ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದೇನು?
ನವದೆಹಲಿ, ಮೇ 31: ಕುಸ್ತಿಪಟುಗಳ ಮೇಲೆ ಲೈಗಿಂಕ ಕಿರುಕುಳ ಆರೋಪ ಸಂಬಂಧ ಅವರು ತಮ್ಮ ಅಮೂಲ್ಯ ಪದಕಗಳನ್ನು ಗಂಗಾ ನದಿಗೆ ಎಸೆಯುವ ನಿರ್ಧಾರದ ಕುರಿತು ಮಾತನಾಡಿರುವ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.
ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊಂದಿರರುವ ಅವರು, ಕುಸ್ತಿಪಟುಗಳು ತಮ್ಮ ಪ್ರಶಸ್ತಿಗಳನ್ನು ನೀರಿಗೆ ಒಪ್ಪಿಸುವ ನಿರ್ಧಾರವು ಸಂಪೂರ್ಣವಾಗಿ ಅವರು ತೆಗೆದುಕೊಂಡ ನಿಲುವಾಗಿದೆ. ನನ್ನ ಮೇಲಿನ ಆರೋಪ ಸಂಬಂಧ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯವಿದ್ದರೆ ಬಂಧನವಾಗುವುದು ಎಂದು ಅವರು ಹೇಳಿದರು.

ಮಂಗಳವಾರ ಕುಸ್ತಿಪಟುಗಳು ತಾವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹರಿದ್ವಾರ ನಗರಕ್ಕೆ ಆಗಮಿಸಿದ್ದರು. ಆಗ ಅವರನ್ನು ನದಿ ದಡದಲ್ಲಿ ಮನವೊಲಿಸಿದ ರೈತ ಮುಖಂಡ ನರೇಶ್ ಟಿಕಾಯತ್ ವಾಪಸು ಕರೆತಂದರು. ನಂತರ ಕುಸ್ತಿಪಟುಗಳು ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಐದು ದಿನಗಳ ಗಡುವು ನೀಡಿದರು.
ಲೈಂಗಿಕ ಕಿರುಕುಳದ ಆರೋಪದ ಮೇಲೆ ಡಬ್ಲ್ಯುಎಫ್ಐ ಅಧ್ಯಕ್ಷರನ್ನು ತೆಗೆದುಹಾಕಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸುತ್ತಿರುವ ಒಲಿಂಪಿಯನ್ಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಪದಕಗಳನ್ನು ಗಂಗೆಯಲ್ಲಿ ಮುಳುಗಿಸಲು ಮಂಗಳವಾರ ಮುಂಜಾನೆ ಹರಿದ್ವಾರದಲ್ಲಿ ಅಳುತ್ತಾ ಬಿಕ್ಕಳಿಸಿದ ದೃಶ್ಯಗಳು ವೈರಲ್ ಆಗಿವೆ.

ಮಂಗಳವಾರ ಬೆಳಗ್ಗೆ ತಾವು ಸಂಜೆ 6 ಗಂಟೆಗೆ ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾ ನದಿಯಲ್ಲಿ ಪದಕಗಳನ್ನು ಎಸೆಯುವುದಾಗಿ ಪ್ರತಿಭಟನಾನಿರತ ಕುಸ್ತಿಪಟುಗಳು ತಿಳಿಸಿದ್ದರು. ಆದರೂ ಅವರಿಗೆ ಸರ್ಕಾರದಿಂದ ಯಾವುದೇ ಪ್ರತ್ರಿಕ್ರಿಯೆ ಸಿಕ್ಕಿರಲಿಲ್ಲ.
ಕುಸ್ತಿಪಟುಗಳು ತಮ್ಮ ಟ್ವಿಟ್ಟರ್ ಪೋಸ್ಟ್ನಲ್ಲಿ, "ಮೇ 28 ರಂದು ನಡೆದ ಎಲ್ಲವನ್ನೂ ನೀವು ನೋಡಿದ್ದೀರಿ, ಪೊಲೀಸರು ನಮ್ಮನ್ನು ಹೇಗೆ ನಡೆಸಿಕೊಂಡರು ಮತ್ತು ಅವರು ನಮ್ಮನ್ನು ಬಂಧಿಸಿದ ರೀತಿಯನ್ನು ನೀವು ನೋಡಿದ್ದೀರಿ. ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೆವು. ನಮಗೆ ಪ್ರತಿಭಟನೆ ನಡೆಸಲು ಸ್ಥಳ ನೀಡಲಾಗಿಲ್ಲ. ಮರುದಿನ ಗಂಭೀರ ಪ್ರಕರಣಗಳು ಮತ್ತು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ನಮ್ಮ ವಿರುದ್ಧ ಕುಸ್ತಿಪಟುಗಳು ತಮಗೆ ಆಗಿರುವ ಲೈಂಗಿಕ ಕಿರುಕುಳಕ್ಕೆ ನ್ಯಾಯ ಕೇಳುವ ಮೂಲಕ ಯಾವುದೇ ಅಪರಾಧ ಎಸಗಿದ್ದಾರೆಯೇ? ಪೊಲೀಸರು ಮತ್ತು ವ್ಯವಸ್ಥೆ ನಮ್ಮನ್ನು ಅಪರಾಧಿಗಳಂತೆ ನಡೆಸಿಕೊಳ್ಳುತ್ತಿದೆ, ದಬ್ಬಾಳಿಕೆ ನಡೆಸುವವರು ಮುಕ್ತವಾಗಿ ಓಡಾಡುತ್ತಿದ್ದಾರೆ. ಪೋಕ್ಸೋ ಕಾಯ್ದೆಯನ್ನು ಬದಲಾಯಿಸುವ ಬಗ್ಗೆ ಅವರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
"ಪದಕಗಳನ್ನು ಹಿಂದಿರುಗಿಸಬೇಕೆಂದು ಯೋಚಿಸುತ್ತಿರುವ ನಮಗೆ ಇದು ಸಾವಿಗಿಂತ ಕಡಿಮೆಯಿಲ್ಲ. ಆದರೆ ನಾವು ನಮ್ಮ ಆತ್ಮಗೌರವಕ್ಕೆ ರಾಜಿ ಮಾಡಿಕೊಳ್ಳುವುದು ಹೇಗೆ? ಇನ್ನು ಮುಂದೆ ನಮಗೆ ಈ ಪದಕಗಳು ಅಗತ್ಯವಿಲ್ಲ, ಶೋಷಣೆಯ ವಿರುದ್ಧ ಮಾತನಾಡಿದರೆ ನಮ್ಮನ್ನು ಜೈಲಿಗೆ ಹಾಕಲು ಅವರು ಸಿದ್ಧರಾಗಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications