Get Updates
Get notified of breaking news, exclusive insights, and must-see stories!

ಸಂಸತ್ತಿನ ವಿಶೇಷ ಅಧಿವೇಶನ: ಐತಿಹಾಸಿಕ ಮಸೂದೆಗಳ ಮಂಡನೆಗೆ ಮುಂದಾದ ಕೇಂದ್ರ ಸರ್ಕಾರ- ಯಾವುವು ತಿಳಿಯಿರಿ

ನವದೆಹಲಿ, ಸೆಪ್ಟೆಂಬರ್‌ 07: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನವು ಸೆಪ್ಟೆಂಬರ್ 18 ರಿಂದ ಆರಂಭವಾಗಲಿದ್ದು 5 ದಿನಗಳ ಕಾಲ ನಡೆಯಲಿದೆ. ಈ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಮೋದಿ ಸರ್ಕಾರದ ಅವಧಿ ಮುಂದಿನ ವರ್ಷ ಮೇ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನ ಅಧಿವೇಶನ ಕರೆದಿರುವುದರ ಕುರಿತು ಹಲವಾರು ಚರ್ಚೆಗಳು ಮುನ್ನೆಲೆಗೆ ಬಂದಿವೆ.

What is the agenda for Special Session of Parliament? Know about historic bills to be passed

ಸಂಸತ್ತಿನ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 18 ರಿಂದ 22 ರ ವರೆಗೆ ನಡೆಸಲಾಗುತ್ತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಫಲಪ್ರದ ಚರ್ಚೆಗಳಾಬೇಕೆಂದು ನಾವು ಆಶಿಸುತ್ತೇವೆ ಎಂದು ಜೋಶಿ ಹೇಳಿದ್ದಾರೆ.

ಈ ಅಧಿವೇಶನವನ್ನು ಹೊಸ ಸಂಸತ್ ಭವನದಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಸೂದೆಗಳನ್ನು ಮುಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಶುಕ್ರವಾರದಂದು 'ಒಂದು ರಾಷ್ಟ್ರ, ಒಂದು ಚುನಾವಣೆ', ಶನಿವಾರದಂದು 'ಏಕರೂಪ ನಾಗರಿಕ ಸಂಹಿತೆ ಮಸೂದೆ', ಭಾನುವಾರದಂದು 'ಮಹಿಳಾ ಮೀಸಲಾತಿ ಮಸೂದೆ', ಸೋಮವಾರದಂದು 'ಹಿಂದುಳಿದ ವರ್ಗಗಳ ಉಪ ವರ್ಗೀಕರಣ ಮಸೂದೆ', ಮಂಗಳವಾರದಂದು 'ಇಂಡಿಯಾ-ಭಾರತ್‌ ಹೆಸರು ಬದಲಾವಣೆ' ಗಳನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

What is the agenda for Special Session of Parliament? Know about historic bills to be passed

ಪ್ರತಿಪಕ್ಷಗಳ ವಿರೋಧ

ಇಂಡಿಯಾ-ಭಾರತ್‌ ಹೆಸರು ಬದಲಾವಣೆ ಹಾಗೂ ಒಂದು ದೇಶ, ಒಂದು ಚುನಾವಣೆ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಬಹುದೆಂದು ವಿರೋಧ ಪಕ್ಷಗಳು ಹೇಳಿವೆ. ಇಂಡಿಯಾ ಹೆಸರನ್ನು ಭಾರತ್‌ ಎಂದು ಬದಲಾವಣೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ.

ಒಂದು ದೇಶ, ಒಂದು ಚುನಾವಣೆ ಮೂಲಕ ರಾಜ್ಯ ಸರ್ಕಾರಗಳ ಪರಮಾಧಿಕಾರವನ್ನು ಕಿತ್ತುಕೊಳ್ಳಲು ಕೇಂದ್ರ ಸರ್ಕಾರ ತಂತ್ರ ರೂಪಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಕೇಂದ್ರ ಸರ್ಕಾರದ ನಡೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಲೋಕಸಭೆ ಚುನಾವಣೆಯನ್ನು ಅವಧಿಗೂ ಮೊದಲೇ ನಡೆಸುವುದು ಮೋದಿ ಸರ್ಕಾರದ ಕುತಂತ್ರವಾಗಿದೆ. ಈ ಮೂಲಕ ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ'ಗೆ ಸಮಯ ಕೊಡದೇ ಚುನಾವಣೆಗೆ ಹೋಗುವುದಕ್ಕೆ ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಈ ವರ್ಷದ ಡಿಸೆಂಬರ್‌ನಲ್ಲಿ ಭಾರತೀಯ ಜನತಾ ಪಕ್ಷವು ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಈ ವರ್ಷದ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಡ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಚುನಾವಣಾ ಸಮೀಕ್ಷೆಗಳ ಪ್ರಕಾರ ಬಿಜೆಪಿಗೆ ಹಿನ್ನೆಡೆಯಾಗಲಿದೆ ಎಂದು ತಿಳಿದುಬಂದಿದೆ. ಈ ಫಲಿತಾಂಶಗಳು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅವಧಿಗೂ ಮುನ್ನ ಲೋಕಸಭೆ ಚುನಾವಣೆ ನಡೆಸಬಹುದು ಎಂಬ ಮಾತುಗಳು ಕೇಳಿಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+