ಜಿನೀವಾ ಒಪ್ಪಂದ ಎಂದರೇನು?, ಪ್ರಮುಖ ಅಂಶಗಳು ಏನು?
ಬೆಂಗಳೂರು, ಫೆಬ್ರವರಿ 27 : ಜಿನೀವಾ ಒಪ್ಪಂದದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಂದು ಭಾರಿ ಚರ್ಚೆ ನಡೆಯುತ್ತಿದೆ. ಅದರಲ್ಲೂ ಭಾರತೀಯ ಪೈಲೆಟ್ ಪಾಕಿಸ್ತಾನದ ವಶದಲ್ಲಿದ್ದಾರೆ ಎಂಬ ವಿಚಾರ ತಿಳಿದ ಬಳಿಕ ಹೆಚ್ಚಿನ ಚರ್ಚೆಗಳು ಆರಂಭವಾಗಿವೆ.
ಯುದ್ಧದ ಸನ್ನಿವೇಶದಲ್ಲಿ ಸೈನಿಕರನ್ನು ಮತ್ತು ಜನರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಬಗ್ಗೆ ಜಿನೀವಾ ಒಪ್ಪಂದ ಹಲವು ಮಾರ್ಗಸೂಚಿಗಳನ್ನು ಒಳಗೊಂಡಿದೆ. ಈಗ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬಿಗುವಿನ ವಾತಾವರಣವಿದೆ.
ಜಿನೀವಾ ಒಪ್ಪಂದ ಯುದ್ಧದ ಸಂದರ್ಭದಲ್ಲಿ ಸೆರೆ ಸಿಕ್ಕ ಸೈನಿಕರನ್ನು ಹೇಗೆ ನಡೆಸಿಕೊಳ್ಳಬೇಕು ಎಂದು ಹೇಳುತ್ತದೆ. ಗಾಯಗೊಂಡ ಸೈನಿಕರು ಹಕ್ಕುಗಳು, ಯುದ್ಧ ಭೂಮಿಯ ಸುತ್ತಮುತ್ತ ಸೆರೆ ಸಿಕ್ಕ ಜನರ ಹಕ್ಕುಗಳ ರಕ್ಷಣೆ ಬಗ್ಗೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡಿದೆ.

1949ರ 2ನೇ ಮಹಾಯುದ್ಧದ ಸಂದರ್ಭದಲ್ಲಿ ಜಿನೀವಾ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಇವುಗಳಲ್ಲಿ ಪ್ರಮುಖವಾದ ನಾಲ್ಕು ಮಾರ್ಗಸೂಚಿಗಳನ್ನು ದೇಶಗಳು ಪಾಲಿಸಬೇಕಾಗಿದೆ.
3 ತಿದ್ದುಪಡಿ : 1949ರಲ್ಲಿ ನಡೆದ ಒಪ್ಫಂದಕ್ಕೆ ಮೂರು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ. ಈ ಶಿಷ್ಟಚಾರಗಳನ್ನು ಪಾಲನೆ ಮಾಡಬೇಕು ಎಂದು ತಿದ್ದುಪಡಿ ಹೇಳುತ್ತದೆ.
* ಶಿಷ್ಟಾಚಾರ 1 (1977) : ಶಿಷ್ಟಾಚಾರ 1 ಅಂತರಾಷ್ಟ್ರೀಯ ಶಸ್ತ್ರ ಸಂಘರ್ಷಕ್ಕೆ ಒಳಪಟ್ಟಿದ್ದು.
* ಶಿಷ್ಟಾಚಾರ 2 (1977) : ಶಿಷ್ಟಾಚಾರ 2 ಅಂತರಾಷ್ಟ್ರೀಯ ವಲ್ಲದ ಶಸ್ತ್ರ ಸಂಘರ್ಷಕ್ಕೆ ಒಳಪಟ್ಟಿದೆ.
* ಶಿಷ್ಟಾಚಾರ 3 (2005) : ಶಿಷ್ಟಾಚಾರ 3 ವಿಶಿಷ್ಟ ಗುರುತಿನ ಲಾಂಚನವನ್ನು ಒಳಪಡಿಸಿಕೊಳ್ಳುವ ಬಗ್ಗೆ ಇದೆ.
196 ರಾಷ್ಟ್ರಗಳು 1949ರ ಒಪ್ಪಂದಕ್ಕೆ ಸಹಿ ಹಾಕಿವೆ. 2010ರಲ್ಲಿ 170 ರಾಷ್ಟ್ರಗಳು ಶಿಷ್ಟಾಚಾರ 1 ಮತ್ತು 165 ರಾಷ್ಟ್ರಗಳು ಶಿಷ್ಟಾಚಾರ 2ಕ್ಕೆ ಒಪ್ಪಿಗೆ ನೀಡಿವೆ.
ಒಪ್ಪಂದದ ಪ್ರಮುಖ ಅಂಶ 1 : ಜಿನೀವಾ ಒಪ್ಪಂದ ಮೊದಲನೆ ಅಂಶ ಗಾಯಗೊಂಡ ಸೈನಿಕರಿಗೆ ಸಂಬಂಧಿಸಿದೆ. ಯುದ್ಧದ ಸಂದರ್ಭದಲ್ಲಿ ಗಾಯಗೊಂಡ ಸೈನಿಕನಿಗೆ ಧರ್ಮ, ಬಣ್ಣ, ಲಿಂಗ ಬೇಧವಿಲ್ಲದೇ ಚಿಕಿತ್ಸೆ ನೀಡಬೇಕು. ಸೆರೆ ಸಿಕ್ಕ ಸೈನಿಕರನ್ನು ಹಿಂಸೆ ಮಾಡುವುದು ಹತ್ಯೆ ಮಾಡುವುದನ್ನು ನಿಷೇಧಿಸಿದೆ.
ಒಪ್ಪಂದದ ಅಂಶ 2 : ಈ ಅಂಶದ ಪ್ರಕಾರ ನೌಕಾಪಡೆಯ ಹಡಗು ಮುಳುಗಡೆಯಾದರೆ ಸೈನಿಕರ ರಕ್ಷಣೆ ಬಗ್ಗೆ ಇದೆ. ವಿಮಾನ ಪತನವಾದಾಗಲೂ ನಿಯಮ ಪಾಲನೆ ಮಾಡಬೇಕು ಎಂದಿದೆ. ಹಡಗಿನಲ್ಲಿರುವ ಆಸ್ಪತ್ರೆಗಳಿಗೆ ವಿಶೇಷ ರಕ್ಷಣೆ ನೀಡಬೇಕು ಎಂದು ಹೇಳಿದೆ.
ಒಪ್ಪಂದದ ಅಂಶ 3 : ಯುದ್ಧದ ಸಂದರ್ಭದಲ್ಲಿ ಸೆರೆ ಸಿಕ್ಕ ಖೈದಿಯ ಬಗ್ಗೆ 3ನೇ ಅಂಶ ಒಳಗೊಂಡಿದೆ. ಖೈದಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಕೈದಿಯ ಹೆಸರು, ಹುದ್ದೆ, ಸೀರಿಯಲ್ ನಂಬರ್ಗಳನ್ನು ಎದುರಾಳಿಗಳ ಜೊತೆ ಹಂಚಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಅವರನ್ನು ಹಿಂಸೆ ಮಾಡುವಂತಿಲ್ಲ.
ಒಪ್ಪಂದದ ಅಂಶ 4 : ಯುದ್ಧದ ಸಂದರ್ಭದಲ್ಲಿ ಜನರು ಸೆರೆ ಸಿಕ್ಕರೆ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳುವಂತಿಲ್ಲ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications