'ರಾಹುಲ್ ಗಾಂಧಿ ಗೋತ್ರ ಯಾವುದು? ಅವರು ತೊಡುವ ಜನಿವಾರ ಯಾವುದು?'
ಇಂದೋರ್, ಅಕ್ಟೋಬರ್ 29: "ರಾಹುಲ್ ಗಾಂಧಿ ಅವರು ಜನಿವಾರ ಧರಿಸುವುದಾದರೆ, ಅವರು ಯಾವರೀತಿಯ ಜನಿವಾರ(ಯಜ್ಞೋಪವಿತ) ಧರಿಸುತ್ತಾರೆ? ಅವರ ಗೋತ್ರ ಯಾವುದು?" ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ ರಾಹುಲ್ ಗಾಂಧಿ ಅವರನ್ನು ಪಾತ್ರ ಅಣಕಿಸಿದರು.
ಚುನಾವಣೆಯ ಸಮಯದಲ್ಲಿ ಮಾತ್ರವೇ ರಾಹುಲ್ ಗಾಂಧಿ ಅವರ ಟೆಂಪಲ್ ರನ್ ಆರಂಭವಾಗುತ್ತದೆ. ಆದ್ದರಿಂದ ಅವರ ಗೋತ್ರ ಯಾವುದು ಮತ್ತು ಯಾವ ರೀತಿಯ ಜನಿವಾರ ಧರಿಸುತ್ತಾರೆ ಎಂಬುದನ್ನು ತಿಳಿಯಬೇಕಿದೆ ಎಂದು ಅವರು ಅಣಕವಾಡಿದ್ದಾರೆ.

ಯಾವ ಗೋತ್ರದವರು ರಾಹುಲ್?
ಜನಿವಾರ ಎಂಬುದು ಪವಿತ್ರ ದಾರ. ಅದನ್ನು ಆಸ್ತಿಕ, ಭಕ್ತ ಹಿಂದು ಧರಿಸುತ್ತಾನೆ. ಗೋತ್ರ ಎಂದರೆ ಯಾವ ಋಷಿ ಪರಂಪರೆಯ ಮೂಲದಿಂದ ಬಂದವರು ಎಂಬುದನ್ನು ತಿಳಿದುಕೊಳ್ಳುವುದಕ್ಕಿರುವ ಸಂಗತಿ. ಆದ್ದರಿಂದ ರಾಹುಲ್ ಗಾಂಧಿ ಅವರು ಯಾವ ಗೋತ್ರದವರು ಎಂಬುದನ್ನು ಹೇಳಲಿ, ಅವರು ಯಾವ ರೀತಿಯ ಜನಿವಾರ ಧರಿಸುತ್ತಾರೆ ಎಂಬುದನ್ನೂ ತಿಳಿಸಲಿ ಎಂದು ಪಾತ್ರ ಆಗ್ರಹಿಸಿದರು.

ಪ್ರಧಾನಿಯನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್!
ಪ್ರಧಾನಿ ನರೇಂದ್ರ ಮೋದಿಯವರು ಶಿವಲಿಂಗದ ಮೇಲಿರುವ ಚೇಳಿನ ಹಾಗೆ. ಅದನ್ನು ಬರೀ ಕೈಯಲ್ಲಿ ಮುಟ್ಟುವುದೂ ಅಪಾಯ, ಚಪ್ಪಲಿಯಿಂದ ಹೊಡೆದು ಹಾಕುವುದಕ್ಕೂ ಸಾಧ್ಯವಿಲ್ಲ! ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ನೀಡಿದ ಹೇಳಿಕೆ ಸಾಕಷ್ಟ ವಿವಾದ ಸೃಷ್ಟಿಸಿತ್ತು. ಕಾಂಗ್ರೆಸ್ ನ ಈ ಹೇಳಿಕೆಯ ನಂತರ ಒಂದೇ ದಿನದಲ್ಲಿ ಬಿಜೆಪಿ ರಾಹುಲ್ ಗಾಂಧಿಯವರ ಗೋತ್ರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದೆ!

ಶಶಿ ತರೂರ್ ಉಚ್ಚಾಟನೆಗೆ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದಲ್ಲದೆ, ಶಿವಲಿಂಗಕ್ಕೂ ಅವಮಾನ ಮಾಡಿದ ಶಶಿ ತರೂರ್ ಅವರನ್ನು ಪಕ್ಷದಿಂದ ಕಿತ್ತೆಸೆಯುವಂತೆಯೂ ಸಂಬಿತ್ ಪಾತ್ರ ಒತ್ತಾಯಿಸಿದರು. ಆರೆಸ್ಸೆಸ್ ನ ಕೆಲ ಮುಖಂಡರಿಗೇ ಪ್ರಧಾನಿ ಮೋದಿಯವರ ನಡೆ ಇಷ್ಟವಾಗುತ್ತಿಲ್ಲ, ಅವರನ್ನು ನಿಯಂತ್ರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಶಶಿ ತರೂರ್, ನಂತರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದರು.

ಚುನಾವಣೆ ನೆಲದಲ್ಲಿ ಕೆಸರೆರಚಾಟ ಜೋರು!
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು ವಿಧಾನಸಭಾ ಕ್ಷೇತ್ರಗಳು 230. ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116. ಚುನಾವಣೆಯ ಹಿನ್ನೆಲೆಯಲ್ಲಿ ಪರಸ್ಪರ ರಾಜಕೀಯ ಪಕ್ಷಗಳು ಕೆಸರೆರಚಾಟ ಆರಂಭಿಸಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications