ಚುನಾವಣಾಪೂರ್ವ ಸಮೀಕ್ಷೆ: ಜೇಟ್ಲಿ, ನಿತೀಶ್ ಹೇಳಿದ್ದೇನು?
ನವದೆಹಲಿ, ಜ 25: ಚುನಾವಣಾಪೂರ್ವ ಸಮೀಕ್ಷೆಯ ಬಗ್ಗೆ ಬಿಜೆಪಿ ನಾಯಕ ಅರುಣ್ ಜೇಟ್ಲಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಚುನಾವಣಾಪೂರ್ವ ಸಮೀಕ್ಷೆಗಳಲ್ಲಿ ನನಗಷ್ಟು ನಂಬಿಕೆ ಇಲ್ಲವೆಂದು ಜೇಟ್ಲಿ ಹೇಳಿದರೆ, ಸಮೀಕ್ಷಾ ವರದಿಗಳು ಮನೋರಂಜನಾ ವಸ್ತುವಾಗಿದೆ ಎಂದು ನಿತೀಶ್ ಲೇವಡಿ ಮಾಡಿದ್ದಾರೆ.
ಎರಡು ಏಜನ್ಸಿಗಳು ಚುನಾವಣಾಪೂರ್ವ ಸಮೀಕ್ಷೆ ನಡುಸುತ್ತಿದೆ, ಚುನಾವಣೆಗೆ ಇನ್ನೂ ನಾಲ್ಕು ತಿಂಗಳ ಮುನ್ನ ಸಮೀಕ್ಷೆ ನಡೆಸಿದರೆ ಅದರ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ಬರುತ್ತದೆ. ಈಗ ನಡೆಯುತ್ತಿರುವ ಎರಡು ಸಮೀಕ್ಷೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಹೇಳುತ್ತಿದೆ, ಆದರೂ ಸಮೀಕ್ಷೆಯ ಪರವಾಗಿ ನಾನು ಇಲ್ಲ ಎಂದು ಜೇಟ್ಲಿ ಹೇಳಿದ್ದಾರೆ. (ಐಬಿಎನ್ ಸಮೀಕ್ಷೆ: ಅಧಿಕಾರದತ್ತ ಬಿಜೆಪಿ ಹತ್ತಿರ, ಇನ್ನೂ ಹತ್ತಿರ)
ಬಿಹಾರದಲ್ಲಿ ಬಿಜೆಪಿ ನಲ್ವತ್ತಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಕೇವಲ 300 ರಿಂದ 400 ಜನರ ಅಭಿಪ್ರಾಯವನ್ನು ಪಡೆದು ನಡೆಸುವ ಈ ಸಮೀಕ್ಷೆ ಜನರಿಗೆ ಮನೋರಂಜನಾ ವಸ್ತು ಮತ್ತು ವಾಹಿನಿಗಳಿಗೆ TRP ಹೆಚ್ಚಿಸುವ ಕಾರ್ಯಕ್ರಮವಷ್ಟೇ ಎಂದು ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಇದುವರೆಗೂ ಬಿಜೆಪಿ ಮತ್ತು ಒಕ್ಕೂಟ 183ಕ್ಕಿಂತ ಹೆಚ್ಚು ಸ್ಥಾನವನ್ನು ಗೆದ್ದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಇದಕ್ಕಿಂತ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ಶಿವಸೇನೆ ಮತ್ತು ಶಿರೋಮಣಿ ಅಕಾಲಿದಳ ಈ ಬಾರಿ ಉತ್ತಮ ಸಾಧನೆ ಮಾಡಲಿದೆ ಎಂದು ಜೇಟ್ಲಿ ಹೇಳಿದ್ದಾರೆ.
ಸಮೀಕ್ಷೆ ಚುನಾವಣೆಯ ಅಂತಿಮ ಫಲಿತಾಂಶವಲ್ಲ ಎನ್ನುವುದನ್ನು ಬಿಜೆಪಿ ನಾಯಕರು ಮೊದಲು ಅರಿಯ ಬೇಕು. ಸಮೀಕ್ಷೆಯ ವರದಿಯನ್ನು ಆಧರಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ, ಅಂತಿಮ ಫಲಿತಾಂಶ ಬಂದ ಮೇಲೆ ಬಿಜೆಪಿ ನಾಯಕರು ಮುಂದಿನ ಹೆಜ್ಜೆ ತೆಗೆದುಕೊಳ್ಳಲಿ ಎಂದು ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕ ಅರುಣ್ ಜೇಟ್ಲಿ ಸಮೀಕ್ಷೆಯ ಬಗ್ಗೆ ತನ್ನ ಬ್ಲಾಗಿನಲ್ಲಿ ಸವಿವರವಾಗಿ ಬರೆದಿದ್ದಾರೆ. ಬ್ಲಾಗಿನ ಲಿಂಕ್ ಗೆ ಇಲ್ಲಿ ಕ್ಲಿಕ್ಕಿಸಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications