ಮಮತಾ ಬ್ಯಾನರ್ಜಿಗೆ ಸೋಲಿನ ರುಚಿ ತೋರಿಸಲು ಸಜ್ಜಾದ ಬಿಜೆಪಿ ನಾಯಕರು | West Bengal Election
ಪಶ್ಚಿಮ ಬಂಗಾಳ ಚುನಾವಣೆ ಅಖಾಡದಲ್ಲಿ ಈ ಬಾರಿ ಮಮತಾ ಬ್ಯಾನರ್ಜಿಗೆ ಎಲ್ಲಾ ಉಲ್ಟಾ ಆಗ್ತಾ ಇದೆ ಎನ್ನಬಹುದು. ಒಂದು ಕಡೆ ಪಕ್ಷದಲ್ಲೇ ಎದುರಾಗಿರುವ ಆಂತರಿಕ ತಿಕ್ಕಾಟ ಹಾಗೂ ಇಷ್ಟು ವರ್ಷಗಳ ಕಾಲ ಸತತ ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಿರುವ ಟಿಎಂಸಿ ಪಕ್ಷಕ್ಕೆ ಅದೇ ರಾಜ್ಯದಲ್ಲಿ, ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಕೂಡ ಜೋರಾಗಿದೆ. ಇದು ಸಾಲದು ಎನ್ನುವಂತೆ ಪದೇ ಪದೇ ಈ ರಾಜ್ಯದಲ್ಲಿ ಗಲಾಟೆಗಳು ಕೂಡ ಹೆಚ್ಚಾಗುತ್ತಿವೆ. ಹೀಗಿದ್ದಾಗ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುಣಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಇಂತಹ ಸಮಯದಲ್ಲೇ ಮಮತಾ ಬ್ಯಾನರ್ಜಿ & ತಂಡಕ್ಕೆ ಸೋಲಿನ ಮುನ್ಸೂಚನೆ ಸಿಕ್ಕಂತೆ ಕಾಣುತ್ತಿದೆ.
ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಾಯಕರ ನಡುವೆ ಕಳೆದ ಹಲವು ವರ್ಷಗಳಿಂದ ಕೂಡ ಭಾರಿ ದೊಡ್ಡ ಯುದ್ಧವೇ ನಡೆದುಕೊಂಡು ಬಂದಿದೆ. ಅದರಲ್ಲೂ ಕಳೆದ 2 ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳ ಅತಿದೊಡ್ಡ ಹಿಂಸಾಚಾರಕ್ಕೆ ಸಾಕ್ಷಿ ಆಗಿದೆ ಎಂಬ ಆರೋಪಗಳು ಕೂಡ ಇವೆ. ಈ ಸಮಯದಲ್ಲಿ ಕಾರ್ಯಕರ್ತರ ಗಲಾಟೆ ಕೂಡ ಇಡೀ ದೇಶದ ಗಮನ ಸೆಳೆದಿತ್ತು, ಹಾಗೇ ಒಂದು ಬಾರಿ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಬೇಕು ಎಂಬ ಒನ್ಲೈನ್ ಅಜೆಂಡಾ ಮೂಲಕ ಮುನ್ನುಗ್ಗುತ್ತಿದೆ ಬಿಜೆಪಿ ಈ ಬಾರಿ. ಅದರಲ್ಲೂ ಸತತ ಗೆದ್ದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ನಡೆಸಿದ್ದು, ಸಹಜವಾಗಿ ಆಡಳಿತ ವಿರೋಧಿ ಅಲೆ ಕೂಡ ಜೋರಾಗಿದೆ. ಇದನ್ನೆಲ್ಲಾ ಬಳಸಿಕೊಂಡು ಮಮತಾಗೆ ಬುದ್ಧಿ ಕಲಿಸಲು ಕಮಲ ಪಡೆ ಸನ್ನದ್ಧವಾಗಿದೆ. ಇಂತಹ ಸಮಯದಲ್ಲೇ, ಮಮತಾ ಬ್ಯಾನರ್ಜಿಗೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ.

ಮತದಾರರ ಪಟ್ಟಿ ಪರಿಷ್ಕರಣೆ ಎಫೆಕ್ಟ್!
ಮಮತಾ ಬ್ಯಾನರ್ಜಿಗೆ ಈಗ ದೊಡ್ಡ ಪೆಟ್ಟು ಏನೆಂದರೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಟಿಎಂಸಿ ಪಕ್ಷದ ಮತದಾರರ ಪ್ರಮಾಣ ಭಾರಿ ದೊಡ್ಡ ಮಟ್ಟದಲ್ಲಿ ಕುಸಿತ ಕಾಣುವ ಆತಂಕ ಕಾಡುತ್ತಿದೆ ಮಮತಾ ಬ್ಯಾನರ್ಜಿ ತಂಡಕ್ಕೆ. ಅದರಲ್ಲೂ ಪ್ರಮುಖ ವಿಧಾನಸಭೆ ಕ್ಷೇತ್ರಗಳ ಪರಿಸ್ಥಿತಿ ಕೂಡ ಕಠಿಣವಾಗಿದ್ದು, ಇಲ್ಲಿ ಗೆಲ್ಲುವುದು ಬಿಡಿ ಠೇವಣಿಗೆ ಕೂಡ ಟಿಎಂಸಿ ಪಕ್ಷ ಒದ್ದಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ಮತ್ತೊಂದು ಕಡೆ ಬಿಜೆಪಿಯ ನಾಯಕರು ಪಕ್ಕಾ ಪ್ಲಾನ್ ಮಾಡಿ, ಟಿಎಂಸಿ ವಿರುದ್ಧ ರಣತಂತ್ರ ಹೆಣೆದು ಅಭ್ಯರ್ಥಿಗಳ ಪಡೆಯನ್ನು ಆಯ್ಕೆ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಮುನ್ಸೂಚನೆ ಇದೆ ಎಂಬ ಚರ್ಚೆ ಶುರುವಾಗಿದೆ.
ಒಟ್ನಲ್ಲಿ ಮಮತಾ ಬ್ಯಾನರ್ಜಿಗೆ ಒಂದು ಕಡೆ ಆಂತರಿಕ ತಿಕ್ಕಾಟದ ಸಮಸ್ಯೆ ಕಾಡುತ್ತಿದ್ದರೆ, ಇನ್ನೊಂದು ಕಡೆ ಮತದಾರರ ಪಟ್ಟಿ ಪರಿಷ್ಕರಣೆ ಕೂಡ ಸವಾಲು ಸೃಷ್ಟಿಸಿದೆ ಟಿಎಂಸಿ ಪಕ್ಷಕ್ಕೆ. ಹಾಗೇ ಸತತವಾಗಿ ಆಡಳಿತ ನಡೆಸಿರುವ ಕಾರಣಕ್ಕೆ ಆಡಳಿತ ವಿರೋಧಿ ಅಲೆ ಕೂಡ ಸೃಷ್ಟಿಯಾಗಿದ್ದು, ಈ ಬಾರಿ ಎಲೆಕ್ಷನ್ ಮಮತಾ ಬ್ಯಾನರ್ಜಿ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications