ಎನ್ ಡಿಎ ಸಂಪುಟ ವಿಸ್ತರಣೆ, ಡಿವಿಎಸ್ ಸೇಫ್, ದೇಕಾಗೆ ಚಾನ್ಸ್
ನವದೆಹಲಿ, ಜುಲೈ 04: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ನೂತನ ಸಚಿವರ ಪಟ್ಟಿಯನ್ನು ರಾಷ್ಟ್ರಪತಿ ಭವನಕ್ಕೆ ಸೋಮವಾರ ಕಳಿಸಲಾಗುವುದು, ಡಿಜಿ ಪಿಐಬಿ ಟ್ವೀಟ್ ಪ್ರಕಾರ ಮಂಗಳವಾರ 11 ಗಂಟೆಗೆ ಸಂಪುಟ ವಿಸ್ತರಣೆ ನಡೆಯಲಿದೆ. ಸದ್ಯದ ಮಾಹಿತಿ ಪ್ರಕಾರ, ಡಿವಿ ಸದಾನಂದ ಗೌಡ ಅವರು ಸೇಫ್ ಆಗಿದ್ದಾರೆ.
ನಿರೀಕ್ಷೆಯಂತೆ ಉತ್ತರಪ್ರದೇಶ ಹಾಗೂ ಇತರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ರಣಕಹಳೆ ಊದಿರುವುದರಿಂದ ಎನ್ ಡಿಎ ಕೂಡಾ ತನ್ನ ಕಾರ್ಯತಂತ್ರ ಆರಂಭಿಸಿದೆ. ಮೋದಿ ಅವರು ತಮ್ಮ ಸಂಪುಟ ವಿಸ್ತರಣೆಗೆ ಕೆಲವು ಆಂಶಗಳನ್ನು ಗಮನದಲ್ಲಿಟ್ಟುಕೊಂಡಿದ್ದು, ಸರಿಯಾದ ಕಾರ್ಯನಿರ್ವಹಣೆ ಮಾಡದ ಸಚಿವರನ್ನು ಸಂಪುಟದಿಂದ ತೆಗೆದು ಹಾಕಲು ಮುಂದಾಗಿದ್ದಾರೆ. ಉತ್ತರಪ್ರದೇಶಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ. [ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಮುರಳಿ ಮನೋಹರ್ ಜೋಶಿ ಅಭ್ಯರ್ಥಿ?]

ಬಿಹಾರದ ಸಂಸದ ಗಿರಿರಾಜ್ ಸಿಂಗ್ ಹುದ್ದೆಗೆ ಕುತ್ತು ಬರುವ ಸಾಧ್ಯತೆಯಿದೆ. ಇನ್ನು ಅಲ್ಪಸಂಖ್ಯಾತ ಕೋಟಾದಡಿ ಸಚಿವ ಹುದ್ದೆ ಗಿಟ್ಟಿಸಿದ್ದ ನಜ್ಮಾ ಹೆಫ್ತುಲ್ಲಾ ಉಪರಾಷ್ಟ್ರಪತಿ ಹುದ್ದೆ ಮೇಲೆ ಕಣ್ಣಿಟ್ಟಿರುವುದರಿಂದ ಅವರನ್ನೂ ಸಚಿವ ಸ್ಥಾನದಿಂದ ತೆರವುಗೊಳಿಸುವ ಸಾಧ್ಯತೆಯಿದೆ. ಜೊತೆಗೆ ನಿಹಾಲ್ ಚಂದ್ ಅವರ ಸ್ಥಾನವೂ ಅಲುಗಾಡುತ್ತಿದೆ.[ಗ್ಯಾಲರಿ : ಮೋದಿ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆ]

ಸಚಿವ ಸ್ಥಾನ ಆಕಾಂಕ್ಷಿಗಳು: ಅಲಹಾಬಾದಿನ ಸಂಸದ ಶ್ಯಾಮ ಚರಣ ಗುಪ್ತ, ಜಬಲಪುರ್ ನ ಸಂಸದ ರಾಕೇಶ್ ಸಿಂಗ್, ಬಿಕಾನೇರ್ ಸಂಸದ ಅರ್ಜುನ್ ರಾಮ್ ಮೆಘ್ ವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂ ಮಾಥುರ್, ವಿನಯ್ ಸಹಸ್ರಬುದ್ಧಿ.[ಮೋದಿ ಸಂಪುಟದ ಹೊಸ ಸಚಿವರ ಖಾತೆಗಳು]
ನಿರೀಕ್ಷೆ ಏನಿದೆ? : ಸೋನೋವಾಲ್ ಅವರ ಸ್ಥಾನಕ್ಕೆ ರಮನ್ ದೇಕಾ ಅವರು ಬರಲಿದ್ದಾರೆ. ಮತ್ತೊಬ್ಬರು ಉತ್ತರ ಪ್ರದೇಶದಿಂದ ಸಂಪುಟ ಸೇರಲಿದ್ದಾರೆ.75ಕ್ಕೂ ಅಧಿಕ ವಯಸ್ಸಿನ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ನಜ್ಮಾ ಹೆಫ್ತುಲ್ಲಾ ಜಾಗದಲ್ಲಿ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಬರಲಿದ್ದಾರೆ. ವಾಣಿಜ್ಯ, ರಕ್ಷಣಾ, ಗೃಹ ಹಾಗೂ ವಿದೇಶಾಂಗ ಖಾತೆಗಳು ಮಾತ್ರ ಭದ್ರವಾಗಿವೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications