ಏನಿದು 377 ಸೆಕ್ಷನ್? ಎಂಥ ಸಂಭೋಗ ಅಪರಾಧವಾಗುತ್ತದೆ?
ಬೆಂಗಳೂರು, ಸೆಪ್ಟೆಂಬರ್ 06 : ಭಾರತೀಯ ದಂಡ ಸಂಹಿತೆ(ಐಪಿಸಿ)ಯ ಸೆಕ್ಷನ್ 377ರ ಮೇಲೆ ಮತ್ತು 158 ವರ್ಷಗಳ ಹಿಂದೆ ರೂಪಿಸಲಾದ ಕಾನೂನನ್ನು ಪ್ರಶ್ನಿಸಿ ಹೂಡಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎಂಬುದರ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.
ಭಾರತದಲ್ಲಿ ಇನ್ನೂ ಬ್ರಿಟಿಷರ ಆಡಳಿತ ನಡೆಯುತ್ತಿದ್ದಾಗಲೇ 1861ರಲ್ಲಿ ಲಾರ್ಡ್ ಮೆಕಾಲೆ ನೇತೃತ್ವದಲ್ಲಿ, ಭಾರತದ ಕಾನೂನು ಪ್ರಾಧಿಕಾರ ನೀಡಿದ ಶಿಫಾರಸಿನ ಮೇರೆಗೆ, ಭಾರತೀಯ ದಂಡ ಸಂಹಿತೆಯನ್ನು ಡ್ರಾಫ್ಟ್ ಮಾಡಲಾಯಿತು. ಅದರಲ್ಲಿನ ಸೆಕ್ಷನ್ 377 ಅಸ್ವಾಭಾವಿಕ ಲೈಂಗಿಕತೆಯ ಅಪರಾಧಕ್ಕೆ ಯಾವ ಶಿಕ್ಷೆಯನ್ನು ನೀಡಬೇಕೆಂದು ವಿವರಿಸುತ್ತದೆ.
ಸೆಕ್ಷನ್ 377 ಏನು ಹೇಳುತ್ತದೆ?
ಅಸಹಜ ಅಪರಾಧಗಳು - ಯಾರಾದರೂ ಸ್ವಇಚ್ಛೆಯಿಂದ ನೈಸರ್ಗಿಕ ಕ್ರಿಯೆಗೆ ವಿರುದ್ಧವಾಗಿ ಪುರುಷ, ಸ್ತ್ರೀ ಅಥವಾ ಪ್ರಾಣಿಯೊಡನೆ ದೈಹಿಕ ಸಂಭೋಗ ನಡೆಸುತ್ತಾರೋ ಅವರು 10 ವರ್ಷ ಜೈಲು ಶಿಕ್ಷೆ ಮತ್ತು ದಂಡಕ್ಕೆ ಅರ್ಹರಾಗಿರುತ್ತಾರೆ. ಈ ಕಾನೂನಿನ ವಿರುದ್ಧವೇ ಈಗ ಸಮರ ಆರಂಭವಾಗಿ, ತೀರ್ಪು ನೀಡುವ ಹಂತಕ್ಕೆ ಬಂದಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ಬಲವಂತದ ದೈಹಿಕ ಸಂಭೋಗಕ್ಕೆ ಸಂಬಂಧಿಸಿದ್ದರೆ, ಸೆಕ್ಷನ್ 377 ಸ್ವಇಚ್ಛೆಯಿದ್ದರೂ ನಿಸರ್ಗಕ್ಕೆ ಅಥವಾ ಪ್ರಕೃತಿಯ ನಿಯಮಗಳಿಗೆ ವಿರುದ್ಧವಾಗಿ ದೈಹಿಕ ಸಂಭೋಗದ ಬಗ್ಗೆ ಹೇಳುತ್ತದೆ.
ಆದರೆ, ಈ 377 ಸೆಕ್ಷನ್ ಪುರುಷ, ಸ್ತ್ರೀ ಸಲಿಂಗ ಕಾಮಿಗಳು, ಲೈಂಗಿಕ ಅಲ್ಪಸಂಖ್ಯಾತರು, ದ್ವಿಲಿಂಗಿಗಳ ಸಮುದಾಯದ ಬಗ್ಗೆಯಾಗಲಿ, ಅವರ ಲೈಂಗಿಕ ಕ್ರಿಯೆಗಳ ಬಗ್ಗೆಯಾಗಲು ನೇರವಾಗಿ ಏನನ್ನೂ ಹೇಳುವುದಿಲ್ಲ.
ಸಲಿಂಗ ಕಾಮ ಮಾತ್ರ ಅಪರಾಧವಲ್ಲ
ಈ ಕಾನೂನಿನಡಿಯಲ್ಲಿ ಸಲಿಂಗ ಕಾಮಿಗಳು ಮಾತ್ರವಲ್ಲ ಭಿನ್ನಲಿಂಗೀಯ ಕಾಮ ಕೂಡ ಅಪರಾಧ ಎಂದು ಹೇಳುತ್ತದೆ. ಇಂಥ ಪ್ರಕೃತಿಗೆ ವಿರುದ್ಧವಾದ ಸಂಭೋಗ ಸ್ವಇಚ್ಛೆಯಿಂದ ನಡೆಸಿದರೆ ಕೂಡ ಅದು ಕಾನೂನಿಗೆ ವಿರುದ್ಧವಾಗಿರುತ್ತದೆ ಮತ್ತು ಅಪರಾಧವಾಗುತ್ತದೆ.
ಶಿಶ್ನ ಮತ್ತು ಯೋನಿ ಕೂಡಿಕೆಯ ಸಂಭೋಗವನ್ನು ಹೊರತುಪಡಿಸಿ ಮತ್ತಾವುದೇ ಸಂಭೋಗವಾಗಲಿ, ಗುದ ಸಂಭೋಗ, ಮೌಖಿಕ ಸಂಭೋಗ ಕೂಡ, ಅದು ಸ್ವಇಚ್ಛೆಯಿಂದ ಮಾಡಿದ್ದರೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಅಡಿಯಲ್ಲಿ ಅಪರಾಧವಾಗುತ್ತದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications