ಮನೆ ಬಾಗಿಲಿಗೆ ತೆರಳಿ ಕೊರೊನಾವೈರಸ್ ಲಸಿಕೆ ನೀಡುವುದೆಷ್ಟು ಸರಿ!?
ನವದೆಹಲಿ, ಜೂನ್ 14: "ಭಾರತದಲ್ಲಿ ಪ್ರಸ್ತುತ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಕೊರೊನಾವೈರಸ್ ಲಸಿಕೆ ವಿತರಿಸುವ ಬಗ್ಗೆ ರಾಷ್ಟ್ರೀಯ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿಲ್ಲ" ಎಂದು ಕೇಂದ್ರ ಸರ್ಕಾರವು ಮುಂಬೈ ಹೈಕೋರ್ಟ್ ಎಂದು ಸ್ಪಷ್ಟಪಡಿಸಿದೆ.
"ಕೆಲವು ರಾಜ್ಯ ಸರ್ಕಾರಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ಸಲಹೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಮನೆ ಮನೆಗೆ ತೆರಳಿ ವಿಶೇಷ ವರ್ಗದ ಫಲಾನುಭವಿಗಳಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಆದರೆ ರಾಷ್ಟ್ರೀಯ ನೀತಿ ಪ್ರಕಾರ ಈ ರೀತಿ ಮನೆಗಳಿಗೆ ತೆರಳಿ ಲಸಿಕೆ ನೀಡುವಂತಿಲ್ಲ," ಎಂದು ಕೇಂದ್ರ ಸರ್ಕಾರದ ಅಡಿಷನಲ್ ಸಾಲಿಸಟರ್ ಜನರಲ್ ಅನಿಲ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಹಿರಿಯ ವಯಸ್ಸಿನವರು, ಹಾಸಿಗೆ ಹಿಡಿದು ಓಡಾಡುವುದಕ್ಕೆ ಬಾರದವರು ಅಥವಾ ಈ ರೀತಿಯಾದ ಫಲಾನುಭವಿಗಳ ಮನೆಗಳಿಗೆ ತೆರಳಿ ಕೊವಿಡ್-19 ಲಸಿಕೆ ನೀಡುವುದಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಬಾಂಬೆ ಮಹಾನಗರ ಪಾಲಿಕೆಯು ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ಮತ್ತು ಜಿ ಎಸ್ ಕುಲಕರ್ಣಿ ನೇತೃತ್ವದ ಪೀಠಢಕ್ಕೆ ಕೇಂದ್ರ ಸರ್ಕಾರದ ಪರವಾಗಿ ಅನಿಲ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಜೂನ್ 22ಕ್ಕೆ ನ್ಯಾಯಾಲಯ ಮುಂದೂಡಿದೆ.

ಕೇಂದ್ರ ಸರ್ಕಾರದ ನೀತಿಯನ್ನು ಪಾಲಿಸಲು ಸೂಚನೆ
"ಭಾರತದ ಹಲವು ರಾಜ್ಯಗಳು ಮತ್ತು ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಗಳಲ್ಲಿ ಮನೆ ಮನೆಗಳಿಗೆ ತೆರಳಿ ಕೊವಿಡ್-19 ಲಸಿಕೆಯನ್ನು ವಿತರಿಸುವ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಈ ರೀತಿ ಲಸಿಕೆ ವಿತರಿಸುವುದಕ್ಕೆ ಅವಕಾಶವಿಲ್ಲ. ಕೊರೊನಾವೈರಸ್ ಲಸಿಕೆ ವಿತರಣೆ ಪ್ರಕ್ರಿಯೆಯಲ್ಲಿ ಎಲ್ಲ ರಾಜ್ಯಗಳು ಕೇಂದ್ರ ಸರ್ಕಾರದ ನೀತಿಯನ್ನು ಪಾಲನೆ ಮಾಡಬೇಕು. ಹೈಕೋರ್ಟ್ ಮುಂದಿನ ಕೆಲ ಸಮಯದವರೆಗೂ ನಮ್ಮ ಮನವಿಗೆ ಸಮ್ಮತಿಸಬೇಕಿದೆ. ಏಕೆಂದರೆ ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ನಡೆಸುವುದಕ್ಕೆ ಸಾಧ್ಯವಾಗುವುದಿಲ್ಲ," ಎಂದು ಎಎಸ್ ಜಿ ಅನಿಲ್ ಸಿಂಗ್ ಹೇಳಿದ್ದಾರೆ.

ಮುಂದಿನ ಹಂತಗಳಲ್ಲಿ ಮನೆಮನೆಗೆ ತೆರಳಿ ಲಸಿಕೆ
"ಕೇಂದ್ರ ಸರ್ಕಾರವು ಕೊರೊನಾವೈರಸ್ ಲಸಿಕೆ ವಿತರಣೆಯ ನೀತಿಯನ್ನು ಕಾಲದಿಂದ ಕಾಲಕ್ಕೆ ಬದಲಾಯಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಲಸಿಕೆ ವಿತರಣೆ ವ್ಯಾಪ್ತಿ ಹಾಗೂ ರೀತಿಯನ್ನು ಪರಿಷ್ಕರಿಸಲಾಗುತ್ತದೆ. ಭವಿಷ್ಯದಲ್ಲಿ ಮನೆಗಳಿಗೆ ತೆರಳಿ ಲಸಿಕೆ ನೀಡುವುದಕ್ಕೂ ಅನುಮತಿ ನೀಡಲಾಗುವುದು. ಕೇಂದ್ರ ಸರ್ಕಾರದ ನೀತಿಯು ಕೇವಲ ಸಲಹಾ ಸ್ವರೂಪದಲ್ಲಿದೆ. ಕೇರಳ, ಒಡಿಶಾ ಹಾಗೂ ಜಾರ್ಖಂಡ್ನಂತಹ ರಾಜ್ಯಗಳು ಲಸಿಕೆಯನ್ನು ಹಿಂದಕ್ಕೆ ತಿರುಗಿಸಬೇಕು ಎಂದು ಸರ್ಕಾರ ಕೇಳಿಲ್ಲವಲ್ಲ," ಎಂದು ಅರುಣ್ ಸಿಂಗ್ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ.

ಗೊಂದಲಕ್ಕೆ ಕಾರಣವಾದ ಮಹಾರಾಷ್ಟ್ರ ನಿರ್ಧಾರ
ಮಹಾರಾಷ್ಟ್ರದಲ್ಲಿ ಮನೆ ಮನೆಗಳಿಗೆ ತೆರಳಿ ಕೊರೊನಾವೈರಸ್ ಲಸಿಕೆ ವಿತರಿಸುತ್ತಿರುವ ನಡೆಯ ಬಗ್ಗೆ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಮುಂಬೈ ಮಹಾನಗರ ಪಾಲಿಕೆಯು ಉಲ್ಲೇಖಿಸಿದೆ. ರಾಜ್ಯ ಸರ್ಕಾರವು ಮನೆಗಳಿಗೆ ತೆರಳಿ ಲಸಿಕೆ ವಿತರಿಸುವುದಕ್ಕೆ ಸೂಚಿಸುತ್ತದೆ. ಕೇಂದ್ರ ಸರ್ಕಾರದ ನೀತಿಯಲ್ಲಿ ಈ ನಿಯಮವನ್ನು ಪಾಲಿಸದಂತೆ ಸೂಚಿಸಲಾಗುತ್ತಿದೆ. ಎರಡು ನಿಯಮಗಳನ್ನು ಯಾವ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಎಂದು ಪ್ರಶ್ನ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರದ ನೀತಿಗಳಿಂದ ಆತಂಕ
"ನಾವು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನೇ ಪಾಲನೆ ಮಾಡುತ್ತೇವೆ. ಕೊರೊನಾವೈರಸ್ ಲಸಿಕೆ ಜೊತೆಗೆ ರಾಜ್ಯ ಸರ್ಕಾರವು ಮಾನವ ಸಂಪನ್ಮೂಲದ ಬಗ್ಗೆಯೂ ಆಲೋಚಿಸಬೇಕಿದೆ. ಒಬ್ಬರಿಗೆ ಲಸಿಕೆ ನೀಡಲು ತೆರಳುವುದಕ್ಕೆ ಕನಿಷ್ಠ ಮೂವರು ಸಿಬ್ಬಂದಿ ಜೊತೆಗೆ ಆಂಬುಲೆನ್ಸ್ ಹಾಗೂ ಲಸಿಕೆ ವ್ಯರ್ಥವಾಗದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ," ಎಂದು ಬಿಎಂಸಿ ಸಲಹೆಗಾರ ಅನಿಲ್ ಸಖ್ರೆ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications