Get Updates
Get notified of breaking news, exclusive insights, and must-see stories!

HDK Ayodhya Visit: ಅಯೋಧ್ಯೆ ರಾಮ ಮಂದಿರ ಭೇಟಿ ಬಳಿಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದೇನು?

ಉತ್ತರಪ್ರದೇಶ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಸೇರಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕೂಡ ಭಾಗವಹಿಸಿದ್ದರು. ಈ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಸ್ವಾಗತಿಸಿದರು. ಈ ಅದ್ಭುತ ಕ್ಷಣದ ಅನುಭವವನ್ನು ಹೆಚ್‌ ಡಿ ಕುಮಾರಸ್ವಾಮಿ ತಮ್ಮ 'X' (ಹಿಂದಿನ ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ದೇಶ ಹಾಗೂ ವಿದೇಶದ ಹಲವಾರು ಗಣ್ಯರನ್ನು ಆಹ್ವಾನಿಸಲಾಗಿತ್ತು. ಕರ್ನಾಟದಲ್ಲೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿತ್ತು. ಇವರಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೂ ಬಿಜೆಪಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಿಲು ಆಹ್ವಾನಿಸಿತ್ತು.

What did HD Kumaraswamy say after the inauguration of Ayodhya Ram Mandir?

ಜನವರಿ 22ರಂದು ಶ್ರೀರಾಮ ಮಂದಿರದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ರಾಮ ಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು. ಇದೇ ದಿನ ಹೆಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯ ಹುಟ್ಟಿದ ದಿನವೂ ಆಗಿದ್ದರಿಂದ ಅಯೋಧ್ಯೆದಲ್ಲಿಯೇ ಅವರ ಜನ್ಮದಿನವನ್ನು ಆಚರಿಸಲಾಯಿತು. ಆ ಬಳಿಕ ಅಯೋಧ್ಯೆಯಲ್ಲಿ ಕಳೆದ ತಮ್ಮ ಸಂತೋಷದ ಕ್ಷಣವನ್ನು ಹೆಚ್‌ ಡಿ ಕುಮಾರಸ್ವಾಮಿ ತಮ್ಮ 'X' (ಹಿಂದಿನ ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ.

'ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯೋಗಿ ಆದಿತ್ಯನಾಥ್ ಅವರಿಗೆ ಶುಭ ಕೋರಲಾಯಿತು.

ಪೂಜ್ಯ ತಂದೆ-ತಾಯಿ ಅವರಿಬ್ಬರೂ ಅಯೋಧ್ಯೆಗೆ ಬಂದಿದ್ದಕ್ಕೆ ಯೋಗಿ ಜೀ ಅವರು ಸಂತಸ ವ್ಯಕ್ತಪಡಿಸಿದರು. ಮಾಜಿ ಸಂಸದರಾದ ಶ್ರೀ ಕುಪೇಂದ್ರ ರೆಡ್ಡಿ ಅವರು, ರಾಜ್ಯ ಯುವ ಜನತಾದಳದ ಅಧ್ಯಕ್ಷ ಶ್ರೀ ನಿಖಿಲ್ ಕುಮಾರ ಸ್ವಾಮಿ ಅವರು ಜತೆಯಲ್ಲಿದ್ದರು' ಎಂದು ಬರೆದಿದ್ದಾರೆ.

'ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು. ಈ ದೈವ ಕಾರ್ಯದಲ್ಲಿ ಪೂಜ್ಯ ತಂದೆ-ತಾಯಿ ಅವರೊಂದಿಗೆ ಭಾಗವಹಿಸಿದ್ದು ನನಗೆ ಧನ್ಯತೆಯ ಅನುಭೂತಿ ನೀಡಿದೆ. ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಈ ದಿವ್ಯಕ್ಷಣಕ್ಕೆ ಸಾಕ್ಷಿಯಾದರು. ಜೈಶ್ರೀರಾಮ್' ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾನುವಾರವೇ ದೇವೇಗೌಡರೊಂದಿಗೆ ಧರ್ಮಪತ್ನಿ ಚನ್ನಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಅವರು ಹಾಗೂ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಅಯೋಧ್ಯೆಗೆ ತೆರಳಿದ್ದರು. ಅತಿ ಗಣ್ಯರ ಗ್ಯಾಲರಿಯಲ್ಲಿ ಆಸೀನರಾಗಿದ್ದ ಮಾಜಿ ಪ್ರಧಾನಿಗಳ ಕುಟುಂಬದವರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಾಗೂ ಭವ್ಯ ಶ್ರೀರಾಮ ಮಂದಿರವನ್ನು ಕಣ್ತುಂಬಿಕೊಂಡರು.

ಪ್ರಾಣ ಪ್ರತಿಷ್ಠಾಪನೆ ಮುಗಿದ ನಂತರ ಗಣ್ಯರಿಗೆ ಶುಭ ಕೋರಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಧನ್ಯವಾದ ಹೇಳಿದರು. ಇದಕ್ಕೆ ಪ್ರತಿಯಾಗಿ ದೇವೇಗೌಡರು, ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ಅವರು ಪ್ರಧಾನಿಗಳಿಗೆ ಅಭಿವಂದನೆ ಸಲ್ಲಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+