ಜಿನೀವಾ ಒಪ್ಪಂದ ಎಂದರೇನು?, ಪ್ರಮುಖ ಅಂಶಗಳು ಏನು?
ಬೆಂಗಳೂರು, ಫೆಬ್ರವರಿ 27 : ಜಿನೀವಾ ಒಪ್ಪಂದದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಂದು ಭಾರಿ ಚರ್ಚೆ ನಡೆಯುತ್ತಿದೆ. ಅದರಲ್ಲೂ ಭಾರತೀಯ ಪೈಲೆಟ್ ಪಾಕಿಸ್ತಾನದ ವಶದಲ್ಲಿದ್ದಾರೆ ಎಂಬ ವಿಚಾರ ತಿಳಿದ ಬಳಿಕ ಹೆಚ್ಚಿನ ಚರ್ಚೆಗಳು ಆರಂಭವಾಗಿವೆ.
ಯುದ್ಧದ ಸನ್ನಿವೇಶದಲ್ಲಿ ಸೈನಿಕರನ್ನು ಮತ್ತು ಜನರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಬಗ್ಗೆ ಜಿನೀವಾ ಒಪ್ಪಂದ ಹಲವು ಮಾರ್ಗಸೂಚಿಗಳನ್ನು ಒಳಗೊಂಡಿದೆ. ಈಗ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬಿಗುವಿನ ವಾತಾವರಣವಿದೆ.
ಜಿನೀವಾ ಒಪ್ಪಂದ ಯುದ್ಧದ ಸಂದರ್ಭದಲ್ಲಿ ಸೆರೆ ಸಿಕ್ಕ ಸೈನಿಕರನ್ನು ಹೇಗೆ ನಡೆಸಿಕೊಳ್ಳಬೇಕು ಎಂದು ಹೇಳುತ್ತದೆ. ಗಾಯಗೊಂಡ ಸೈನಿಕರು ಹಕ್ಕುಗಳು, ಯುದ್ಧ ಭೂಮಿಯ ಸುತ್ತಮುತ್ತ ಸೆರೆ ಸಿಕ್ಕ ಜನರ ಹಕ್ಕುಗಳ ರಕ್ಷಣೆ ಬಗ್ಗೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡಿದೆ.

1949ರ 2ನೇ ಮಹಾಯುದ್ಧದ ಸಂದರ್ಭದಲ್ಲಿ ಜಿನೀವಾ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಇವುಗಳಲ್ಲಿ ಪ್ರಮುಖವಾದ ನಾಲ್ಕು ಮಾರ್ಗಸೂಚಿಗಳನ್ನು ದೇಶಗಳು ಪಾಲಿಸಬೇಕಾಗಿದೆ.
3 ತಿದ್ದುಪಡಿ : 1949ರಲ್ಲಿ ನಡೆದ ಒಪ್ಫಂದಕ್ಕೆ ಮೂರು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ. ಈ ಶಿಷ್ಟಚಾರಗಳನ್ನು ಪಾಲನೆ ಮಾಡಬೇಕು ಎಂದು ತಿದ್ದುಪಡಿ ಹೇಳುತ್ತದೆ.
* ಶಿಷ್ಟಾಚಾರ 1 (1977) : ಶಿಷ್ಟಾಚಾರ 1 ಅಂತರಾಷ್ಟ್ರೀಯ ಶಸ್ತ್ರ ಸಂಘರ್ಷಕ್ಕೆ ಒಳಪಟ್ಟಿದ್ದು.
* ಶಿಷ್ಟಾಚಾರ 2 (1977) : ಶಿಷ್ಟಾಚಾರ 2 ಅಂತರಾಷ್ಟ್ರೀಯ ವಲ್ಲದ ಶಸ್ತ್ರ ಸಂಘರ್ಷಕ್ಕೆ ಒಳಪಟ್ಟಿದೆ.
* ಶಿಷ್ಟಾಚಾರ 3 (2005) : ಶಿಷ್ಟಾಚಾರ 3 ವಿಶಿಷ್ಟ ಗುರುತಿನ ಲಾಂಚನವನ್ನು ಒಳಪಡಿಸಿಕೊಳ್ಳುವ ಬಗ್ಗೆ ಇದೆ.
196 ರಾಷ್ಟ್ರಗಳು 1949ರ ಒಪ್ಪಂದಕ್ಕೆ ಸಹಿ ಹಾಕಿವೆ. 2010ರಲ್ಲಿ 170 ರಾಷ್ಟ್ರಗಳು ಶಿಷ್ಟಾಚಾರ 1 ಮತ್ತು 165 ರಾಷ್ಟ್ರಗಳು ಶಿಷ್ಟಾಚಾರ 2ಕ್ಕೆ ಒಪ್ಪಿಗೆ ನೀಡಿವೆ.
ಒಪ್ಪಂದದ ಪ್ರಮುಖ ಅಂಶ 1 : ಜಿನೀವಾ ಒಪ್ಪಂದ ಮೊದಲನೆ ಅಂಶ ಗಾಯಗೊಂಡ ಸೈನಿಕರಿಗೆ ಸಂಬಂಧಿಸಿದೆ. ಯುದ್ಧದ ಸಂದರ್ಭದಲ್ಲಿ ಗಾಯಗೊಂಡ ಸೈನಿಕನಿಗೆ ಧರ್ಮ, ಬಣ್ಣ, ಲಿಂಗ ಬೇಧವಿಲ್ಲದೇ ಚಿಕಿತ್ಸೆ ನೀಡಬೇಕು. ಸೆರೆ ಸಿಕ್ಕ ಸೈನಿಕರನ್ನು ಹಿಂಸೆ ಮಾಡುವುದು ಹತ್ಯೆ ಮಾಡುವುದನ್ನು ನಿಷೇಧಿಸಿದೆ.
ಒಪ್ಪಂದದ ಅಂಶ 2 : ಈ ಅಂಶದ ಪ್ರಕಾರ ನೌಕಾಪಡೆಯ ಹಡಗು ಮುಳುಗಡೆಯಾದರೆ ಸೈನಿಕರ ರಕ್ಷಣೆ ಬಗ್ಗೆ ಇದೆ. ವಿಮಾನ ಪತನವಾದಾಗಲೂ ನಿಯಮ ಪಾಲನೆ ಮಾಡಬೇಕು ಎಂದಿದೆ. ಹಡಗಿನಲ್ಲಿರುವ ಆಸ್ಪತ್ರೆಗಳಿಗೆ ವಿಶೇಷ ರಕ್ಷಣೆ ನೀಡಬೇಕು ಎಂದು ಹೇಳಿದೆ.
ಒಪ್ಪಂದದ ಅಂಶ 3 : ಯುದ್ಧದ ಸಂದರ್ಭದಲ್ಲಿ ಸೆರೆ ಸಿಕ್ಕ ಖೈದಿಯ ಬಗ್ಗೆ 3ನೇ ಅಂಶ ಒಳಗೊಂಡಿದೆ. ಖೈದಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಕೈದಿಯ ಹೆಸರು, ಹುದ್ದೆ, ಸೀರಿಯಲ್ ನಂಬರ್ಗಳನ್ನು ಎದುರಾಳಿಗಳ ಜೊತೆ ಹಂಚಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಅವರನ್ನು ಹಿಂಸೆ ಮಾಡುವಂತಿಲ್ಲ.
ಒಪ್ಪಂದದ ಅಂಶ 4 : ಯುದ್ಧದ ಸಂದರ್ಭದಲ್ಲಿ ಜನರು ಸೆರೆ ಸಿಕ್ಕರೆ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳುವಂತಿಲ್ಲ.
-
ಭಾರತದ ಸನಿಹವೇ ಮುಳುಗಿತು ಇರಾನ್ ಯುದ್ಧನೌಕೆ: ವಿಶಾಖಪಟ್ಟಣದಿಂದ ಹಿಂದಿರುಗುತ್ತಿದ್ದ ಹಡಗಿಗೆ ಅಮೆರಿಕ ಬಾಂಬ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ












Click it and Unblock the Notifications