ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಆಪ್ ಮುಖಂಡ ಸಂದೀಪ್ ಭಾರದ್ವಾಜ್
ನವದೆಹಲಿ, ನವೆಂಬರ್ 25: ಆಮ್ ಆದ್ಮಿ ಪಕ್ಷದ ನಾಯಕ ಸಂದೀಪ್ ಭಾರದ್ವಾಜ್ ಎಂಬುವವರು ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ನಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅವರ ನಿಧನಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಬಿಜೆಪಿ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದೆ. 55 ವರ್ಷದ ಸಂದೀಪ್ ಭಾರದ್ವಾಜ್ ಎಂದು ಗುರುತಿಸಲಾದ ವ್ಯಕ್ತಿಯ ಶವವು ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೌರಿ ಗಾರ್ಡನ್ನ ನಿವಾಸಿ ಭಾರದ್ವಾಜ್ ಅನ್ನು ಅವರ ನಿವಾಸದಿಂದ ಕರೆತರಲಾಗಿದೆ ಎಂದು ಪೊಲೀಸರು ಕುಕ್ರೇಜಾ ಆಸ್ಪತ್ರೆಯಿಂದ ಮಾಹಿತಿ ಪಡೆದರು ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ. ಸ್ಥಳಕ್ಕೆ ಅಪರಾಧ ತಂಡವನ್ನು ಕರೆಸಲಾಯಿತು. ಈ ವ್ಯಕ್ತಿ ಭಾರದ್ವಾಜ್ ಮಾರ್ಬಲ್ಸ್ ಮಾಲೀಕನಾಗಿದ್ದು, ವಿಚ್ಛೇದನ ಪಡೆದಿದ್ದರು. ಅವರ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜನರನ್ನು ಬೆಚ್ಚಿ ಬೀಳಿಸಿದ ಘಟನೆ:
ಆಪ್ ನಾಯಕ ಸಂದೀಪ್ ಭಾರದ್ವಾಜ್ ಅವರ ಹಠಾತ್ ಆತ್ಮಹತ್ಯೆಯ ವರದಿಯು ದೆಹಲಿಯ ಜನರನ್ನು ವಿಶೇಷವಾಗಿ ಮೋತಿ ನಗರ ವಿಧಾನಸಭಾ ಕ್ಷೇತ್ರದ ಜನರನ್ನು ಬೆಚ್ಚಿಬೀಳಿಸಿದೆ ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದರು. ಕೆಲವು ದಿನಗಳವರೆಗೂ ತನ್ನ ವ್ಯವಹಾರವನ್ನು ಹೊರತುಪಡಿಸಿ ರಾಜಕೀಯ ಕೆಲಸಗಳನ್ನು ಸಕ್ರಿಯವಾಗಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ ಎಂದು ದೆಹಲಿಯ ಜನರು ತಿಳಿಯಲು ಬಯಸುತ್ತಾರೆ ಮತ್ತು ಆದ್ದರಿಂದ ಆತ್ಮಹತ್ಯೆಯ ಕಾರಣವನ್ನು ಹೊರತರಲು ಪೊಲೀಸರು ಸಂಪೂರ್ಣ ತನಿಖೆ ನಡೆಸಬೇಕು," ಎಂದು ಅವರು ಹೇಳಿದರು.
ಸಂಬಂಧಿಕರೊಂದಿಗೆ ನಿಲ್ಲುವುದು ಆಪ್ ಎಂದ ಕೇಜ್ರಿವಾಲ್:
ಈ ಸಮಯದಲ್ಲಿ ಇಡೀ ಪಕ್ಷವು ಅವರ ಸಂಬಂಧಿಕರೊಂದಿಗೆ ನಿಂತಿದೆ ಎಂದು ದೆಹಲಿ ಮುಖ್ಯಮಂತ್ರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದರು. "ಎಎಪಿ ಕಾರ್ಯಕರ್ತ ಸಂದೀಪ್ ಭಾರದ್ವಾಜ್ ಅವರ ಅಕಾಲಿಕ ನಿಧನದ ಬಗ್ಗೆ ತುಂಬಾ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ, ನಮ್ಮ ಸಂತಾಪಗಳು ಅವರೊಂದಿಗಿವೆ ಮತ್ತು ಇಡೀ ಪಕ್ಷವು ಅವರ ಸಂಬಂಧಿಕರೊಂದಿಗೆ ನಿಂತಿದೆ" ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications