Get Updates
Get notified of breaking news, exclusive insights, and must-see stories!

ಇಡಿಯಿಂದ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಬಂಧನ

ಕೋಲ್ಕತ್ತಾ, ಅಕ್ಟೋಬರ್‌ 27: ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಜಾರಿ ನಿರ್ದೇಶನಾಲಯ 17-18 ಗಂಟೆಗಳ ವಿಚಾರಣೆಯ ನಂತರ ಶುಕ್ರವಾರ ಮುಂಜಾನೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಚಿವರನ್ನು ಬಂಧಿಸಲಾಯಿತು ಎಂದು ತಿಳಿದು ಬಂದಿದೆ.

west-bengal-minister-jyotipriyo-mallick

ಕೋಲ್ಕತ್ತಾದ ಹೊರವಲಯದಲ್ಲಿರುವ ಸಾಲ್ಟ್ ಲೇಕ್ ಪ್ರದೇಶದ ಮನೆಯಿಂದ 3.30 ರ ಸುಮಾರಿಗೆ ಇಲ್ಲಿನ ಕೇಂದ್ರೀಯ ಏಜೆನ್ಸಿಯ ಕಚೇರಿಗೆ ಮಲ್ಲಿಕ್ ಅವರನ್ನು ಕರೆದೊಯ್ಯಲಾಯಿತು. ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಅಲ್ಲಿ ಮಲ್ಲಿಕ್‌ ಅವರನ್ನು ಕಸ್ಟಡಿಗೆ ಕೇಳುತ್ತದೆ ಎಂದು ಇಡಿ ಅಧಿಕಾರಿಗಳು ತಿಳಿಸಿದರು.

ಆಪಾದಿತ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧಿಸಿದ ನಂತರ ಟಿಎಂಸಿ ಸಚಿವರು "ನಾನು ದೊಡ್ಡ ಪಿತೂರಿಯ ಬಲಿಪಶು". ಬಿಜೆಪಿ ಮತ್ತು ಟಿಎಂಸಿ ಪಕ್ಷದ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ಈ ಸಂಚು ರೂಪಿಸಿದ್ದಾರೆ ಎಂದು ಮಲ್ಲಿಕ್ ಆರೋಪಿಸಿದ್ದಾರೆ.

ಇಡಿ ಈ ಹಿಂದೆ ಸಚಿವ ಬಾಕಿಬುರ್ ರೆಹಮಾನ್ ಅವರ ಆಪ್ತರನ್ನು ಬಂಧಿಸಿತ್ತು. ಅವರ ರಿಮಾಂಡ್ ಈ ವಾರ ಕೊನೆಗೊಳ್ಳಲಿದೆ. ಪ್ರಕರಣದ ಘಟನೆಗಳ ಪರಸ್ಪರ ಆವೃತ್ತಿಯೊಂದಿಗೆ ಜಾರಿ ನಿರ್ದೇಶನಾಲಯ ಇಬ್ಬರನ್ನು ಎದುರಿಸಲು ಪ್ರಯತ್ನಿಸಬಹುದು ಎಂದು ಮೂಲಗಳು ತಿಳಿಸಿವೆ.

ಇಡಿ ಗುರುವಾರ ಮಲ್ಲಿಕ್ ಅವರ ಆವರಣದಲ್ಲಿ ಶೋಧ ನಡೆಸಿತ್ತು. ಕೇಂದ್ರ ಕೋಲ್ಕತ್ತಾದ ಅಮ್ಹೆರ್ಸ್ಟ್ ಸ್ಟ್ರೀಟ್‌ನಲ್ಲಿರುವ ಅವರ ಪೂರ್ವಜರ ಮನೆಯಲ್ಲೂ ಅದು ಶೋಧ ಕಾರ್ಯ ನಡೆಸಿದೆ. ಈ ಹಗರಣವು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಮತ್ತು ಕೋವಿಡ್ ಲಾಕ್‌ಡೌನ್‌ಗಳ ಸಮಯದಲ್ಲಿ ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದೆ.

ಮೊನ್ನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಚಾರಣೆಯ ಸಮಯದಲ್ಲಿ ಮಲ್ಲಿಕ್‌ಗೆ ಏನಾದರೂ ಸಂಭವಿಸಿದರೆ ಪೊಲೀಸ್ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಮಲ್ಲಿಕ್‌ ಅವರು ಅಸ್ವಸ್ಥರಾಗಿದ್ದು, ಹಲವಾರು ದೈಹಿಕ ಕಾಯಿಲೆ ಹೊಂದಿದ್ದರು. ವಿರೋಧ ಪಕ್ಷದ ನಾಯಕರ ವಿರುದ್ಧ ಇಡಿ ನಡೆಸಿದ ದಾಳಿಯನ್ನು ಬಿಜೆಪಿಯ "ಕೊಳಕು ರಾಜಕೀಯ ಆಟ" ಎಂದು ಬ್ಯಾನರ್ಜಿ ಕರೆದಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಸಚಿವ ಶಶಿ ಪಂಜ ಅವರು ಮಲ್ಲಿಕ್ ಅವರ ನಿವಾಸಗಳ ಮೇಲಿನ ದಾಳಿಯನ್ನು ಟೀಕಿಸಿದ್ದಾರೆ. "ಇದು 'ಬಿಜೋಯ ದಶಮಿ' ಸಮಯದಲ್ಲಿ ಬಂಗಾಳದ ಸಂಸ್ಕೃತಿಯ ಮೇಲಿನ ದಾಳಿಯಾಗಿದೆ. ಇದು ಸೇಡಿನ ರಾಜಕೀಯವಲ್ಲದೆ ಬೇರೇನೂ ಅಲ್ಲ" ಎಂದು ಆರೋಪಿಸಿದರು.

ರಾಜ್ಯ ಸಚಿವರ ಬಂಧನದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ, ಪ್ರಕರಣದ ತನಿಖೆಯ ವೇಗವನ್ನು ಪರಿಗಣಿಸಿ ಇದು ನಿರೀಕ್ಷಿಸಿದ್ದೆ ಎಂದು ಹೇಳಿದೆ. ಬಿಜೆಪಿ ರಾಜ್ಯ ವಕ್ತಾರ ಸಾಮಿಕ್ ಭಟ್ಟಾಚಾರ್ಯ, "ಕೆಲವು ದಿನಗಳ ಹಿಂದೆ ಬಂಧನಕ್ಕೊಳಗಾದ ಅವರ ಸಹಚರರೊಬ್ಬರು ಹಗರಣ ಬಹಿರಂಗಪಡಿಸಿದ ನಂತರ ಬಂಧನವನ್ನು ನಿರೀಕ್ಷಿಸಲಾಗಿತ್ತು. ಟಿಎಂಸಿ ಭ್ರಷ್ಟಾಚಾರದಲ್ಲಿ ಆಳವಾಗಿ ಮುಳುಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ" ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಇಬ್ಬರು ಶಾಸಕರು ಮತ್ತು ಟಿಎಂಸಿ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ಸಂಸ್ಥೆಗಳು ಶಾಲಾ ಉದ್ಯೋಗ ಹಗರಣಗಳು ಮತ್ತು ಜಾನುವಾರು ಕಳ್ಳಸಾಗಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿಗಳು ಗುರುವಾರ ಪ್ರಾರಂಭವಾದ 17 ಗಂಟೆಗಳ ನಂತರವೂ ನಡೆಯುತ್ತಿವೆ. "ನಾವು ಸಚಿವರೊಂದಿಗೆ ಮಾತನಾಡುತ್ತಿದ್ದೇವೆ ಮತ್ತು ಪ್ರಕ್ರಿಯೆಯು ಇನ್ನೂ ಕೆಲವು ಗಂಟೆಗಳ ಕಾಲ ಮುಂದುವರಿಯಬಹುದು. ನಾವು ಅವರ ನಿವಾಸಗಳಿಂದ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಸಚಿವರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ಮಲ್ಲಿಕ್ ಅವರ ಮಾಜಿ ಆಪ್ತ ಸಹಾಯಕನ ನಿವಾಸಗಳಲ್ಲಿ, ದಮ್ ದಮ್ ಪ್ರದೇಶ, ಮತ್ತು ಬೆಲಿಯಾಘಾಟಾ ಮತ್ತು ಬಸ್ದ್ರೋನಿ ಸೇರಿದಂತೆ ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ "ಇಡಿ ಅಧಿಕಾರಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+