ್ಬಂದಿ ಆಗಮನ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮಯದಲ್ಲಿ ಪದೇ ಪದೇ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತವೆ ಎಂಬ ಆರೋಪ ಇದೆ. ಅದರಲ್ಲೂ 2026 ಚುನಾವಣೆ ಜಿದ್ದಾಜಿದ್ದಿನ ಅಖಾಡವಾಗಿದೆ, ಇದೇ ಕಾರಣಕ್ಕೆ ಪರಿಸ್ಥಿತಿ ಸೂಕ್ಷ್ಮವಾಗಿದೆ. ಹೀಗಾಗಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕಾರಣಕ್ಕೆ ಮುಂದಿನ ಸೋಮವಾರ, ಎಂದರೆ ಮಾರ್ಚ್ 1 ರಿಂದ ಮೊದಲ ತಂಡದ 240 ಕೇಂದ್ರ ತುಕಡಿಗಳನ್ನ ಭದ್ರತೆಗಾಗಿ ನಿಯೋಜನೆ ಮಾಡಲು ಇದೀಗ ನಿರ್ಧಾರ ಮಾಡಲಾಗಿದೆ. ಇನ್ನು ಆ ನಂತರ ಮಾ. 10ಕ್ಕೆ 2ನೇ ಹಂತದಲ್ಲಿ 240 ಕೇಂದ್ರ ತುಕಡಿಗಳನ್ನ ನಿಯೋಜನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ನಿಯೋಜನೆ ಆಗುತ್ತಿರುವ ಕೇಂದ್ರ ತುಕಡಿಗಳಲ್ಲಿ, ಕೇಂದ್ರ ಮೀಸಲು ಪೊಲೀಸ್ ಪಡೆಯೂ ಸೇರಿದಂತೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಇಂಡೊ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಬಲದ ಸಿಬ್ಬಂದಿ ಇರಲಿದ್ದಾರೆ. ಈ ಮೂಲಕ ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯಲು, ಯಾವುದೇ ರೀತಿಯ ಅಶಾಂತಿ ಸೃಷ್ಟಿಸದ ರೀತಿ ಕ್ರಮ ಕೈಗೊಳ್ಳಲು ಇದೀಗ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂದ್ರೆ ಎಸ್ಐಆರ್ ನಂತರ, ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಜೊತೆಗೆ ಮಾರ್ಚ್ ತಿಂಗಳಲ್ಲಿ ಚುನಾವಣೆ ದಿನಾಂಕವೂ ಪ್ರಕಟವಾಗಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications