ಹೈದರಾಬಾದ್; ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸ್ಥಿತಿಗತಿ ಏನು?
ಹೈದರಾಬಾದ್, ಅಕ್ಟೋಬರ್ 31: ಹೈದರಾಬಾದ್ನಿಂದ ದೇಶದ ಇತರ ಮಹಾನಗರಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಸಾಕಷ್ಟು ಸಮಯದಿಂದ ತೆಲಂಗಾಣದ ಬೇಡಿಕೆಗಳ ಪಟ್ಟಿಯಲ್ಲಿದ್ದರೂ ಯೋಜನೆ ಇನ್ನೂ ಕಾಗದದಲ್ಲಿಯೇ ಇದೆ.
ಹೈದರಾಬಾದ್ನಿಂದ ಬೆಂಗಳೂರು ಅಥವಾ ಮುಂಬೈಗೆ ಸಂಪರ್ಕ ಕಲ್ಪಿಸುವ ಹೈಸ್ಪೀಡ್ ರೈಲಿನ ಕುರಿತು ಚರ್ಚೆ ನಡೆದಿದ್ದರೂ ಸದ್ಯಕ್ಕೆ ಅದು ಚಾಲನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ತೆಲಂಗಾಣ ಹೊರತುಪಡಿಸಿ ಕೇಂದ್ರ ಸರ್ಕಾರಕ್ಕೆ ಹಲವಾರು ಇತರ ಯೋಜನೆಗಳನ್ನು ವಿನಂತಿಸಿದ ಇತರ ರಾಜ್ಯಗಳು, ವಿಶೇಷವಾಗಿ ಚುನಾವಣೆಗೆ ಒಳಪಡುವ ರಾಜ್ಯಗಳು ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಪಡೆಯುತ್ತಿವೆ.
ವಂದೇ ಭಾರತ್ ಎಕ್ಸ್ಪ್ರೆಸ್ ಗರಿಷ್ಠ 180 ಕಿ. ಮೀ. ವೇಗದಲ್ಲಿ ಚಲಿಸಲು ವಿನ್ಯಾಸಗೊಳಿಸಲಾದ ಸೆಮಿ ಹೈ-ಸ್ಪೀಡ್ ರೈಲಾಗಿದೆ. ನವೆಂಬರ್ 10 ರಂದು ಚೆನ್ನೈ- ಬೆಂಗಳೂರು- ಮೈಸೂರು ಮಾರ್ಗದಲ್ಲಿ ದಕ್ಷಿಣ ಭಾರತಕ್ಕೆ ಮೊದಲ ರೈಲಾಗಿ ಚಾಲನೆ ಸಿಗಲಿದೆ. ತೆಲಂಗಾಣ ಸರ್ಕಾರವು ಕೇಂದ್ರಕ್ಕೆ ಪದೇ ಪದೇ ಮನವಿ ಮಾಡಿದ ಹೊರತಾಗಿಯೂ ಕರ್ನಾಟಕಕ್ಕೆ ಮಾತ್ರ ರೈಲು ಸಿಕ್ಕಿದೆ.
ಹೈದರಾಬಾದ್ಗೆ ಒಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಜೂರು ಮಾಡುವಂತೆ ತೆಲಂಗಾಣ ಸರ್ಕಾರ ಭಾರತೀಯ ರೈಲ್ವೆಗೆ ಹಲವಾರು ಮನವಿಗಳನ್ನು ಮಾಡಿತ್ತು. ನಲ್ಗೊಂಡ ಸಂಸದ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಹೈದರಾಬಾದ್-ವಿಜಯವಾಡ ಮಾರ್ಗದಲ್ಲಿ ಬುಲೆಟ್ ರೈಲು ಮಂಜೂರು ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು. ಆದರೆ ಒಂದೇ ಒಂದು ಮನವಿಯನ್ನು ಬಿಜೆಪಿ ಸರ್ಕಾರ ಪರಿಗಣಿಸಿಲ್ಲ.

ನ್ಯಾಷನಲ್ ಟೆಂಡರ್ಗೆ ಅನುಮೋದನೆ ಇಲ್ಲ
ರಾಷ್ಟ್ರೀಯ ರೈಲ್ವೆ ಯೋಜನೆ (ಎನ್ಆರ್ಪಿ) ಪ್ರಕಾರ ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಕಾರಿಡಾರ್ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಇತ್ತು. ಇದರ ಹೊರತಾಗಿ ಮುಂಬೈ-ಪುಣೆ-ಹೈದರಾಬಾದ್ ವಂದೇ ಭಾರತ್ ರೈಲು ಯೋಜನೆಗೆ ವಿವರವಾದ ಯೋಜನಾ ವರದಿಯನ್ನು ತಯಾರಿಸಲು ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಟೆಂಡರ್ ಅನ್ನು ಪಡೆದಿದೆ ಎಂದು ವರದಿಯಾಗಿದೆ.

ಹೈದರಾಬಾದ್ನಿಂದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭರವಸೆ
ಆದರೆ ಈ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಇತ್ತೀಚೆಗೆ ಅದೇ ಹಳೆಯ ಕಥೆಯನ್ನು ಪುನರುಚ್ಚರಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೈದರಾಬಾದ್ನಿಂದ ತಿರುಪತಿಗೆ ಅಥವಾ ಹೈದರಾಬಾದ್ನಿಂದ ವಿಜಯವಾಡದ ಮೂಲಕ ವಿಶಾಖಪಟ್ಟಣಕ್ಕೆ ಹೊಚ್ಚ ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಕ್ಕೆ ಕೊಡುಗೆ
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಇದು ಐದನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದ್ದು, ಒಟ್ಟು 483 ಕಿ.ಮೀ ಕ್ರಮಿಸಲಿದೆ. ಇಲ್ಲಿರುವ ಮುಖ್ಯಾಂಶ ಏನೆಂದರೆ ಮೂರು ಮತ್ತು ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಇತ್ತೀಚೆಗೆ ಚುನಾವಣೆಗೆ ಒಳಪಟ್ಟಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಪ್ರಾರಂಭಿಸಲಾಯಿತು. ಅದೇ ರೀತಿ ಮುಂದಿನ ವರ್ಷ ಕರ್ನಾಟಕದಲ್ಲಿ ಚುನಾವಣೆ ಇದೆ.

ತಾಂತ್ರಿಕ ದೋಷಗಳ ಪರಿಣಾಮ
ವಂದೇ ಭಾರತ್ ರೈಲುಗಳು ಕವಾಚ್ ಎಂಬ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆಯನ್ನು ಹೊಂದಿದೆ ಎಂದು ಹೇಳಲಾಗಿದ್ದರೂ, ಇಲ್ಲಿಯವರೆಗೆ ಪ್ರಾರಂಭಿಸಲಾದವುಗಳು ಎಲ್ಲಾ ದೋಷದ ಕಾರಣಗಳಿಗಾಗಿ ಸುದ್ದಿಯಲ್ಲಿವೆ. ಮೊದಲನೆಯದಾಗಿ, ನವದೆಹಲಿ - ವಾರಣಾಸಿ ಸೆಮಿ-ಹೈ-ಸ್ಪೀಡ್ ರೈಲು ತಾಂತ್ರಿಕ ದೋಷಗಳ ಪರಿಣಾಮವಾಗಿ ವಿಳಂಬವಾಯಿತು. ರೈಲ್ವೆ ಅಧಿಕಾರಿಗಳು ಐದು ಗಂಟೆಗಳ ಕಾಲ ಅಡಚಣೆಗಳನ್ನು ಸರಿಪಡಿಸಲು ಪ್ರಯತ್ನಿಸಿದರೂ ಅವರು ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರಿಗೆ ಪ್ರಯಾಣ ಅವಕಾಶ ಕಲ್ಪಿಸಲಾಯಿತು. ಇದಲ್ಲದೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಜಾನುವಾರುಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾದ ಹಲವಾರು ನಿದರ್ಶನಗಳಿವೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications