ಏನಿದು 377 ಸೆಕ್ಷನ್? ಎಂಥ ಸಂಭೋಗ ಅಪರಾಧವಾಗುತ್ತದೆ?
ಬೆಂಗಳೂರು, ಸೆಪ್ಟೆಂಬರ್ 06 : ಭಾರತೀಯ ದಂಡ ಸಂಹಿತೆ(ಐಪಿಸಿ)ಯ ಸೆಕ್ಷನ್ 377ರ ಮೇಲೆ ಮತ್ತು 158 ವರ್ಷಗಳ ಹಿಂದೆ ರೂಪಿಸಲಾದ ಕಾನೂನನ್ನು ಪ್ರಶ್ನಿಸಿ ಹೂಡಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎಂಬುದರ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.
ಭಾರತದಲ್ಲಿ ಇನ್ನೂ ಬ್ರಿಟಿಷರ ಆಡಳಿತ ನಡೆಯುತ್ತಿದ್ದಾಗಲೇ 1861ರಲ್ಲಿ ಲಾರ್ಡ್ ಮೆಕಾಲೆ ನೇತೃತ್ವದಲ್ಲಿ, ಭಾರತದ ಕಾನೂನು ಪ್ರಾಧಿಕಾರ ನೀಡಿದ ಶಿಫಾರಸಿನ ಮೇರೆಗೆ, ಭಾರತೀಯ ದಂಡ ಸಂಹಿತೆಯನ್ನು ಡ್ರಾಫ್ಟ್ ಮಾಡಲಾಯಿತು. ಅದರಲ್ಲಿನ ಸೆಕ್ಷನ್ 377 ಅಸ್ವಾಭಾವಿಕ ಲೈಂಗಿಕತೆಯ ಅಪರಾಧಕ್ಕೆ ಯಾವ ಶಿಕ್ಷೆಯನ್ನು ನೀಡಬೇಕೆಂದು ವಿವರಿಸುತ್ತದೆ.
ಸೆಕ್ಷನ್ 377 ಏನು ಹೇಳುತ್ತದೆ?
ಅಸಹಜ ಅಪರಾಧಗಳು - ಯಾರಾದರೂ ಸ್ವಇಚ್ಛೆಯಿಂದ ನೈಸರ್ಗಿಕ ಕ್ರಿಯೆಗೆ ವಿರುದ್ಧವಾಗಿ ಪುರುಷ, ಸ್ತ್ರೀ ಅಥವಾ ಪ್ರಾಣಿಯೊಡನೆ ದೈಹಿಕ ಸಂಭೋಗ ನಡೆಸುತ್ತಾರೋ ಅವರು 10 ವರ್ಷ ಜೈಲು ಶಿಕ್ಷೆ ಮತ್ತು ದಂಡಕ್ಕೆ ಅರ್ಹರಾಗಿರುತ್ತಾರೆ. ಈ ಕಾನೂನಿನ ವಿರುದ್ಧವೇ ಈಗ ಸಮರ ಆರಂಭವಾಗಿ, ತೀರ್ಪು ನೀಡುವ ಹಂತಕ್ಕೆ ಬಂದಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ಬಲವಂತದ ದೈಹಿಕ ಸಂಭೋಗಕ್ಕೆ ಸಂಬಂಧಿಸಿದ್ದರೆ, ಸೆಕ್ಷನ್ 377 ಸ್ವಇಚ್ಛೆಯಿದ್ದರೂ ನಿಸರ್ಗಕ್ಕೆ ಅಥವಾ ಪ್ರಕೃತಿಯ ನಿಯಮಗಳಿಗೆ ವಿರುದ್ಧವಾಗಿ ದೈಹಿಕ ಸಂಭೋಗದ ಬಗ್ಗೆ ಹೇಳುತ್ತದೆ.
ಆದರೆ, ಈ 377 ಸೆಕ್ಷನ್ ಪುರುಷ, ಸ್ತ್ರೀ ಸಲಿಂಗ ಕಾಮಿಗಳು, ಲೈಂಗಿಕ ಅಲ್ಪಸಂಖ್ಯಾತರು, ದ್ವಿಲಿಂಗಿಗಳ ಸಮುದಾಯದ ಬಗ್ಗೆಯಾಗಲಿ, ಅವರ ಲೈಂಗಿಕ ಕ್ರಿಯೆಗಳ ಬಗ್ಗೆಯಾಗಲು ನೇರವಾಗಿ ಏನನ್ನೂ ಹೇಳುವುದಿಲ್ಲ.
ಸಲಿಂಗ ಕಾಮ ಮಾತ್ರ ಅಪರಾಧವಲ್ಲ
ಈ ಕಾನೂನಿನಡಿಯಲ್ಲಿ ಸಲಿಂಗ ಕಾಮಿಗಳು ಮಾತ್ರವಲ್ಲ ಭಿನ್ನಲಿಂಗೀಯ ಕಾಮ ಕೂಡ ಅಪರಾಧ ಎಂದು ಹೇಳುತ್ತದೆ. ಇಂಥ ಪ್ರಕೃತಿಗೆ ವಿರುದ್ಧವಾದ ಸಂಭೋಗ ಸ್ವಇಚ್ಛೆಯಿಂದ ನಡೆಸಿದರೆ ಕೂಡ ಅದು ಕಾನೂನಿಗೆ ವಿರುದ್ಧವಾಗಿರುತ್ತದೆ ಮತ್ತು ಅಪರಾಧವಾಗುತ್ತದೆ.
ಶಿಶ್ನ ಮತ್ತು ಯೋನಿ ಕೂಡಿಕೆಯ ಸಂಭೋಗವನ್ನು ಹೊರತುಪಡಿಸಿ ಮತ್ತಾವುದೇ ಸಂಭೋಗವಾಗಲಿ, ಗುದ ಸಂಭೋಗ, ಮೌಖಿಕ ಸಂಭೋಗ ಕೂಡ, ಅದು ಸ್ವಇಚ್ಛೆಯಿಂದ ಮಾಡಿದ್ದರೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಅಡಿಯಲ್ಲಿ ಅಪರಾಧವಾಗುತ್ತದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications