ಹೈದರಾಬಾದ್; ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸ್ಥಿತಿಗತಿ ಏನು?
ಹೈದರಾಬಾದ್, ಅಕ್ಟೋಬರ್ 31: ಹೈದರಾಬಾದ್ನಿಂದ ದೇಶದ ಇತರ ಮಹಾನಗರಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಸಾಕಷ್ಟು ಸಮಯದಿಂದ ತೆಲಂಗಾಣದ ಬೇಡಿಕೆಗಳ ಪಟ್ಟಿಯಲ್ಲಿದ್ದರೂ ಯೋಜನೆ ಇನ್ನೂ ಕಾಗದದಲ್ಲಿಯೇ ಇದೆ.
ಹೈದರಾಬಾದ್ನಿಂದ ಬೆಂಗಳೂರು ಅಥವಾ ಮುಂಬೈಗೆ ಸಂಪರ್ಕ ಕಲ್ಪಿಸುವ ಹೈಸ್ಪೀಡ್ ರೈಲಿನ ಕುರಿತು ಚರ್ಚೆ ನಡೆದಿದ್ದರೂ ಸದ್ಯಕ್ಕೆ ಅದು ಚಾಲನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ತೆಲಂಗಾಣ ಹೊರತುಪಡಿಸಿ ಕೇಂದ್ರ ಸರ್ಕಾರಕ್ಕೆ ಹಲವಾರು ಇತರ ಯೋಜನೆಗಳನ್ನು ವಿನಂತಿಸಿದ ಇತರ ರಾಜ್ಯಗಳು, ವಿಶೇಷವಾಗಿ ಚುನಾವಣೆಗೆ ಒಳಪಡುವ ರಾಜ್ಯಗಳು ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಪಡೆಯುತ್ತಿವೆ.
ವಂದೇ ಭಾರತ್ ಎಕ್ಸ್ಪ್ರೆಸ್ ಗರಿಷ್ಠ 180 ಕಿ. ಮೀ. ವೇಗದಲ್ಲಿ ಚಲಿಸಲು ವಿನ್ಯಾಸಗೊಳಿಸಲಾದ ಸೆಮಿ ಹೈ-ಸ್ಪೀಡ್ ರೈಲಾಗಿದೆ. ನವೆಂಬರ್ 10 ರಂದು ಚೆನ್ನೈ- ಬೆಂಗಳೂರು- ಮೈಸೂರು ಮಾರ್ಗದಲ್ಲಿ ದಕ್ಷಿಣ ಭಾರತಕ್ಕೆ ಮೊದಲ ರೈಲಾಗಿ ಚಾಲನೆ ಸಿಗಲಿದೆ. ತೆಲಂಗಾಣ ಸರ್ಕಾರವು ಕೇಂದ್ರಕ್ಕೆ ಪದೇ ಪದೇ ಮನವಿ ಮಾಡಿದ ಹೊರತಾಗಿಯೂ ಕರ್ನಾಟಕಕ್ಕೆ ಮಾತ್ರ ರೈಲು ಸಿಕ್ಕಿದೆ.
ಹೈದರಾಬಾದ್ಗೆ ಒಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಜೂರು ಮಾಡುವಂತೆ ತೆಲಂಗಾಣ ಸರ್ಕಾರ ಭಾರತೀಯ ರೈಲ್ವೆಗೆ ಹಲವಾರು ಮನವಿಗಳನ್ನು ಮಾಡಿತ್ತು. ನಲ್ಗೊಂಡ ಸಂಸದ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಹೈದರಾಬಾದ್-ವಿಜಯವಾಡ ಮಾರ್ಗದಲ್ಲಿ ಬುಲೆಟ್ ರೈಲು ಮಂಜೂರು ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು. ಆದರೆ ಒಂದೇ ಒಂದು ಮನವಿಯನ್ನು ಬಿಜೆಪಿ ಸರ್ಕಾರ ಪರಿಗಣಿಸಿಲ್ಲ.

ನ್ಯಾಷನಲ್ ಟೆಂಡರ್ಗೆ ಅನುಮೋದನೆ ಇಲ್ಲ
ರಾಷ್ಟ್ರೀಯ ರೈಲ್ವೆ ಯೋಜನೆ (ಎನ್ಆರ್ಪಿ) ಪ್ರಕಾರ ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಕಾರಿಡಾರ್ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಇತ್ತು. ಇದರ ಹೊರತಾಗಿ ಮುಂಬೈ-ಪುಣೆ-ಹೈದರಾಬಾದ್ ವಂದೇ ಭಾರತ್ ರೈಲು ಯೋಜನೆಗೆ ವಿವರವಾದ ಯೋಜನಾ ವರದಿಯನ್ನು ತಯಾರಿಸಲು ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಟೆಂಡರ್ ಅನ್ನು ಪಡೆದಿದೆ ಎಂದು ವರದಿಯಾಗಿದೆ.

ಹೈದರಾಬಾದ್ನಿಂದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭರವಸೆ
ಆದರೆ ಈ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಇತ್ತೀಚೆಗೆ ಅದೇ ಹಳೆಯ ಕಥೆಯನ್ನು ಪುನರುಚ್ಚರಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೈದರಾಬಾದ್ನಿಂದ ತಿರುಪತಿಗೆ ಅಥವಾ ಹೈದರಾಬಾದ್ನಿಂದ ವಿಜಯವಾಡದ ಮೂಲಕ ವಿಶಾಖಪಟ್ಟಣಕ್ಕೆ ಹೊಚ್ಚ ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಕ್ಕೆ ಕೊಡುಗೆ
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಇದು ಐದನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದ್ದು, ಒಟ್ಟು 483 ಕಿ.ಮೀ ಕ್ರಮಿಸಲಿದೆ. ಇಲ್ಲಿರುವ ಮುಖ್ಯಾಂಶ ಏನೆಂದರೆ ಮೂರು ಮತ್ತು ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಇತ್ತೀಚೆಗೆ ಚುನಾವಣೆಗೆ ಒಳಪಟ್ಟಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಪ್ರಾರಂಭಿಸಲಾಯಿತು. ಅದೇ ರೀತಿ ಮುಂದಿನ ವರ್ಷ ಕರ್ನಾಟಕದಲ್ಲಿ ಚುನಾವಣೆ ಇದೆ.

ತಾಂತ್ರಿಕ ದೋಷಗಳ ಪರಿಣಾಮ
ವಂದೇ ಭಾರತ್ ರೈಲುಗಳು ಕವಾಚ್ ಎಂಬ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆಯನ್ನು ಹೊಂದಿದೆ ಎಂದು ಹೇಳಲಾಗಿದ್ದರೂ, ಇಲ್ಲಿಯವರೆಗೆ ಪ್ರಾರಂಭಿಸಲಾದವುಗಳು ಎಲ್ಲಾ ದೋಷದ ಕಾರಣಗಳಿಗಾಗಿ ಸುದ್ದಿಯಲ್ಲಿವೆ. ಮೊದಲನೆಯದಾಗಿ, ನವದೆಹಲಿ - ವಾರಣಾಸಿ ಸೆಮಿ-ಹೈ-ಸ್ಪೀಡ್ ರೈಲು ತಾಂತ್ರಿಕ ದೋಷಗಳ ಪರಿಣಾಮವಾಗಿ ವಿಳಂಬವಾಯಿತು. ರೈಲ್ವೆ ಅಧಿಕಾರಿಗಳು ಐದು ಗಂಟೆಗಳ ಕಾಲ ಅಡಚಣೆಗಳನ್ನು ಸರಿಪಡಿಸಲು ಪ್ರಯತ್ನಿಸಿದರೂ ಅವರು ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರಿಗೆ ಪ್ರಯಾಣ ಅವಕಾಶ ಕಲ್ಪಿಸಲಾಯಿತು. ಇದಲ್ಲದೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಜಾನುವಾರುಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾದ ಹಲವಾರು ನಿದರ್ಶನಗಳಿವೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications