ಏನಿದು ತ್ರಿವಳಿ ತಲಾಖ್? ಏಕೆ ಇದರ ಬಗ್ಗೆ ಚರ್ಚೆ?
ಬೆಂಗಳೂರು, ಆಗಸ್ಟ್ 22: ವಿವಾದಿತ ತ್ರಿವಳಿ ತಲಾಖ್ಗೆ ಸಂಬಂಧಿಸಿದಂತೆ ಬಹು ನಿರೀಕ್ಷಿತ ತೀರ್ಪನ್ನು ಸುಪ್ರೀಂ ಕೋರ್ಟಿನ ಐವರು ಸದಸ್ಯರ ನ್ಯಾಯಪೀಠ ಮಂಗಳವಾರ(ಆಗಸ್ಟ್ 22)ದಂದು ನೀಡಲಿದೆ. ಈ ನಡುವೆ ಇದರ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಏನಿದು ತ್ರಿವಳಿ ತಲಾಖ್? ಯಾಕೆ ಇಷ್ಟು ಚರ್ಚೆ?
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ನೇತೃತ್ವದ ಐದು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ನ್ಯಾಯಪೀಠ 6 ದಿನಗಳ ಕಾಲ ವಿಚಾರಣೆ ನಡೆಸಿ ಮೇ 18ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಆಗಸ್ಟ್ 22ರಂದು ಈ ಬಗ್ಗೆ ಅಂತಿಮ ತೀರ್ಪು ಹೊರ ಬರಲಿದೆ.
ಉತ್ತರಾಖಂಡ್ ನಿವಾಸಿ ಷಯಾರ ಬಾನು ಅವರು ಹಾಕಿರುವ ಅರ್ಜಿ ಸೇರಿದಂತೆ ಒಟ್ಟು 6 ಅರ್ಜಿಗಳ ವಿಚಾರಣೆ ಬಳಿಕ ತೀರ್ಪು ಹೊರ ಬರುತ್ತಿದೆ. ಮುಸ್ಲಿಂ ಸಮುದಾಯದ ವ್ಯಕ್ತಿ ಕೇವಲ ಮೂರು ಬಾರಿ ತಲಾಖ್ ಎಂದು ಹೇಳಿ ಹೆಂಡ್ತಿಗೆ ವಿಚ್ಛೇದನ ನೀಡುವುದು ಕಾನೂನು ಬಾಹಿರ ಹಾಗೂ ಅಸಂವಿಧಾನಿಕವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ತ್ರಿವಳಿ ತಲಾಕ್ ಎಂಬುದು ಮಹಿಳೆಯರ ಹಕ್ಕನ್ನು ಅವರಿಗೆ ಹಿಂದಿರುಗಿಸುವ ವಿಚಾರ. ಆದ್ದರಿಂದ ಈ ವಿಚಾರಣೆಗೆ ಒಬ್ಬ ಮಹಿಳಾ ಜಡ್ಜ್ ಕೂಡ ಇದ್ದರೆ ಚೆನ್ನಾಗಿತ್ತು ಎಂಬ ಮಾತುಗಳು ಕೇಳಿ ಬಂದಿವೆ.

ತ್ರಿವಳಿ ತಲಾಖ್ : ವಿವಾಹಿತ ಮಹಿಳೆಗೆ ವಿವಾಹ ವಿಚ್ಛೇದನ ನೀಡುವ ಒಂದು ರೀತಿಯ ಪದ್ಧತಿಯಾಗಿದೆ. ಈ ಪದ್ಧತಿಯಂತೆ ವಿವಾಹಿತ ಮುಸ್ಲಿಂ ವ್ಯಕ್ತಿಯು ತನ್ನ ಪತ್ನಿಗೆ ಕಾನೂನು ಮಾನ್ಯ ವಿಚ್ಛೇದನ ನೀದಿದ್ದೇನೆ ಎಂದು ಘೋಷಿಸಬಹುದಾಗಿದೆ.
ಇದು ಮೌಖಿಕವಾಗಿರಬಹುದು ಅಥವಾ ಲಿಖಿತರೂಪದಲ್ಲಿರಬಹುದು ಅಥವಾ ಇ ಮಾಧ್ಯಮದ ಮೂಲಕ ಎಸ್ಎಂಎಸ್, ಟೆಲಿಫೋನ್ ಕಾಲ್, ಇಮೇಲ್ ಅಥವಾ ಫೇಸ್ ಬುಕ್, ವಾಟ್ಸಪ್ ಮೂಲಕ ಕೂಡಾ ತಲಾಖ್ ತಲಾಖ್ ತಲಾಖ್ ಎಂದು ಮೂರು ಬಾರಿ ಕಳಿಸಿ ವಿಚ್ಛೇದನ ನೀಡಿದ ಉದಾಹರಣೆಗಳಿವೆ.
ವಿಚ್ಛೇದನ ನೀಡುವ ವ್ಯಕ್ತಿಯು ಯಾವುದೇ ಕಾರಣ ನೀಡುವ ಅಗತ್ಯವಿಲ್ಲ. ವಿಚ್ಛೇದನ ನೀಡುವ ಸಮಯದಲ್ಲಿ ಹಾಜರಿರಬೇಕು ಎಂಬ ನಿಯಮವಿಲ್ಲ. ಇದ್ದಾತ್ ಅವಧಿಯ ನಂತರ ಪತ್ನಿಯು ಗರ್ಭಿಣಿಯಾಗಿದ್ದಾರೆ ವಿಚ್ಛೇದನದ ವಿಧಾನ ಬದಲಾಗಲಿದೆ.
ಈ ಸಂದರ್ಭದಲ್ಲಿ ದಂಪತಿಗೆ ಸಲಹಾ ಸಮಿತಿಯ ಮುಂದೆ ಹಾಜರಾಗಿ, ಮತ್ತೆ ಒಂದಾಗುವ ಅವಕಾಶವಿರುತ್ತದೆ. ಆದರೆ, ಒಂದೇ ಬಾರಿ ಮೂರು ತಲಾಖ್ ಹೇಳುವ ಪ್ರಕ್ರಿಯೆ ಇನ್ನೂ ಜಾರಿಯಲ್ಲಿದೆ. ಇದಕ್ಕೆ ಯಾವುದೇ ನಿರ್ಬಂಧ ಹೇರಲಾಗಿಲ್ಲ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications